AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಟೆಲ್​ಗೆ​ ನುಗ್ಗಿ ವಿದ್ಯಾರ್ಥಿ ಮೇಲೆ ಹಲ್ಲೆ: ಅಲ್ಲಾಹು ಅಕ್ಬರ್ ಎಂದು ಕೂಗುವಂತೆ ಒತ್ತಾಯ, ದೂರು ದಾಖಲು

20 ಜನರ ವಿದ್ಯಾರ್ಥಿಗಳ ಗುಂಪು ಎಲ್‌ಎಲ್‌ಬಿ ಮೊದಲ ವರ್ಷದ ವಿದ್ಯಾರ್ಥಿ ಹಿಮಾಂಕ್ ಮೇಲೆ ಹಲ್ಲೆ ನಡೆಸಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹಾಸ್ಟೆಲ್​ಗೆ​ ನುಗ್ಗಿ ವಿದ್ಯಾರ್ಥಿ ಮೇಲೆ ಹಲ್ಲೆ: ಅಲ್ಲಾಹು ಅಕ್ಬರ್ ಎಂದು ಕೂಗುವಂತೆ ಒತ್ತಾಯ, ದೂರು ದಾಖಲು
ಹಾಸ್ಟೆಲ್​ಗೆ​ ನುಗ್ಗಿ ವಿದ್ಯಾರ್ಥಿ ಮೇಲೆ ಹಲ್ಲೆ
TV9 Web
| Edited By: |

Updated on:Nov 12, 2022 | 6:50 PM

Share

ಹೈದರಾಬಾದ್: ತೆಲಂಗಾಣದ (telangana)  ರಂಗರೆಡ್ಡಿ ಜಿಲ್ಲೆಯ ದೋಂತನಪಾಳ್ಯದಲ್ಲಿರುವ ಹಾಸ್ಟೆಲ್​ಗೆ (Hostel) ನುಗ್ಗಿ ವಿದ್ಯಾರ್ಥಿಗೆ (Student) ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿಕೊಂಡು ಒಂದನೇ ವರ್ಷದ ಎಲ್​ಎಲ್​ಬಿ ಓದುತ್ತಿರುವ ಹಿಮಾಂಕ್​ ಬನ್ಸಾಲ್​ಗೆ ಥಳಿಸಿದ್ದಾರೆ. ಅಲ್ಲದೇ “ಅಲ್ಲಾ ಹು ಅಕ್ಬರ್”​ ಕೂಗುವಂತೆ ಹಲ್ಲೆಕೋರರು ಒತ್ತಾಯಿಸಿದ್ದಾರೆ. ಈ ಬಗ್ಗೆ ಹಿಮಾಂಕ್​ ಬನ್ಸಾಲ್ ಪೊಲೀಸರಿಗೆ ದೂರು ನೀಡಿದ್ದಾರೆ.

ಘಟನೆ ಸಂಬಂಧ 20ಕ್ಕೂ ಹೆಚ್ಚು ವಿದ್ಯಾರ್ಥಿಗಳ ವಿರುದ್ಧ ಹಲ್ಲೆಗೊಳಗಾದ ಹಿಮಾಂಕ್ ಶಂಕರಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಧೋಂತನಪಲ್ಲಿಯ ಐಬಿಎಸ್‌ ಕಾಲೇಜು ಹಾಸ್ಟೆಲ್‌ನಲ್ಲಿ ಇರುವಾಗ 20ಕ್ಕೂ ಹೆಚ್ಚು ಜನರು ನುಗ್ಗಿ ಬಂದು ಥಳಿಸಿದ್ದಾರೆ. ಅಲ್ಲದೇ ಅಲ್ಲಾಹು ಅಕ್ಬರ್‌ ಎಂದು ಕೂಗಲು ಒತ್ತಾಯಿಸಿದ್ದಾರೆ ದೂರಿನಲ್ಲಿ ಆರೋಪಿಸಿದ್ದಾರೆ.

ಹಿಮಾಂಕ್​ ಬನ್ಸಾಲ್ ನೀಡಿದ ದೂರಿನ ಅನ್ವಯ ಪೊಲೀಸರು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆ ಯತ್ನ), 342, 450, 323 ಮತ್ತು 506 (ಬೆದರಿಕೆ), ಸೆಕ್ಷನ್ 149 ಮತ್ತು ಸೆಕ್ಷನ್ 4(4) I), (II), ಮತ್ತು (III) ರ್ಯಾಗಿಂಗ್ ನಿಷೇಧ ಕಾಯಿದೆ 2011 ರ ಅಡಿಯಲ್ಲಿ ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ದೂರುದಾರ (ಹಿಮಾಂಕ್​ ಬನ್ಸಾಲ್) ಯುವತಿಯೋರ್ವಳಿಗೆ ಇನ್ಸ್ಟಾಗ್ರಾಮ್​ನಲ್ಲಿ ಅವಮಾನಿಸಿದ್ದಾನೆ. ಅವಳು ಈ ಬಗ್ಗೆ ತನ್ನ ಸ್ನೇಹಿತರಿಗೆ ತಿಳಿಸಿದ್ದಾಳೆ. ಇದರಿಂದ ಗುಂಪುಗೂಡಿ ಬಂದು ಅವನ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಕೋರರ ಪೈಕಿ ಈಗಾಗಲೇ 10 ಮಂದಿಯನ್ನು ನಮ್ಮ ಪೊಲೀಸರು ಗುರುತಿಸಿದ್ದು, ತನಿಖೆ ಆರಂಭಿಸಿದ್ದಾರೆ. ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:50 pm, Sat, 12 November 22

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ