AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI ATM Theft: ಮಾಗಡಿ ರಸ್ತೆಯಲ್ಲಿ ಭಾರತೀಯ ಸ್ಟೇಟ್​ ಬ್ಯಾಂಕ್ ಎಟಿಎಂ ಮಷೀನ್ ಸಮೇತ ಕದ್ದೊಯ್ದ ಕಳ್ಳರು!

ನೆಲಮಂಗಲ: ಭಾರತದ ಅಗ್ರ ಸರ್ಕಾರಿ ಬ್ಯಾಂಕ್​ ಎನಿಸಿರುವ ಭಾರತೀಯ ಸ್ಟೇಟ್​ ಬ್ಯಾಂಕ್​ನ ಎಟಿಎಂ ಮಷೀನ್ ಅನ್ನೇ (State Bank Of India ATM) ಹಣದ ಸಮೇತ ಕಳ್ಳರು ಕದ್ದೊಯ್ದಿದ್ದಾರೆ (ATM Theft). ಬೆಂಗಳೂರು ಉತ್ತರ ತಾಲೂಕಿನ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿಯಲ್ಲಿ ಘಟನೆ ನಡೆದಿದೆ. ಕೃತ್ಯದ ಸುಳಿವು ಸಿಗಬಾರದೆಂದು ಸಿಸಿಟಿವಿ ಡಿವಿಆರ್ ಅನ್ನೂ ಕಳ್ಳರು ಕದ್ದೊಯ್ದಿದ್ದಾರೆ. ಆದರೆ 2 ಕಿ.ಮೀ. ದೂರದಲ್ಲಿ ಸ್ಮಶಾನದ ಬಳಿ ಖಾಲಿ ಎಟಿಎಂ ಮಷೀನ್ ಪತ್ತೆಯಾಗಿದೆ. ಕಳ್ಳರು ಅಲ್ಲಿ ಗ್ಯಾಸ್ ಕಟರ್ ಬಳಸಿ ಎಟಿಎಂ […]

SBI ATM Theft: ಮಾಗಡಿ ರಸ್ತೆಯಲ್ಲಿ ಭಾರತೀಯ ಸ್ಟೇಟ್​ ಬ್ಯಾಂಕ್ ಎಟಿಎಂ ಮಷೀನ್ ಸಮೇತ ಕದ್ದೊಯ್ದ ಕಳ್ಳರು!
ಮಾಗಡಿ ರಸ್ತೆಯಲ್ಲಿ ಭಾರತೀಯ ಸ್ಟೇಟ್​ ಬ್ಯಾಂಕ್ ಎಟಿಎಂ ಮಷೀನ್ ಸಮೇತ ಕದ್ದೊಯ್ದ ಕಳ್ಳರು!
TV9 Web
| Edited By: |

Updated on:Apr 16, 2022 | 4:47 PM

Share

ನೆಲಮಂಗಲ: ಭಾರತದ ಅಗ್ರ ಸರ್ಕಾರಿ ಬ್ಯಾಂಕ್​ ಎನಿಸಿರುವ ಭಾರತೀಯ ಸ್ಟೇಟ್​ ಬ್ಯಾಂಕ್​ನ ಎಟಿಎಂ ಮಷೀನ್ ಅನ್ನೇ (State Bank Of India ATM) ಹಣದ ಸಮೇತ ಕಳ್ಳರು ಕದ್ದೊಯ್ದಿದ್ದಾರೆ (ATM Theft). ಬೆಂಗಳೂರು ಉತ್ತರ ತಾಲೂಕಿನ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿಯಲ್ಲಿ ಘಟನೆ ನಡೆದಿದೆ. ಕೃತ್ಯದ ಸುಳಿವು ಸಿಗಬಾರದೆಂದು ಸಿಸಿಟಿವಿ ಡಿವಿಆರ್ ಅನ್ನೂ ಕಳ್ಳರು ಕದ್ದೊಯ್ದಿದ್ದಾರೆ. ಆದರೆ 2 ಕಿ.ಮೀ. ದೂರದಲ್ಲಿ ಸ್ಮಶಾನದ ಬಳಿ ಖಾಲಿ ಎಟಿಎಂ ಮಷೀನ್ ಪತ್ತೆಯಾಗಿದೆ. ಕಳ್ಳರು ಅಲ್ಲಿ ಗ್ಯಾಸ್ ಕಟರ್ ಬಳಸಿ ಎಟಿಎಂ ತೆರೆದು ಹಣ ದೋಚಿದ್ದಾರೆ. ಆದರೆ, ಬ್ಯಾಂಕ್ ಸಿಬ್ಬಂದಿ ನಿರ್ದಿಷ್ಟವಾಗಿ ಎಷ್ಟು ಮೊತ್ತದ ಹಣದ ಕಳುವಾಗಿದೆ ಎಂಬುದರ ಬಗ್ಗೆ ಮಾಹಿತಿ ನೀಡಿಲ್ಲ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (Magadi Road at Chikkagollarahatti Bangalore North).

ಊಬರ್ ಕ್ಯಾಬ್ ಬುಕ್ ಮಾಡಿ ಚಾಲಕನಿಗೆ ಮಾರಕಾಸ್ತ್ರ ತೋರಿಸಿ ದರೋಡೆ; ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು ಬೆಂಗಳೂರು: ಊಬರ್ ಕ್ಯಾಬ್ ಬುಕ್ ಮಾಡಿ ಚಾಲಕನಿಗೆ ಮಾರಕಾಸ್ತ್ರ ತೋರಿಸಿ ದರೋಡೆ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಡಿಫ್ರೆಂಟ್ ಆಗಿ ದರೋಡೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಕೊನೆಗೂ ಸಂಪಿಗೇಹಳ್ಳಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೃತಿಕ್ ಗೌಡ(20), ನಿತಿನ್ ಗೌಡ(21), ಸುಮಂತ್(20), ದರ್ಶನ್(20) ಬಂಧಿತ ಆರೋಪಿಗಳು. ಬಂಧಿತರ ಬಳಿಯಿದ್ದ 5 ಲಕ್ಷ ರೂಪಾಯಿ ಮೌಲ್ಯದ ಕಾರು, ಒಂದು ಬೈಕ್, ಮೊಬೈಲ್, 18 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.

ಕಾರುಗಳಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತು ಕಳವು ಇನ್ನು ಮತ್ತೊಂದು ಕಡೆ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದೆ. ಮನೆ ಮುಂದೆ ನಿಲ್ಲಿಸಿದ್ದ ಕಾರುಗಳನ್ನೇ ಟಾರ್ಗೆಟ್ ಮಾಡಿ 10 ಕಾರುಗಳ ಗಾಜು ಒಡೆದು ಖದೀಮರು ಕಳ್ಳತನ ಮಾಡಿದ್ದಾರೆ. ಬಾಗಲಗುಂಟೆ, ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಾರುಗಳಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತು ಕಳವಾಗಿದೆ. ಸಂಗೀತ್ ಕುಮಾರ್, ಅನಂತಸ್ವಾಮಿ, ಮಂಜುನಾಥ ನಾಯ್ಕ, ಸಚಿನ್, ದಿನೇಶ್, ಭೈರೇಗೌಡ, ತಿಲಕ್ ರಾಜ್, ಬಸವರಾಜು, ಹರ್ಷ, ಅರುಣ್‌ ಎಂಬುವರಿಗೆ ಸೇರಿದ ಕಾರುಗಳಲ್ಲಿ ಕಳ್ಳತನ ಮಾಡಲಾಗಿದೆ. ಕಳ್ಳರ ಗ್ಯಾಂಗ್ 5 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತು ದೋಚಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 7 ಕಾರುಗಳು, ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ 3 ಕಾರಿನ ಗಾಜು ಒಡೆದು ಕೃತ್ಯ ಎಸಗಲಾಗಿದೆ.

ಇದೂ ಓದಿ: ಪ್ರಚಲಿತ ಯುಗಧರ್ಮಕ್ಕೆ ಹೆಚ್ಚು ಸಮಂಜಸ – ಪ್ರಾಣಿ ಪಶು ಪಕ್ಷಿಗಳಲ್ಲಿ ಇರುವ ಬುದ್ಧಿ ಮನುಷ್ಯರಲ್ಲಿ ಏಕೆ ಇಲ್ಲ!?

ಇದೂ ಓದಿ: ಶಿವಮೊಗ್ಗ ಹರ್ಷ ಕೊಲೆಗೆ ಪ್ರತೀಕಾರವಾಗಿ ಕೊಲೆಗೆ ಸಂಚು; ಮತ್ತೊಂದು ಕೋಮುಗಲಭೆ ಸೃಷ್ಟಿಗೆ ಹೊಂಚು

Published On - 4:38 pm, Sat, 16 April 22

Follow Us
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ರಶ್ಮಿಕಾ-ವಿಜಯ್ ಫ್ಯಾನ್ಸ್​​ಗೆ ಕೊಟ್ಟ ಸ್ವೀಟ್ ಬಾಕ್ಸ್ ಅಲ್ಲಿ ಏನೆಲ್ಲ ಇದೆ?
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ