AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI ATM Theft: ಮಾಗಡಿ ರಸ್ತೆಯಲ್ಲಿ ಭಾರತೀಯ ಸ್ಟೇಟ್​ ಬ್ಯಾಂಕ್ ಎಟಿಎಂ ಮಷೀನ್ ಸಮೇತ ಕದ್ದೊಯ್ದ ಕಳ್ಳರು!

ನೆಲಮಂಗಲ: ಭಾರತದ ಅಗ್ರ ಸರ್ಕಾರಿ ಬ್ಯಾಂಕ್​ ಎನಿಸಿರುವ ಭಾರತೀಯ ಸ್ಟೇಟ್​ ಬ್ಯಾಂಕ್​ನ ಎಟಿಎಂ ಮಷೀನ್ ಅನ್ನೇ (State Bank Of India ATM) ಹಣದ ಸಮೇತ ಕಳ್ಳರು ಕದ್ದೊಯ್ದಿದ್ದಾರೆ (ATM Theft). ಬೆಂಗಳೂರು ಉತ್ತರ ತಾಲೂಕಿನ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿಯಲ್ಲಿ ಘಟನೆ ನಡೆದಿದೆ. ಕೃತ್ಯದ ಸುಳಿವು ಸಿಗಬಾರದೆಂದು ಸಿಸಿಟಿವಿ ಡಿವಿಆರ್ ಅನ್ನೂ ಕಳ್ಳರು ಕದ್ದೊಯ್ದಿದ್ದಾರೆ. ಆದರೆ 2 ಕಿ.ಮೀ. ದೂರದಲ್ಲಿ ಸ್ಮಶಾನದ ಬಳಿ ಖಾಲಿ ಎಟಿಎಂ ಮಷೀನ್ ಪತ್ತೆಯಾಗಿದೆ. ಕಳ್ಳರು ಅಲ್ಲಿ ಗ್ಯಾಸ್ ಕಟರ್ ಬಳಸಿ ಎಟಿಎಂ […]

SBI ATM Theft: ಮಾಗಡಿ ರಸ್ತೆಯಲ್ಲಿ ಭಾರತೀಯ ಸ್ಟೇಟ್​ ಬ್ಯಾಂಕ್ ಎಟಿಎಂ ಮಷೀನ್ ಸಮೇತ ಕದ್ದೊಯ್ದ ಕಳ್ಳರು!
ಮಾಗಡಿ ರಸ್ತೆಯಲ್ಲಿ ಭಾರತೀಯ ಸ್ಟೇಟ್​ ಬ್ಯಾಂಕ್ ಎಟಿಎಂ ಮಷೀನ್ ಸಮೇತ ಕದ್ದೊಯ್ದ ಕಳ್ಳರು!
TV9 Web
| Edited By: ಸಾಧು ಶ್ರೀನಾಥ್​|

Updated on:Apr 16, 2022 | 4:47 PM

Share

ನೆಲಮಂಗಲ: ಭಾರತದ ಅಗ್ರ ಸರ್ಕಾರಿ ಬ್ಯಾಂಕ್​ ಎನಿಸಿರುವ ಭಾರತೀಯ ಸ್ಟೇಟ್​ ಬ್ಯಾಂಕ್​ನ ಎಟಿಎಂ ಮಷೀನ್ ಅನ್ನೇ (State Bank Of India ATM) ಹಣದ ಸಮೇತ ಕಳ್ಳರು ಕದ್ದೊಯ್ದಿದ್ದಾರೆ (ATM Theft). ಬೆಂಗಳೂರು ಉತ್ತರ ತಾಲೂಕಿನ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿಯಲ್ಲಿ ಘಟನೆ ನಡೆದಿದೆ. ಕೃತ್ಯದ ಸುಳಿವು ಸಿಗಬಾರದೆಂದು ಸಿಸಿಟಿವಿ ಡಿವಿಆರ್ ಅನ್ನೂ ಕಳ್ಳರು ಕದ್ದೊಯ್ದಿದ್ದಾರೆ. ಆದರೆ 2 ಕಿ.ಮೀ. ದೂರದಲ್ಲಿ ಸ್ಮಶಾನದ ಬಳಿ ಖಾಲಿ ಎಟಿಎಂ ಮಷೀನ್ ಪತ್ತೆಯಾಗಿದೆ. ಕಳ್ಳರು ಅಲ್ಲಿ ಗ್ಯಾಸ್ ಕಟರ್ ಬಳಸಿ ಎಟಿಎಂ ತೆರೆದು ಹಣ ದೋಚಿದ್ದಾರೆ. ಆದರೆ, ಬ್ಯಾಂಕ್ ಸಿಬ್ಬಂದಿ ನಿರ್ದಿಷ್ಟವಾಗಿ ಎಷ್ಟು ಮೊತ್ತದ ಹಣದ ಕಳುವಾಗಿದೆ ಎಂಬುದರ ಬಗ್ಗೆ ಮಾಹಿತಿ ನೀಡಿಲ್ಲ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (Magadi Road at Chikkagollarahatti Bangalore North).

ಊಬರ್ ಕ್ಯಾಬ್ ಬುಕ್ ಮಾಡಿ ಚಾಲಕನಿಗೆ ಮಾರಕಾಸ್ತ್ರ ತೋರಿಸಿ ದರೋಡೆ; ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು ಬೆಂಗಳೂರು: ಊಬರ್ ಕ್ಯಾಬ್ ಬುಕ್ ಮಾಡಿ ಚಾಲಕನಿಗೆ ಮಾರಕಾಸ್ತ್ರ ತೋರಿಸಿ ದರೋಡೆ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಡಿಫ್ರೆಂಟ್ ಆಗಿ ದರೋಡೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಕೊನೆಗೂ ಸಂಪಿಗೇಹಳ್ಳಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೃತಿಕ್ ಗೌಡ(20), ನಿತಿನ್ ಗೌಡ(21), ಸುಮಂತ್(20), ದರ್ಶನ್(20) ಬಂಧಿತ ಆರೋಪಿಗಳು. ಬಂಧಿತರ ಬಳಿಯಿದ್ದ 5 ಲಕ್ಷ ರೂಪಾಯಿ ಮೌಲ್ಯದ ಕಾರು, ಒಂದು ಬೈಕ್, ಮೊಬೈಲ್, 18 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.

ಕಾರುಗಳಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತು ಕಳವು ಇನ್ನು ಮತ್ತೊಂದು ಕಡೆ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದೆ. ಮನೆ ಮುಂದೆ ನಿಲ್ಲಿಸಿದ್ದ ಕಾರುಗಳನ್ನೇ ಟಾರ್ಗೆಟ್ ಮಾಡಿ 10 ಕಾರುಗಳ ಗಾಜು ಒಡೆದು ಖದೀಮರು ಕಳ್ಳತನ ಮಾಡಿದ್ದಾರೆ. ಬಾಗಲಗುಂಟೆ, ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಾರುಗಳಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತು ಕಳವಾಗಿದೆ. ಸಂಗೀತ್ ಕುಮಾರ್, ಅನಂತಸ್ವಾಮಿ, ಮಂಜುನಾಥ ನಾಯ್ಕ, ಸಚಿನ್, ದಿನೇಶ್, ಭೈರೇಗೌಡ, ತಿಲಕ್ ರಾಜ್, ಬಸವರಾಜು, ಹರ್ಷ, ಅರುಣ್‌ ಎಂಬುವರಿಗೆ ಸೇರಿದ ಕಾರುಗಳಲ್ಲಿ ಕಳ್ಳತನ ಮಾಡಲಾಗಿದೆ. ಕಳ್ಳರ ಗ್ಯಾಂಗ್ 5 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತು ದೋಚಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 7 ಕಾರುಗಳು, ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ 3 ಕಾರಿನ ಗಾಜು ಒಡೆದು ಕೃತ್ಯ ಎಸಗಲಾಗಿದೆ.

ಇದೂ ಓದಿ: ಪ್ರಚಲಿತ ಯುಗಧರ್ಮಕ್ಕೆ ಹೆಚ್ಚು ಸಮಂಜಸ – ಪ್ರಾಣಿ ಪಶು ಪಕ್ಷಿಗಳಲ್ಲಿ ಇರುವ ಬುದ್ಧಿ ಮನುಷ್ಯರಲ್ಲಿ ಏಕೆ ಇಲ್ಲ!?

ಇದೂ ಓದಿ: ಶಿವಮೊಗ್ಗ ಹರ್ಷ ಕೊಲೆಗೆ ಪ್ರತೀಕಾರವಾಗಿ ಕೊಲೆಗೆ ಸಂಚು; ಮತ್ತೊಂದು ಕೋಮುಗಲಭೆ ಸೃಷ್ಟಿಗೆ ಹೊಂಚು

Published On - 4:38 pm, Sat, 16 April 22

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!