AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗಳದ ವೇಳೆ ಮರ್ಮಾಂಗ ಹಿಸುಕಿದ ಕೃತ್ಯ ಕೊಲೆ ಯತ್ನವಲ್ಲ: ಆರೋಪಿಯ ಶಿಕ್ಷೆ ಕಡಿತಗೊಳಿಸಿದ ಹೈಕೋರ್ಟ್

ಜಗಳ ತೆಗೆದು ಮರ್ಮಾಂಗ ಹಿಸುಕಿದ್ದ ಪ್ರಕರಣವನ್ನು ಚಿಕ್ಕಮಗಳೂರಿನ ಸೆಷನ್ಸ್ ಕೋರ್ಟ್ ಕೊಲೆಯತ್ನವೆಂದು ತೀರ್ಪು ನೀಡಿತ್ತು. ಆದೇಶ ಪ್ರಶ್ನಿಸಿ ಆರೋಪಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣವನ್ನು ಗಾಯದ ಕೇಸ್​ ಎಂದು ಪರಿಗಣಿಸಿದೆ.

ಜಗಳದ ವೇಳೆ ಮರ್ಮಾಂಗ ಹಿಸುಕಿದ ಕೃತ್ಯ ಕೊಲೆ ಯತ್ನವಲ್ಲ: ಆರೋಪಿಯ ಶಿಕ್ಷೆ ಕಡಿತಗೊಳಿಸಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Rakesh Nayak Manchi
|

Updated on: Jun 26, 2023 | 9:36 PM

Share

ಬೆಂಗಳೂರು: ಜಗಳದ ವೇಳೆ ಮರ್ಮಾಂಗ ಹಿಸುಕಿದ ಕೃತ್ಯ ಕೊಲೆ ಯತ್ನವಲ್ಲ ಎಂದು ಪರಿಗಣಿಸಿದ ಕರ್ನಾಟಕ ಹೈಕೋರ್ಟ್ (Karnataka High Court), ಚಿಕ್ಕಮಗಳೂರಿನ (Chikkamagaluru) ಸೆಷನ್ಸ್ ಕೋರ್ಟ್ ಆರೋಪಿಗೆ ವಿಧಿಸಿದ್ದ 7 ವರ್ಷಗಳ ಶಿಕ್ಷೆಯ ಪ್ರಮಾಣವನ್ನು 3 ವರ್ಷಕ್ಕೆ ಕಡಿತಗೊಳಿಸಿ ಆದೇಶಿಸಿದೆ. ಹೈಕೋರ್ಟ್ ಪ್ರಕರಣವನ್ನು ತೀವ್ರ ಗಾಯದ ಕೇಸ್ ಎಂದು ಪರಿಗಣಿಸಿ ಈ ತೀರ್ಪು ನೀಡಿದೆ.

ನರಸಿಂಹಸ್ವಾಮಿ ಉತ್ಸವದ ವೇಳೆ ಓಂಕಾರಪ್ಪ ಎಂಬವರು ನೃತ್ಯ ಮಾಡುತ್ತಿದ್ದ. ಈ ವೇಳೆ ಪರಮೇಶ್ವರಪ್ಪ ಸ್ಥಳಕ್ಕೆ ಆಗಮಿಸಿ ಜಗಳ ತೆಗೆದು ಮರ್ಮಾಂಗ ಹಿಸುಕಿದ್ದ. ಪ್ರಕರಣ ಸಂಬಂಧ ಓಂಕಾರಪ್ಪ ಅವರು ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ್ದ ಚಿಕ್ಕಮಗಳೂರಿನ ಸೆಷನ್ಸ್ ಕೋರ್ಟ್, ಕೊಲೆಯತ್ನವೆಂದು ತೀರ್ಪು ನೀಡಿ 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ಇದನ್ನೂ ಓದಿ: ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆಂದು ವಿವಾಹಿತೆ ಆರೋಪಿಸುವಂತಿಲ್ಲ; ಕರ್ನಾಟಕ ಹೈಕೋರ್ಟ್ ತೀರ್ಪು

ಚಿಕ್ಕಮಗಳೂರಿನ ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ಪರಮೇಶ್ವರಪ್ಪ ಮೇಲ್ಮನವಿ ಸಲ್ಲಿಸಿದ್ದ. ಅದರಂತೆ ವಿಚಾರಣೆ ನಡೆಸಿದ ನ್ಯಾ. ಜೆ.ನಟರಾಜನ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಪ್ರಕರಣವನ್ನು ಕೊಲೆ ಯತ್ನವಲ್ಲ, ಗಾಯಗೊಳಿಸಿದ ಕೃತ್ಯ ಎಂದು ಪರಿಗಣಿಸಿ 7 ವರ್ಷಗಳ ಶಿಕ್ಷೆಯನ್ನು 3 ವರ್ಷಕ್ಕೆ ಕಡಿತ ಮಾಡಿ ಆದೇಶಿಸಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ