AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಲಿಗಢದಲ್ಲಿ ಸಹಪಾಠಿಗೆ ಬೆಂಕಿ ಹಚ್ಚಿದ 10ನೇ ತರಗತಿ ವಿದ್ಯಾರ್ಥಿ

10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗೆ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ.ಶಾಲಾ ಬ್ಯಾಗ್​ಗೆ ಹಾನಿ ಮಾಡಿದ್ದ ವಿಚಾರವಾಗಿ ಜಗಳ ಆರಂಭವಾಗಿತ್ತು, ವಿದ್ಯಾರ್ಥಿಯೊಬ್ಬ ಮತ್ತೊಬ್ಬ ವಿದ್ಯಾರ್ಥಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸಂತ್ರಸ್ತ ಬಾಲಕನನ್ನು ಮೊಹಮ್ಮದ್ ಕೈಫ್ ಎಂದು ಗುರುತಿಸಲಾಗಿದೆ, 25 ಪ್ರತಿಶತದಷ್ಟು ದೇಹ ಸುಟ್ಟು ಹೋಗಿದೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.

ಅಲಿಗಢದಲ್ಲಿ ಸಹಪಾಠಿಗೆ ಬೆಂಕಿ ಹಚ್ಚಿದ 10ನೇ ತರಗತಿ ವಿದ್ಯಾರ್ಥಿ
ವಿದ್ಯಾರ್ಥಿImage Credit source: India Today
ನಯನಾ ರಾಜೀವ್
|

Updated on: Sep 13, 2023 | 7:52 AM

Share

10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗೆ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ.ಶಾಲಾ ಬ್ಯಾಗ್​ಗೆ ಹಾನಿ ಮಾಡಿದ್ದ ವಿಚಾರವಾಗಿ ಜಗಳ ಆರಂಭವಾಗಿತ್ತು, ವಿದ್ಯಾರ್ಥಿಯೊಬ್ಬ ಮತ್ತೊಬ್ಬ ವಿದ್ಯಾರ್ಥಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸಂತ್ರಸ್ತ ಬಾಲಕನನ್ನು ಮೊಹಮ್ಮದ್ ಕೈಫ್ ಎಂದು ಗುರುತಿಸಲಾಗಿದೆ, 25 ಪ್ರತಿಶತದಷ್ಟು ದೇಹ ಸುಟ್ಟು ಹೋಗಿದೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.

ಪೊಲೀಸರ ಪ್ರಕಾರ, ವಿದ್ಯಾರ್ಥಿಗಳು ತಮ್ಮ ಬ್ಯಾಗ್‌ಗಳಿಗೆ ಹಾನಿಯಾದ ಬಗ್ಗೆ ಜಗಳವಾಡಿದ್ದರು, ಇದು ಅಂತಿಮವಾಗಿ 10 ನೇ ತರಗತಿಯ ವಿದ್ಯಾರ್ಥಿ ತನ್ನ ಸಹಪಾಠಿಗೆ ಬೆಂಕಿ ಹಚ್ಚಲು ಕಾರಣವಾಯಿತು. ಆದರೆ, ಆತ ಮತ್ತು ಆರೋಪಿ ನಡುವೆ ಯಾವುದೇ ವಿವಾದ ಇರಲಿಲ್ಲ ಎಂದು ಸಂತ್ರಸ್ತೆ ತಿಳಿಸಿದ್ದಾರೆ.

ನಾನು ಶಾಲೆಯ ಮೈದಾನದಲ್ಲಿ ಕುಳಿತಿದ್ದಾಗ ಯಾರೋ ಬಂದು ನನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದರು, ನನ್ನ ಸ್ನೇಹಿತರು ಆತನ್ನು ತಡೆದು ಬೆಂಕಿಯನ್ನು ನಂದಿಸಿದರು. ನಮ್ಮ ನಡುವೆ ಯಾವುದೇ ಸಮಸ್ಯೆ ಇರಲಿಲ್ಲ ಎಂದು ಕೈಫ್ ಹೇಳಿದರು. ಕೈಫ್ ಅವರ ತಂದೆ ರಹೀಸ್ ಅವರು ಪೊಲೀಸ್ ದೂರು ದಾಖಲಿಸಿದ್ದಾರೆ ಮತ್ತು ತುರ್ತು ಕ್ರಮಕ್ಕೆ ಕೋರಿದ್ದಾರೆ ಎಂದು ಹೇಳಿದರು.

ಮತ್ತಷ್ಟು ಓದಿ: ಮಂಡ್ಯ: ಅಂಗಡಿಯಲ್ಲಿ ಕೂತು ಟೀ ಕುಡಿಯುತ್ತಿದ್ದ ಯುವಕನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಘಟನೆ ಬಗ್ಗೆ ಶಾಲೆಯಿಂದ ಮಾಹಿತಿ ಬಂದಿತ್ತು, ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ನಾನು ಪೊಲೀಸರಲ್ಲಿ ದೂರು ದಾಖಲಿಸಿದ್ದೇನೆ ಎಂದು ಕೈಫ್​ ತಂದೆ ರಯೀಸ್ ಹೇಳಿದ್ದಾರೆ.

ಆರೋಪಿಯನ್ನು ಶಾಲೆಯಿಂದ ಅಮಾನತುಗೊಳಿಸಲಾಗಿದ್ದು, ಕೈಫ್ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ಶಾಲೆಯು ತನಿಖಾ ಸಮಿತಿಯನ್ನು ಸಹ ರಚಿಸಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್