ಬೆಂಗಳೂರಿನಲ್ಲಿ ಫ್ಲಾಟ್ ವಂಚನೆ: ಊಟಿ ಬಳಿ ಕೃಷಿ ಭೂಮಿ ಮುಟ್ಟುಗೋಲು

ಬೆಂಗಳೂರು: ರಿಯಲ್​ ಎಸ್ಟೇಟ್​ ಕಂಪನಿಯೊಂದು ಫ್ಲಾಟ್ ಕೊಡುವುದಾಗಿ ಗ್ರಾಹಕರಿಂದ ಹಣ ಪಡೆದು ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರದ ಊಟಿಯಲ್ಲಿ ₹6.97 ಕೋಟಿ ಮೌಲ್ಯದ ಕೃಷಿ ಭೂಮಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ. Sovereign Developers and Infrastructure Ltd – ಎಸ್‌ಡಿಐಎಲ್‌ ಕಂಪನಿಯ ವಿರುದ್ಧ ಗ್ರಾಹಕರು ರಾಮಮೂರ್ತಿನಗರ ಠಾಣೆಯಲ್ಲಿ ವಂಚನೆ ಕೇಸ್ ದಾಖಲಿಸಿದ್ದರು. ಅದರಂತೆ SDIL ಕಂಪನಿಗೆ ಸೇರಿದ ತಮಿಳುನಾಡಿನ ನೀಲ್‌ಗಿರಿ ಜಿಲ್ಲೆಯ ಊಟಿ ಬಳಿಯ ಕೃಷಿ ಭೂಮಿಯನ್ನು ಮುಟ್ಟುಗೋಲು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಜಾರಿ […]

ಬೆಂಗಳೂರಿನಲ್ಲಿ ಫ್ಲಾಟ್ ವಂಚನೆ: ಊಟಿ ಬಳಿ ಕೃಷಿ ಭೂಮಿ ಮುಟ್ಟುಗೋಲು
ಸಾಧು ಶ್ರೀನಾಥ್​

Updated on: Dec 03, 2019 | 4:05 PM

ಬೆಂಗಳೂರು: ರಿಯಲ್​ ಎಸ್ಟೇಟ್​ ಕಂಪನಿಯೊಂದು ಫ್ಲಾಟ್ ಕೊಡುವುದಾಗಿ ಗ್ರಾಹಕರಿಂದ ಹಣ ಪಡೆದು ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರದ ಊಟಿಯಲ್ಲಿ ₹6.97 ಕೋಟಿ ಮೌಲ್ಯದ ಕೃಷಿ ಭೂಮಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.

Sovereign Developers and Infrastructure Ltd – ಎಸ್‌ಡಿಐಎಲ್‌ ಕಂಪನಿಯ ವಿರುದ್ಧ ಗ್ರಾಹಕರು ರಾಮಮೂರ್ತಿನಗರ ಠಾಣೆಯಲ್ಲಿ ವಂಚನೆ ಕೇಸ್ ದಾಖಲಿಸಿದ್ದರು. ಅದರಂತೆ SDIL ಕಂಪನಿಗೆ ಸೇರಿದ ತಮಿಳುನಾಡಿನ ನೀಲ್‌ಗಿರಿ ಜಿಲ್ಲೆಯ ಊಟಿ ಬಳಿಯ ಕೃಷಿ ಭೂಮಿಯನ್ನು ಮುಟ್ಟುಗೋಲು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಜಾರಿ ನಿರ್ದೇಶನಾಲಯವು SDIL ವಿರುದ್ಧ ಪಿಎಂಎಲ್‌ಎ ಅಡಿ ತನಿಖೆ ನಡೆಸಿತ್ತು.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us