Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಡಗು: ವಿದ್ಯುತ್ ಬಿಲ್‌ನಲ್ಲಿ ವ್ಯತ್ಯಾಸ, ಬಿಲ್ ಕಲೆಕ್ಟರ್​ಗೆ ಚಾಕು ಇರಿತ

ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆ ನಂತರ ಹಲವೆಡೆ ವಿದ್ಯುತ್ ದರದಲ್ಲಿ ಭಾರೀ ವ್ಯತ್ಯಾಸಗಳು ಕಂಡುಬರುತ್ತಿವೆ. ಕೆಲವು ಗ್ರಾಹಕರಿಗೆ ಸಾವಿರಾರು ರೂಪಾಯಿ ಬಿಲ್ ಬಂದಿದ್ದು, ಲಕ್ಷಾಂತರ ರೂಪಾಯಿ ಬಿಲ್ ನೀಡಿದ್ದೂ ಇದೆ. ಇದೇ ರೀತಿ ವ್ಯತ್ಯಾಸ ಕಂಡುಬಂದ ಹಿನ್ನೆಲೆ ಕೊಡಗಿನಲ್ಲಿ ಬಿಲ್ ಕಲೆಕ್ಟರ್​ಗೆ ಚಾಕು ಇರಿಯಲಾಗಿದೆ.

ಕೊಡಗು: ವಿದ್ಯುತ್ ಬಿಲ್‌ನಲ್ಲಿ ವ್ಯತ್ಯಾಸ, ಬಿಲ್ ಕಲೆಕ್ಟರ್​ಗೆ ಚಾಕು ಇರಿತ
ಸಾಂದರ್ಭಿಕ ಚಿತ್ರ
Follow us
Gopal AS
| Updated By: Rakesh Nayak Manchi

Updated on: Jul 13, 2023 | 8:40 PM

ಕೊಡಗು: ವಿದ್ಯುತ್​ ಬಿಲ್​ನಲ್ಲಿ ವ್ಯತ್ಯಾಸ ಬಂದ ಹಿನ್ನೆಲೆ ಮಾತಿನ ಚಕಮಕಿ ನಡೆದು ಬಿಲ್ ಕಲೆಕ್ಟರ್​​ಗೆ ಚಾಕುವಿನಿಂದ ಇರಿದ ಘಟನೆ ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಜಂಬೂರು ಬಾಣೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆ ನಂತರ ಹಲವೆಡೆ ವಿದ್ಯುತ್ ದರದಲ್ಲಿ ಭಾರೀ ವ್ಯತ್ಯಾಸಗಳು ಕಂಡುಬರುತ್ತಿವೆ. ಎಷ್ಟರ ಮಟ್ಟಿಗೆ ಬಿಲ್​ನಲ್ಲಿ ವ್ಯತ್ಯಾಸಗಳು ಬರುತ್ತಿವೆ ಎಂದರೆ ಗ್ರಾಹಕರು ಕೂಡ ದಿಗ್ಭ್ರಮೆಗೊಳ್ಳುತ್ತಿದ್ದಾರೆ. ಕೆಲವರಿಗೆ ನೂರಾರು ರೂಪಾಯಿ, ಇನ್ನು ಕೆಲವರಿಗೆ ಸಾವಿರಾರು ರೂಪಾಯಿ ವ್ಯತ್ಯಾಸಗಳು ಕಂಡುಬಂದಿದ್ದು, ಬಿಲ್ ಕಲೆಕ್ಟರ್ ಲಕ್ಷಾಂತರ ರೂಪಾಯಿ ಬಿಲ್ ನೀಡಿದ್ದೂ ಇದೆ. ಇದೀಗ ಜಂಬೂರು ಬಾಣೆಯಲ್ಲಿ ಬಿಲ್​ನಲ್ಲಿ ವ್ಯತ್ಯಾಸ ಬಂದಿದೆ ಎಂದು ಗ್ರಾಹಕ ಬಿಲ್ ಕಲೆಕ್ಟರ್​ ಜೊತೆ ಮಾತಿಗೆ ಇಳಿದಿದ್ದಾನೆ. ಇದು ತಾರಕಕ್ಕೇರಿ ಬಿಲ್ ಕಲೆಕ್ಟರ್​​ಗೆ ಚಾಕುವಿನಿಂದ ಇರಿಯಲಾಗಿದೆ.

ಇದನ್ನೂ ಓದಿ: ಕೋಲಾರ ಪೊಲೀಸರಿಗೆ ಕೊಲೆಗಾರನ ಬಗ್ಗೆ ಟಿಪ್ಸ್ ಕೊಟ್ಟಿದ್ದು ಚಿಪ್ಸ್ ಪ್ಯಾಕೆಟ್, ಆದರೆ ಅದನ್ನು ಮೂವರು ಖರೀದಿಸಿದ್ದರು! ಕೊನೆಗೆ ಹಂತಕನ ಹಿಡಿದ್ದಿದ್ದು ಹೇಗೆ?

ಘಟನೆಯಲ್ಲಿ ಗಾಯಗೊಂಡ ಬಿಲ್​ ಕಲೆಕ್ಟರ್​ ಪ್ರಶಾಂತ್​ (30) ಎಂಬವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡ ಮಾದಾಪುರ ಠಾಣಾ ಪೊಲೀಸರು ಆರೋಪಿ ರತೀಶ್ (35) ಎಂಬಾತನನ್ನು ಬಂಧಿಸಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
Daily Horoscope: ಹಣಕಾಸಿನ ವಿಷಯದಲ್ಲಿ ತಾಳ್ಮೆವಹಿಸುವುದು ಒಳ್ಳೆಯದು
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್