ತುಮಕೂರು: ಅಳಿಯ, ಮಗಳ ಜಗಳ; ಕಲಹ ನಿವಾರಿಸಲು ಅಳಿಯನ ಮನೆಗೆ ಹೋದ ಅತ್ತೆಯ ಕೊಲೆ

ಮಗಳು ಮತ್ತು ಅಳಿಯ ನಡುವೆ ಜಗಳ ನಡೆಯುತ್ತಿತ್ತು. ಕೌಟುಂಬಿಕ ಕಲಹ ಸರಿಪಡಿಸಲು ಅಳಿಯನ ಮನೆಗೆ ಅತ್ತೆ ಬಂದಿದ್ದಾರೆ. ಈ ವೇಳೆ ಅಳಿಯ ದೊಣ್ಣೆಯಿಂದ ಅತ್ತೆಗೆ ಥಳಿಸಿದ್ದು, ಗಂಭೀರವಾಗಿ ಗಾಯಗೊಂಡ ಆಕೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ.

ತುಮಕೂರು: ಅಳಿಯ, ಮಗಳ ಜಗಳ; ಕಲಹ ನಿವಾರಿಸಲು ಅಳಿಯನ ಮನೆಗೆ ಹೋದ ಅತ್ತೆಯ ಕೊಲೆ
ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ಅತ್ತೆಯನ್ನೇ ಕೊಲೆ ಮಾಡಿದ ಅಳಿಯ
Image Credit source: adobe stock
ಮಹೇಶ್ ಇ, ಭೂಮನಹಳ್ಳಿ Edited By: Rakesh Nayak Manchi

Updated on: Feb 11, 2024 | 8:57 AM

ತುಮಕೂರು, ಫೆ.11: ಮಗಳು ಮತ್ತು ಅಳಿಯನ ನಡುವೆ ನಡೆಯುತ್ತಿದ್ದ ಕೌಟುಂಬಿಕ ಕಲಹವನ್ನು ನಿವಾರಿಸಲು ಹೋದ ಅತ್ತೆಯನ್ನೇ ಅಳಿಯ ದೊಣ್ಣೆಯಿಂದ ಹೊಡೆದು ಕೊಲೆ (Murder) ಮಾಡಿದ ಘಟನೆ ತುಮಕೂರು (Tumkur) ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ನಡೆದಿದೆ. ಅಶ್ವಿತ್ ಉನ್ನಿಸಾ (58) ಕೊಲೆಯಾದ ಮಹಿಳೆಯಾಗಿದ್ದು, ಸೈಯದ್ ಸುಹೇಲ್ ಕೊಲೆಗೈದ ಆರೋಪಿಯಾಗಿದ್ದಾನೆ.

ಸೈಯದ್ ಸುಹೇಲ್ ಮತ್ತು ಪತ್ನಿಯ ನಡುವೆ ಜಗಳ ನಡೆದಿದ್ದು, ಈ ಜಗಳ ವಿಕೋಪಕ್ಕೆ ತಿರುಗಿದ ಹಿನ್ನೆಲೆ ಪತಿ ಗಲಾಟೆ ಮಾಡುತ್ತಿದ್ದಾನೆ ಎಂದು ತುಮಕೂರು ತಾಲೂಕಿನ ಬೆಳಗುಂಬದಲ್ಲಿರುವ ತನ್ನ ತಾಯಿ ಅಶ್ವಿತ್ ಉನ್ನಿಸಾಗೆ ಮಗಳು ಫೋನ್ ಮಾಡಿದ್ದಳು. ಹೀಗಾಗಿ ಕಲಹ ನಿವಾರಿಸಲು ಅಳಿಯನ ಮನೆಗೆ ಬಂದಿದ್ದ ಅಶ್ವಿತ್ ಉನ್ನಿಸಾ ಹೋಗಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಮಹಿಳೆಯ ಬರ್ಬರ ಕೊಲೆ ಮಾಡಿದ ಪ್ರಿಯಕರ ರೂಮ್​ಗೆ ಬೀಗ ಜಡಿದು ಪರಾರಿ

ಈ ವೇಳೆ ಅಳಿಯ ಸೈಯದ್ ಸುಹೇಲ್ ಅತ್ತೆ ಮೇಲೆ ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಕೂಡಲೇ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಉನ್ನಿಸಾ ಮೃತಪಟ್ಟಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:57 am, Sun, 11 February 24

Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Follow Us