AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಅಳಿಯ, ಮಗಳ ಜಗಳ; ಕಲಹ ನಿವಾರಿಸಲು ಅಳಿಯನ ಮನೆಗೆ ಹೋದ ಅತ್ತೆಯ ಕೊಲೆ

ಮಗಳು ಮತ್ತು ಅಳಿಯ ನಡುವೆ ಜಗಳ ನಡೆಯುತ್ತಿತ್ತು. ಕೌಟುಂಬಿಕ ಕಲಹ ಸರಿಪಡಿಸಲು ಅಳಿಯನ ಮನೆಗೆ ಅತ್ತೆ ಬಂದಿದ್ದಾರೆ. ಈ ವೇಳೆ ಅಳಿಯ ದೊಣ್ಣೆಯಿಂದ ಅತ್ತೆಗೆ ಥಳಿಸಿದ್ದು, ಗಂಭೀರವಾಗಿ ಗಾಯಗೊಂಡ ಆಕೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ.

ತುಮಕೂರು: ಅಳಿಯ, ಮಗಳ ಜಗಳ; ಕಲಹ ನಿವಾರಿಸಲು ಅಳಿಯನ ಮನೆಗೆ ಹೋದ ಅತ್ತೆಯ ಕೊಲೆ
ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ಅತ್ತೆಯನ್ನೇ ಕೊಲೆ ಮಾಡಿದ ಅಳಿಯImage Credit source: adobe stock
ಮಹೇಶ್ ಇ, ಭೂಮನಹಳ್ಳಿ
| Updated By: Rakesh Nayak Manchi|

Updated on:Feb 11, 2024 | 8:57 AM

Share

ತುಮಕೂರು, ಫೆ.11: ಮಗಳು ಮತ್ತು ಅಳಿಯನ ನಡುವೆ ನಡೆಯುತ್ತಿದ್ದ ಕೌಟುಂಬಿಕ ಕಲಹವನ್ನು ನಿವಾರಿಸಲು ಹೋದ ಅತ್ತೆಯನ್ನೇ ಅಳಿಯ ದೊಣ್ಣೆಯಿಂದ ಹೊಡೆದು ಕೊಲೆ (Murder) ಮಾಡಿದ ಘಟನೆ ತುಮಕೂರು (Tumkur) ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ನಡೆದಿದೆ. ಅಶ್ವಿತ್ ಉನ್ನಿಸಾ (58) ಕೊಲೆಯಾದ ಮಹಿಳೆಯಾಗಿದ್ದು, ಸೈಯದ್ ಸುಹೇಲ್ ಕೊಲೆಗೈದ ಆರೋಪಿಯಾಗಿದ್ದಾನೆ.

ಸೈಯದ್ ಸುಹೇಲ್ ಮತ್ತು ಪತ್ನಿಯ ನಡುವೆ ಜಗಳ ನಡೆದಿದ್ದು, ಈ ಜಗಳ ವಿಕೋಪಕ್ಕೆ ತಿರುಗಿದ ಹಿನ್ನೆಲೆ ಪತಿ ಗಲಾಟೆ ಮಾಡುತ್ತಿದ್ದಾನೆ ಎಂದು ತುಮಕೂರು ತಾಲೂಕಿನ ಬೆಳಗುಂಬದಲ್ಲಿರುವ ತನ್ನ ತಾಯಿ ಅಶ್ವಿತ್ ಉನ್ನಿಸಾಗೆ ಮಗಳು ಫೋನ್ ಮಾಡಿದ್ದಳು. ಹೀಗಾಗಿ ಕಲಹ ನಿವಾರಿಸಲು ಅಳಿಯನ ಮನೆಗೆ ಬಂದಿದ್ದ ಅಶ್ವಿತ್ ಉನ್ನಿಸಾ ಹೋಗಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಮಹಿಳೆಯ ಬರ್ಬರ ಕೊಲೆ ಮಾಡಿದ ಪ್ರಿಯಕರ ರೂಮ್​ಗೆ ಬೀಗ ಜಡಿದು ಪರಾರಿ

ಈ ವೇಳೆ ಅಳಿಯ ಸೈಯದ್ ಸುಹೇಲ್ ಅತ್ತೆ ಮೇಲೆ ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಕೂಡಲೇ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಉನ್ನಿಸಾ ಮೃತಪಟ್ಟಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:57 am, Sun, 11 February 24

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು