AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈವ್ ಕಾಲ್ ಅನುಸರಿಸಿ ಅಂಗಡಿ ದೋಚ್ತಿದ್ದ, ಲೈವ್ ಬ್ಯಾಂಡ್ ಶೋಕಿ ಗ್ಯಾಂಗ್ ಅಂದರ್!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಕಳ್ಳರ ಹಾವಳಿ ಹೆಚ್ಚಾಗಿದೆ. ರಾತ್ರಿವೇಳೆ ವಿಡಿಯೋ ಕಾಲ್ ಮುಖಾಂತರ  ಅಂಗಡಿ ಟಾರ್ಗೆಟ್ ಮಾಡುತ್ತಿದ್ದ ಹೈಟೆಕ್ ಕಳ್ಳ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಲೈವ್ ಬ್ಯಾಂಡ್ ಶೋಕಿ ಹಿಂದೆ ಬಿದ್ದಿದ್ದ ಐನಾತಿ ಗ್ಯಾಂಗ್​ನ ಸದಸ್ಯ ಸೈಯದ್ ಮಹಮದ್ ಫೈಸಲ್ ಬಂಧಿತ ಆರೋಪಿ. ನಾಗವಾರದ ನಿವಾಸಿ ಸೈಯದ್ ಮೇಲೆ ನಗರದಲ್ಲಿ 9 ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದೆ. ಅಶೋಕ ನಗರ, ಶಾಂತಿನಗರ, ವಿಲ್ಸನ್ ಗಾರ್ಡನ್ ಸೇರಿದಂತೆ ಹಲವು ಕಡೆ ಕಳ್ಳತನ ಮಾಡುತ್ತಿದ್ದ. ಮಧ್ಯರಾತ್ರಿ ಒಂಟಿಯಾಗಿ […]

ಲೈವ್ ಕಾಲ್ ಅನುಸರಿಸಿ ಅಂಗಡಿ ದೋಚ್ತಿದ್ದ, ಲೈವ್ ಬ್ಯಾಂಡ್ ಶೋಕಿ ಗ್ಯಾಂಗ್ ಅಂದರ್!
ಸಾಧು ಶ್ರೀನಾಥ್​
|

Updated on:Jan 28, 2020 | 4:20 PM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಕಳ್ಳರ ಹಾವಳಿ ಹೆಚ್ಚಾಗಿದೆ. ರಾತ್ರಿವೇಳೆ ವಿಡಿಯೋ ಕಾಲ್ ಮುಖಾಂತರ  ಅಂಗಡಿ ಟಾರ್ಗೆಟ್ ಮಾಡುತ್ತಿದ್ದ ಹೈಟೆಕ್ ಕಳ್ಳ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಲೈವ್ ಬ್ಯಾಂಡ್ ಶೋಕಿ ಹಿಂದೆ ಬಿದ್ದಿದ್ದ ಐನಾತಿ ಗ್ಯಾಂಗ್​ನ ಸದಸ್ಯ ಸೈಯದ್ ಮಹಮದ್ ಫೈಸಲ್ ಬಂಧಿತ ಆರೋಪಿ.

ನಾಗವಾರದ ನಿವಾಸಿ ಸೈಯದ್ ಮೇಲೆ ನಗರದಲ್ಲಿ 9 ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದೆ. ಅಶೋಕ ನಗರ, ಶಾಂತಿನಗರ, ವಿಲ್ಸನ್ ಗಾರ್ಡನ್ ಸೇರಿದಂತೆ ಹಲವು ಕಡೆ ಕಳ್ಳತನ ಮಾಡುತ್ತಿದ್ದ. ಮಧ್ಯರಾತ್ರಿ ಒಂಟಿಯಾಗಿ ಬಂದು ಅಂಗಡಿಗಳ ಬೀಗ ಮುರಿದು ವಸ್ತುಗಳನ್ನು ಕದಿಯುತ್ತಿದ್ದ. ಬಳಿಕ ಕದ್ದ ಮಾಲು ಮಾರಿ ಲೈವ್ ಬ್ಯಾಂಡ್​ನಲ್ಲಿ ನೋಟು ಪಡೆಯುತ್ತಿದ್ದ. ಆರೋಪಿ ಕೃತ್ಯಕ್ಕೆ ಹೆಚ್ಚಾಗಿ ವಾಟ್ಸಪ್ ವಿಡಿಯೋ ಕಾಲ್ ಬಳಸುತ್ತಿದ್ದ ಎಂದು ತಿಳಿದು ಬಂದಿದೆ.

ಮನೆಯಲ್ಲೇ ಕೂತು ನಿರ್ದೇಶನ: ವಾಟ್ಸಪ್ ವಿಡಿಯೋ ಕಾಲ್ ಮುಖಾಂತರ ಮತ್ತೊಬ್ಬ ಆರೋಪಿ ಬರುತ್ತಿದ್ದ. ಮನೆಯಲ್ಲೇ ಕೂತು ಅಂಗಡಿಯನ್ನು ದೋಚಲು ವಿಡಿಯೋ ಕಾಲ್ ಮುಖಾಂತರ ಆರೋಪಿ ವಿಕ್ರಮ್ ಬಂಧಿತ ಫೈಸಲ್​ಗೆ ಸೂಚನೆ ನೀಡುತ್ತಿದ್ದ. ಅಂಗಡಿಯಲ್ಲಿ ಕದಿಯೋದನ್ನು ಮೊಬೈಲ್​ನಲ್ಲೇ ವಿಕ್ರಮ್ ನೋಡುತ್ತಿದ್ದ. ಆರೋಪಿಗಳ ಮಾಸ್ಟರ್ ಮೈಂಡ್ ಗೇಮ್​ನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೃಶ್ಯ ಆಧರಿಸಿ ಅಶೋಕ ನಗರ ಪೊಲೀಸರು ಆರೋಪಿಯನ್ನು ಖೆಡ್ಡಾಕ್ಕೆ ಬೀಳಿಸಿದೆ.

ಬಂಧಿತ ಫೈಸಲ್ ಬಳಿ ಲಕ್ಷಾಂತರ ಮೌಲ್ಯದ ಬ್ರ್ಯಾಂಡೆಡ್ ವಾಚ್​ಗಳು, ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರಾರಿಯಾದ ಮತ್ತೊಬ್ಬ ಆರೋಪಿ ವಿಕ್ರಮ್​ಗಾಗಿ ಅಶೋಕನಗರ ಪೊಲೀಸರು ಬಲೆ ಬೀಸಿದ್ದಾರೆ.

Published On - 9:21 am, Tue, 28 January 20

ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?