AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sriki International hacker: ಜಾಗತಿಕ ಹ್ಯಾಕರ್ ಶ್ರೀಕಿ ಅಲಿಯಾಸ್​ ಶ್ರೀ ಕೃಷ್ಣ ಜೈಲಿನಲ್ಲಿದ್ದಾಗ ಭಗವದ್ಗೀತೆ ಓದುತ್ತಿದ್ದ!

Bhagavath geetha: ಶ್ರೀಕಿ ವಿರುದ್ಧ ಗಂಭೀರ ಆರೋಪಗಳು ಇರುವ ಹಿನ್ನೆಲೆ ಅಧಿಕಾರಿಗಳು ಮೊದಲೇ ಎಚ್ಚರಿಕೆ ವಹಿಸಿದ್ದರು. ಜೈಲಿನಲ್ಲಿ ಸಹ ಕೈದಿಗಳಿಂದ ಶ್ರೀಕಿಗೆ ಸಮಸ್ಯೆಯಾದರೆ ಕಷ್ಟ ಎಂದು ಬಗೆದು ಮೊದಲೇ ಎಚ್ಚರಿಕೆ ವಹಿಸಿದ್ದರು. ಹೀಗಾಗಿ ಕ್ವಾರಂಟೈನ್ ಸೆಲ್ ಬಳಿ ಯಾವೊಬ್ಬ ಕೈದಿಗೂ ಅವಕಾಶ ಕೊಡದೆ ನಿರ್ಬಂಧ ಹೇರಿದ್ದರು.

Sriki International hacker: ಜಾಗತಿಕ ಹ್ಯಾಕರ್ ಶ್ರೀಕಿ ಅಲಿಯಾಸ್​ ಶ್ರೀ ಕೃಷ್ಣ ಜೈಲಿನಲ್ಲಿದ್ದಾಗ ಭಗವದ್ಗೀತೆ ಓದುತ್ತಿದ್ದ!
ಜಾಗತಿಕ ಹ್ಯಾಕರ್ ಶ್ರೀಕಿ ಅಲಿಯಾಸ್​ ಶ್ರೀ ಕೃಷ್ಣ ಜೈಲಿನಲ್ಲಿದ್ದಾಗ ಭಗವದ್ಗೀತೆ ಓದುತ್ತಿದ್ದ!
TV9 Web
| Edited By: |

Updated on: Nov 16, 2021 | 1:04 PM

Share

ಬೆಂಗಳೂರು: ಇಂಟರ್​​​ನ್ಯಾಷನಲ್ ಹ್ಯಾಕರ್ ಶ್ರೀಕಿ ಅಲಿಯಾಸ್​ ಶ್ರೀಕೃಷ್ಣ ಗೋಪಾಲ್​ ಎಂಬ ಬೆಂಗಳೂರು ಜಯನಗರದ ಆಸಾಮಿ ಡ್ರಗ್ಸ್​​ ಕೇಸ್​ ಮತ್ತು ಬಿಟ್​ಕಾಯಿನ್​ ಪ್ರಕರಣದಲ್ಲಿ ತಗಲುಹಾಕಿಕೊಂಡಿದ್ದೇ ಬಂತು ಭಾರತದ ರಾಜಕೀಯ ವಲಯದಲ್ಲಿ ಶ್ರೀಕಿಯದ್ದೇ ಸದ್ದು ಎಂಬಂತಾಗಿದೆ. ಕೇವಲ ಎರಡೇ ದಿನಕ್ಕೆ ಜಾಮೀನು ಪಡೆದು ಸದ್ಯಕ್ಕೆ ಅಜ್ಞಾತ ಸ್ಥಳದಲ್ಲಿರೋ ಶ್ರೀಕಿ ಕತ್ತಲ ಜೈಲಲ್ಲಿ ಹೇಗಿದ್ದ ಗೊತ್ತಾ ಎಂಬುದರತ್ತ ಬೆಳಕು ಚೆಲ್ಲುವುದಾದರೆ. ಅಸಲಿಗೆ ಶ್ರೀಕಿ ಜೈಲಿನಲ್ಲಿದ್ದಿದ್ದು ಬರೀ ಎರಡೇ ದಿನ. ಜೈಲಲ್ಲಿದ್ದಾಗ ಶ್ರೀಕಿಗೆ ಭದ್ರತೆ ಜೋರಾಗಿತ್ತು. ಪರಪ್ಪನ ಅಗ್ರಹಾರ ಜೈಲಲ್ಲಿದ್ದಾಗ ಶ್ರೀಕಿಯ ದಿನಚರಿಯ ಇಂಟ್ರಸ್ಟಿಂಗ್ ಸ್ಟೊರಿ ಇಲ್ಲಿದೆ.

ಜೀವನ್ ಭೀಮಾ ನಗರ ಕೇಸ್ ನಲ್ಲಿ ಬಂಧನವಾಗಿದ್ದ ಶ್ರೀಕಿಯನ್ನ ಕೋವಿಡ್​ ಕ್ವಾರಂಟೈನ್ ಸೆಲ್ ಗೆ ಜೈಲಾಧಿಕಾರಿಗಳು ಶಿಫ್ಟ್​​ ಮಾಡಿದ್ದರು. ಹದಿನೈದು ಮಂದಿಗೆ ವ್ಯವಸ್ಥೆ ಇರುವ ಬ್ಯಾರಕ್ ನಲ್ಲಿ ಶ್ರೀಕಿ ಒಬ್ಬನನ್ನೇ ಶಿಫ್ಟ್​​ ಮಾಡಿ ಬಿಗಿ ಭದ್ರತೆಯಲ್ಲಿ ಇರಿಸಲಾಗಿತ್ತು. ರಾತ್ರಿ ಹಗಲು ತಲಾ ಒಂದು ಪಾಳಿಯಂತೆ ನಾಲ್ವರು ಸಿಬ್ಬಂದಿಯನ್ನು ಬ್ಯಾರಕ್ ಮುಂದೆಯೇ ಭದ್ರತೆಗೆ ನಿಯೋಜನೆ ಮಾಡಲಾಗಿತ್ತು. ಸಿಸಿಟಿವಿ ಕಣ್ಗಾವಲಿನಲ್ಲಿ ಜೈಲಿನಲ್ಲಿ ಇರಿಸಿದ್ದ ಜೈಲಾಧಿಕಾರಿಗಳು ಶ್ರೀಕಿಯಿದ್ದ ಸೆಲ್ ಬಳಿಗೆ ಭದ್ರತೆಗೆ ನಿಯೋಜನೆಗೊಂಡ ಸಿಬ್ಬಂದಿ ಹೊರತುಪಡಿಸಿ ಯಾರಿಗೂ ಪ್ರವೇಶ ನೀಡುತ್ತಿರಲಿಲ್ಲ.

ಶ್ರೀಕಿ ವಿರುದ್ಧ ಗಂಭೀರ ಆರೋಪಗಳು ಇರುವ ಹಿನ್ನೆಲೆ ಅಧಿಕಾರಿಗಳು ಮೊದಲೇ ಎಚ್ಚರಿಕೆ ವಹಿಸಿದ್ದರು. ಜೈಲಿನಲ್ಲಿ ಸಹ ಕೈದಿಗಳಿಂದ ಶ್ರೀಕಿಗೆ ಸಮಸ್ಯೆಯಾದರೆ ಕಷ್ಟ ಎಂದು ಬಗೆದು ಮೊದಲೇ ಎಚ್ಚರಿಕೆ ವಹಿಸಿದ್ದರು. ಹೀಗಾಗಿ ಕ್ವಾರಂಟೈನ್ ಸೆಲ್ ಬಳಿ ಯಾವೊಬ್ಬ ಕೈದಿಗೂ ಅವಕಾಶ ಕೊಡದೆ ನಿರ್ಬಂಧ ಹೇರಿದ್ದರು.

ಶ್ರೀಕಿ ಜೈಲಿನಲ್ಲಿ ಇದ್ದಾಗ ಮೂರು ಇಂಗ್ಲಿಷ್ ಭಾಷೆಯ ಆಧ್ಯಾತ್ಮಿಕ ಪುಸ್ತಕಗಳನ್ನ ಪಡೆದಿದ್ದ. ಅದ್ರಲ್ಲಿ ಶ್ರೀ ಕೃಷ್ಣನ ವೇದೋಪದೇಶದ ಒಂದು ಪುಸ್ತಕ ಪಡೆದು ಓದುತ್ತಿದ್ದ‌. ಸಿಬ್ಬಂದಿ ಮಾತನಾಡಿಸಿದರೂ ಪುಸ್ತಕ ಓದಿನಲ್ಲೇ ಮಗ್ನನಾಗಿ ಇರುತ್ತಿದ್ದ ಶ್ರೀಕಿ. ಪ್ರತೀ ಗಂಟೆಗೆ ಭಗವದ್ಗೀತೆ ಪಠನ ಮಾಡಿಕೊಂಡು ಧ್ಯಾನ ಮಾಡುತ್ತಿದ್ದ. ಶ್ರೀಕಿಯ ಬಾಯಲ್ಲಿ ನಿರರ್ಗಳವಾಗಿ ಬರ್ತಿದ್ದ ಶ್ಲೋಕಗಳನ್ನು ಕೇಳಿ ಸಿಬ್ಬಂದಿ ಅವಾಕ್ಕಾಗಿದ್ದರು. ರಾತ್ರಿ ಹಗಲು ಶ್ರೀಕಿಯ ಚಲನವಲನ ಪರಿಶೀಲನೆಗೆ ಓರ್ವ ಅಧಿಕಾರಿಯನ್ನೂ ನೇಮಿಸಲಾಗಿತ್ತು.

ಇದನ್ನು ಓದಿ: ಬಿಟ್​​ಕಾಯಿನ್​ ಕಿಂಗ್​ಪಿನ್​ ಜಾಗತಿಕ ಹ್ಯಾಕರ್​ ಶ್ರೀಕಿ ಪೊಲೀಸರಿಗೆ ಲಾಕ್​ ಆಗ್ತಿದ್ದಂತೆ ತನ್ನ ಬಗ್ಗೆ ಹೇಳಿದ್ದೇನು? ಇನ್​ಸೈಡ್​​ ಡಿಟೆಲ್ಸ್​​

(sriki alias sri krishna international hacker used to read bhagavath geetha in parappana agrahara jail)

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು