Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈವ್ ಕಾಲ್ ಅನುಸರಿಸಿ ಅಂಗಡಿ ದೋಚ್ತಿದ್ದ, ಲೈವ್ ಬ್ಯಾಂಡ್ ಶೋಕಿ ಗ್ಯಾಂಗ್ ಅಂದರ್!

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಕಳ್ಳರ ಹಾವಳಿ ಹೆಚ್ಚಾಗಿದೆ. ರಾತ್ರಿವೇಳೆ ವಿಡಿಯೋ ಕಾಲ್ ಮುಖಾಂತರ  ಅಂಗಡಿ ಟಾರ್ಗೆಟ್ ಮಾಡುತ್ತಿದ್ದ ಹೈಟೆಕ್ ಕಳ್ಳ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಲೈವ್ ಬ್ಯಾಂಡ್ ಶೋಕಿ ಹಿಂದೆ ಬಿದ್ದಿದ್ದ ಐನಾತಿ ಗ್ಯಾಂಗ್​ನ ಸದಸ್ಯ ಸೈಯದ್ ಮಹಮದ್ ಫೈಸಲ್ ಬಂಧಿತ ಆರೋಪಿ. ನಾಗವಾರದ ನಿವಾಸಿ ಸೈಯದ್ ಮೇಲೆ ನಗರದಲ್ಲಿ 9 ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದೆ. ಅಶೋಕ ನಗರ, ಶಾಂತಿನಗರ, ವಿಲ್ಸನ್ ಗಾರ್ಡನ್ ಸೇರಿದಂತೆ ಹಲವು ಕಡೆ ಕಳ್ಳತನ ಮಾಡುತ್ತಿದ್ದ. ಮಧ್ಯರಾತ್ರಿ ಒಂಟಿಯಾಗಿ […]

ಲೈವ್ ಕಾಲ್ ಅನುಸರಿಸಿ ಅಂಗಡಿ ದೋಚ್ತಿದ್ದ, ಲೈವ್ ಬ್ಯಾಂಡ್ ಶೋಕಿ ಗ್ಯಾಂಗ್ ಅಂದರ್!
Follow us
ಸಾಧು ಶ್ರೀನಾಥ್​
|

Updated on:Jan 28, 2020 | 4:20 PM

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಕಳ್ಳರ ಹಾವಳಿ ಹೆಚ್ಚಾಗಿದೆ. ರಾತ್ರಿವೇಳೆ ವಿಡಿಯೋ ಕಾಲ್ ಮುಖಾಂತರ  ಅಂಗಡಿ ಟಾರ್ಗೆಟ್ ಮಾಡುತ್ತಿದ್ದ ಹೈಟೆಕ್ ಕಳ್ಳ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಲೈವ್ ಬ್ಯಾಂಡ್ ಶೋಕಿ ಹಿಂದೆ ಬಿದ್ದಿದ್ದ ಐನಾತಿ ಗ್ಯಾಂಗ್​ನ ಸದಸ್ಯ ಸೈಯದ್ ಮಹಮದ್ ಫೈಸಲ್ ಬಂಧಿತ ಆರೋಪಿ.

ನಾಗವಾರದ ನಿವಾಸಿ ಸೈಯದ್ ಮೇಲೆ ನಗರದಲ್ಲಿ 9 ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದೆ. ಅಶೋಕ ನಗರ, ಶಾಂತಿನಗರ, ವಿಲ್ಸನ್ ಗಾರ್ಡನ್ ಸೇರಿದಂತೆ ಹಲವು ಕಡೆ ಕಳ್ಳತನ ಮಾಡುತ್ತಿದ್ದ. ಮಧ್ಯರಾತ್ರಿ ಒಂಟಿಯಾಗಿ ಬಂದು ಅಂಗಡಿಗಳ ಬೀಗ ಮುರಿದು ವಸ್ತುಗಳನ್ನು ಕದಿಯುತ್ತಿದ್ದ. ಬಳಿಕ ಕದ್ದ ಮಾಲು ಮಾರಿ ಲೈವ್ ಬ್ಯಾಂಡ್​ನಲ್ಲಿ ನೋಟು ಪಡೆಯುತ್ತಿದ್ದ. ಆರೋಪಿ ಕೃತ್ಯಕ್ಕೆ ಹೆಚ್ಚಾಗಿ ವಾಟ್ಸಪ್ ವಿಡಿಯೋ ಕಾಲ್ ಬಳಸುತ್ತಿದ್ದ ಎಂದು ತಿಳಿದು ಬಂದಿದೆ.

ಮನೆಯಲ್ಲೇ ಕೂತು ನಿರ್ದೇಶನ: ವಾಟ್ಸಪ್ ವಿಡಿಯೋ ಕಾಲ್ ಮುಖಾಂತರ ಮತ್ತೊಬ್ಬ ಆರೋಪಿ ಬರುತ್ತಿದ್ದ. ಮನೆಯಲ್ಲೇ ಕೂತು ಅಂಗಡಿಯನ್ನು ದೋಚಲು ವಿಡಿಯೋ ಕಾಲ್ ಮುಖಾಂತರ ಆರೋಪಿ ವಿಕ್ರಮ್ ಬಂಧಿತ ಫೈಸಲ್​ಗೆ ಸೂಚನೆ ನೀಡುತ್ತಿದ್ದ. ಅಂಗಡಿಯಲ್ಲಿ ಕದಿಯೋದನ್ನು ಮೊಬೈಲ್​ನಲ್ಲೇ ವಿಕ್ರಮ್ ನೋಡುತ್ತಿದ್ದ. ಆರೋಪಿಗಳ ಮಾಸ್ಟರ್ ಮೈಂಡ್ ಗೇಮ್​ನ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೃಶ್ಯ ಆಧರಿಸಿ ಅಶೋಕ ನಗರ ಪೊಲೀಸರು ಆರೋಪಿಯನ್ನು ಖೆಡ್ಡಾಕ್ಕೆ ಬೀಳಿಸಿದೆ.

ಬಂಧಿತ ಫೈಸಲ್ ಬಳಿ ಲಕ್ಷಾಂತರ ಮೌಲ್ಯದ ಬ್ರ್ಯಾಂಡೆಡ್ ವಾಚ್​ಗಳು, ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರಾರಿಯಾದ ಮತ್ತೊಬ್ಬ ಆರೋಪಿ ವಿಕ್ರಮ್​ಗಾಗಿ ಅಶೋಕನಗರ ಪೊಲೀಸರು ಬಲೆ ಬೀಸಿದ್ದಾರೆ.

Published On - 9:21 am, Tue, 28 January 20

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು