AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಟೆಲ್​ಗೆ​ ನುಗ್ಗಿ ವಿದ್ಯಾರ್ಥಿ ಮೇಲೆ ಹಲ್ಲೆ: ಅಲ್ಲಾಹು ಅಕ್ಬರ್ ಎಂದು ಕೂಗುವಂತೆ ಒತ್ತಾಯ, ದೂರು ದಾಖಲು

20 ಜನರ ವಿದ್ಯಾರ್ಥಿಗಳ ಗುಂಪು ಎಲ್‌ಎಲ್‌ಬಿ ಮೊದಲ ವರ್ಷದ ವಿದ್ಯಾರ್ಥಿ ಹಿಮಾಂಕ್ ಮೇಲೆ ಹಲ್ಲೆ ನಡೆಸಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹಾಸ್ಟೆಲ್​ಗೆ​ ನುಗ್ಗಿ ವಿದ್ಯಾರ್ಥಿ ಮೇಲೆ ಹಲ್ಲೆ: ಅಲ್ಲಾಹು ಅಕ್ಬರ್ ಎಂದು ಕೂಗುವಂತೆ ಒತ್ತಾಯ, ದೂರು ದಾಖಲು
ಹಾಸ್ಟೆಲ್​ಗೆ​ ನುಗ್ಗಿ ವಿದ್ಯಾರ್ಥಿ ಮೇಲೆ ಹಲ್ಲೆ
TV9 Web
| Edited By: |

Updated on:Nov 12, 2022 | 6:50 PM

Share

ಹೈದರಾಬಾದ್: ತೆಲಂಗಾಣದ (telangana)  ರಂಗರೆಡ್ಡಿ ಜಿಲ್ಲೆಯ ದೋಂತನಪಾಳ್ಯದಲ್ಲಿರುವ ಹಾಸ್ಟೆಲ್​ಗೆ (Hostel) ನುಗ್ಗಿ ವಿದ್ಯಾರ್ಥಿಗೆ (Student) ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿಕೊಂಡು ಒಂದನೇ ವರ್ಷದ ಎಲ್​ಎಲ್​ಬಿ ಓದುತ್ತಿರುವ ಹಿಮಾಂಕ್​ ಬನ್ಸಾಲ್​ಗೆ ಥಳಿಸಿದ್ದಾರೆ. ಅಲ್ಲದೇ “ಅಲ್ಲಾ ಹು ಅಕ್ಬರ್”​ ಕೂಗುವಂತೆ ಹಲ್ಲೆಕೋರರು ಒತ್ತಾಯಿಸಿದ್ದಾರೆ. ಈ ಬಗ್ಗೆ ಹಿಮಾಂಕ್​ ಬನ್ಸಾಲ್ ಪೊಲೀಸರಿಗೆ ದೂರು ನೀಡಿದ್ದಾರೆ.

ಘಟನೆ ಸಂಬಂಧ 20ಕ್ಕೂ ಹೆಚ್ಚು ವಿದ್ಯಾರ್ಥಿಗಳ ವಿರುದ್ಧ ಹಲ್ಲೆಗೊಳಗಾದ ಹಿಮಾಂಕ್ ಶಂಕರಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಧೋಂತನಪಲ್ಲಿಯ ಐಬಿಎಸ್‌ ಕಾಲೇಜು ಹಾಸ್ಟೆಲ್‌ನಲ್ಲಿ ಇರುವಾಗ 20ಕ್ಕೂ ಹೆಚ್ಚು ಜನರು ನುಗ್ಗಿ ಬಂದು ಥಳಿಸಿದ್ದಾರೆ. ಅಲ್ಲದೇ ಅಲ್ಲಾಹು ಅಕ್ಬರ್‌ ಎಂದು ಕೂಗಲು ಒತ್ತಾಯಿಸಿದ್ದಾರೆ ದೂರಿನಲ್ಲಿ ಆರೋಪಿಸಿದ್ದಾರೆ.

ಹಿಮಾಂಕ್​ ಬನ್ಸಾಲ್ ನೀಡಿದ ದೂರಿನ ಅನ್ವಯ ಪೊಲೀಸರು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆ ಯತ್ನ), 342, 450, 323 ಮತ್ತು 506 (ಬೆದರಿಕೆ), ಸೆಕ್ಷನ್ 149 ಮತ್ತು ಸೆಕ್ಷನ್ 4(4) I), (II), ಮತ್ತು (III) ರ್ಯಾಗಿಂಗ್ ನಿಷೇಧ ಕಾಯಿದೆ 2011 ರ ಅಡಿಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ದೂರುದಾರ (ಹಿಮಾಂಕ್​ ಬನ್ಸಾಲ್) ಯುವತಿಯೋರ್ವಳಿಗೆ ಇನ್ಸ್ಟಾಗ್ರಾಮ್​ನಲ್ಲಿ ಅವಮಾನಿಸಿದ್ದಾನೆ. ಅವಳು ಈ ಬಗ್ಗೆ ತನ್ನ ಸ್ನೇಹಿತರಿಗೆ ತಿಳಿಸಿದ್ದಾಳೆ. ಇದರಿಂದ ಗುಂಪುಗೂಡಿ ಬಂದು ಅವನ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಕೋರರ ಪೈಕಿ ಈಗಾಗಲೇ 10 ಮಂದಿಯನ್ನು ನಮ್ಮ ಪೊಲೀಸರು ಗುರುತಿಸಿದ್ದು, ತನಿಖೆ ಆರಂಭಿಸಿದ್ದಾರೆ. ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:50 pm, Sat, 12 November 22

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್