AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗಳದ ವೇಳೆ ಮರ್ಮಾಂಗ ಹಿಸುಕಿದ ಕೃತ್ಯ ಕೊಲೆ ಯತ್ನವಲ್ಲ: ಆರೋಪಿಯ ಶಿಕ್ಷೆ ಕಡಿತಗೊಳಿಸಿದ ಹೈಕೋರ್ಟ್

ಜಗಳ ತೆಗೆದು ಮರ್ಮಾಂಗ ಹಿಸುಕಿದ್ದ ಪ್ರಕರಣವನ್ನು ಚಿಕ್ಕಮಗಳೂರಿನ ಸೆಷನ್ಸ್ ಕೋರ್ಟ್ ಕೊಲೆಯತ್ನವೆಂದು ತೀರ್ಪು ನೀಡಿತ್ತು. ಆದೇಶ ಪ್ರಶ್ನಿಸಿ ಆರೋಪಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣವನ್ನು ಗಾಯದ ಕೇಸ್​ ಎಂದು ಪರಿಗಣಿಸಿದೆ.

ಜಗಳದ ವೇಳೆ ಮರ್ಮಾಂಗ ಹಿಸುಕಿದ ಕೃತ್ಯ ಕೊಲೆ ಯತ್ನವಲ್ಲ: ಆರೋಪಿಯ ಶಿಕ್ಷೆ ಕಡಿತಗೊಳಿಸಿದ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Rakesh Nayak Manchi
|

Updated on: Jun 26, 2023 | 9:36 PM

Share

ಬೆಂಗಳೂರು: ಜಗಳದ ವೇಳೆ ಮರ್ಮಾಂಗ ಹಿಸುಕಿದ ಕೃತ್ಯ ಕೊಲೆ ಯತ್ನವಲ್ಲ ಎಂದು ಪರಿಗಣಿಸಿದ ಕರ್ನಾಟಕ ಹೈಕೋರ್ಟ್ (Karnataka High Court), ಚಿಕ್ಕಮಗಳೂರಿನ (Chikkamagaluru) ಸೆಷನ್ಸ್ ಕೋರ್ಟ್ ಆರೋಪಿಗೆ ವಿಧಿಸಿದ್ದ 7 ವರ್ಷಗಳ ಶಿಕ್ಷೆಯ ಪ್ರಮಾಣವನ್ನು 3 ವರ್ಷಕ್ಕೆ ಕಡಿತಗೊಳಿಸಿ ಆದೇಶಿಸಿದೆ. ಹೈಕೋರ್ಟ್ ಪ್ರಕರಣವನ್ನು ತೀವ್ರ ಗಾಯದ ಕೇಸ್ ಎಂದು ಪರಿಗಣಿಸಿ ಈ ತೀರ್ಪು ನೀಡಿದೆ.

ನರಸಿಂಹಸ್ವಾಮಿ ಉತ್ಸವದ ವೇಳೆ ಓಂಕಾರಪ್ಪ ಎಂಬವರು ನೃತ್ಯ ಮಾಡುತ್ತಿದ್ದ. ಈ ವೇಳೆ ಪರಮೇಶ್ವರಪ್ಪ ಸ್ಥಳಕ್ಕೆ ಆಗಮಿಸಿ ಜಗಳ ತೆಗೆದು ಮರ್ಮಾಂಗ ಹಿಸುಕಿದ್ದ. ಪ್ರಕರಣ ಸಂಬಂಧ ಓಂಕಾರಪ್ಪ ಅವರು ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ್ದ ಚಿಕ್ಕಮಗಳೂರಿನ ಸೆಷನ್ಸ್ ಕೋರ್ಟ್, ಕೊಲೆಯತ್ನವೆಂದು ತೀರ್ಪು ನೀಡಿ 7 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ಇದನ್ನೂ ಓದಿ: ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾನೆಂದು ವಿವಾಹಿತೆ ಆರೋಪಿಸುವಂತಿಲ್ಲ; ಕರ್ನಾಟಕ ಹೈಕೋರ್ಟ್ ತೀರ್ಪು

ಚಿಕ್ಕಮಗಳೂರಿನ ಸೆಷನ್ಸ್ ಕೋರ್ಟ್ ಆದೇಶ ಪ್ರಶ್ನಿಸಿ ಪರಮೇಶ್ವರಪ್ಪ ಮೇಲ್ಮನವಿ ಸಲ್ಲಿಸಿದ್ದ. ಅದರಂತೆ ವಿಚಾರಣೆ ನಡೆಸಿದ ನ್ಯಾ. ಜೆ.ನಟರಾಜನ್ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ, ಪ್ರಕರಣವನ್ನು ಕೊಲೆ ಯತ್ನವಲ್ಲ, ಗಾಯಗೊಳಿಸಿದ ಕೃತ್ಯ ಎಂದು ಪರಿಗಣಿಸಿ 7 ವರ್ಷಗಳ ಶಿಕ್ಷೆಯನ್ನು 3 ವರ್ಷಕ್ಕೆ ಕಡಿತ ಮಾಡಿ ಆದೇಶಿಸಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ