AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗಳದ ವೇಳೆ ಮರ್ಮಾಂಗ ಹಿಸುಕಿದ ಕೃತ್ಯ ಕೊಲೆ ಯತ್ನವಲ್ಲ: ಆರೋಪಿಯ ಶಿಕ್ಷೆ ಕಡಿತಗೊಳಿಸಿದ ಹೈಕೋರ್ಟ್

ಜಗಳ ತೆಗೆದು ಮರ್ಮಾಂಗ ಹಿಸುಕಿದ್ದ ಪ್ರಕರಣವನ್ನು ಚಿಕ್ಕಮಗಳೂರಿನ ಸೆಷನ್ಸ್ ಕೋರ್ಟ್ ಕೊಲೆಯತ್ನವೆಂದು ತೀರ್ಪು ನೀಡಿತ್ತು. ಆದೇಶ ಪ್ರಶ್ನಿಸಿ ಆರೋಪಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣವನ್ನು ಗಾಯದ ಕೇಸ್​ ಎಂದು ಪರಿಗಣಿಸಿದೆ.

ಜಗಳದ ವೇಳೆ ಮರ್ಮಾಂಗ ಹಿಸುಕಿದ ಕೃತ್ಯ ಕೊಲೆ ಯತ್ನವಲ್ಲ: ಆರೋಪಿಯ ಶಿಕ್ಷೆ ಕಡಿತಗೊಳಿಸಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Rakesh Nayak Manchi
|

Updated on: Jun 26, 2023 | 9:36 PM

Share

ಬೆಂಗಳೂರು: ಜಗಳದ ವೇಳೆ ಮರ್ಮಾಂಗ ಹಿಸುಕಿದ ಕೃತ್ಯ ಕೊಲೆ ಯತ್ನವಲ್ಲ ಎಂದು ಪರಿಗಣಿಸಿದ ಕರ್ನಾಟಕ ಹೈಕೋರ್ಟ್ (Karnataka High Court), ಚಿಕ್ಕಮಗಳೂರಿನ (Chikkamagaluru) ಸೆಷನ್ಸ್ ಕೋರ್ಟ್ ಆರೋಪಿಗೆ ವಿಧಿಸಿದ್ದ 7 ವರ್ಷಗಳ ಶಿಕ್ಷೆಯ ಪ್ರಮಾಣವನ್ನು 3 ವರ್ಷಕ್ಕೆ ಕಡಿತಗೊಳಿಸಿ ಆದೇಶಿಸಿದೆ. ಹೈಕೋರ್ಟ್ ಪ್ರಕರಣವನ್ನು ತೀವ್ರ ಗಾಯದ ಕೇಸ್ ಎಂದು ಪರಿಗಣಿಸಿ ಈ ತೀರ್ಪು ನೀಡಿದೆ.

ನರಸಿಂಹಸ್ವಾಮಿ ಉತ್ಸವದ ವೇಳೆ ಓಂಕಾರಪ್ಪ ಎಂಬವರು ನೃತ್ಯ ಮಾಡುತ್ತಿದ್ದ. ಈ ವೇಳೆ ಪರಮೇಶ್ವರಪ್ಪ ಸ್ಥಳಕ್ಕೆ ಆಗಮಿಸಿ ಜಗಳ ತೆಗೆದು ಮರ್ಮಾಂಗ ಹಿಸುಕಿದ್ದ. ಪ್ರಕರಣ ಸಂಬಂಧ ಓಂಕಾರಪ್ಪ ಅವರು ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ್ದ ಚಿಕ್ಕಮಗಳೂರಿನ ಸೆಷನ್ಸ್ ಕೋರ್ಟ್, ಕೊಲೆಯತ್ನವೆಂದು ತೀರ್ಪು ನೀಡಿ 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ಇದನ್ನೂ ಓದಿ: ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆಂದು ವಿವಾಹಿತೆ ಆರೋಪಿಸುವಂತಿಲ್ಲ; ಕರ್ನಾಟಕ ಹೈಕೋರ್ಟ್ ತೀರ್ಪು

ಚಿಕ್ಕಮಗಳೂರಿನ ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ಪರಮೇಶ್ವರಪ್ಪ ಮೇಲ್ಮನವಿ ಸಲ್ಲಿಸಿದ್ದ. ಅದರಂತೆ ವಿಚಾರಣೆ ನಡೆಸಿದ ನ್ಯಾ. ಜೆ.ನಟರಾಜನ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಪ್ರಕರಣವನ್ನು ಕೊಲೆ ಯತ್ನವಲ್ಲ, ಗಾಯಗೊಳಿಸಿದ ಕೃತ್ಯ ಎಂದು ಪರಿಗಣಿಸಿ 7 ವರ್ಷಗಳ ಶಿಕ್ಷೆಯನ್ನು 3 ವರ್ಷಕ್ಕೆ ಕಡಿತ ಮಾಡಿ ಆದೇಶಿಸಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ