Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ 11 ಜನ ವಿದ್ಯಾರ್ಥಿಗಳ ಬಂಧನ; ಉತ್ತರ ವಿಭಾಗದ ಪೊಲೀಸರಿಂದ ವಿಚಾರಣೆ

ಜೆ.ಸಿ. ನಗರ ಹಾಗೂ ಸಂಜಯನಗರ ಪೊಲೀಸರಿಂದ ಜಂಟಿ ಕಾರ್ಯಾಚರಣೆ ನಡೆಸಲಾಗಿದ್ದು, ನೈಜಿರಿಯನ್ ಪ್ರಜೆ ಸೇರಿ ಒಟ್ಟು 10 ಆರೋಪಿಗಳ ಬಂಧನವಾಗಿದೆ.

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ 11 ಜನ ವಿದ್ಯಾರ್ಥಿಗಳ ಬಂಧನ; ಉತ್ತರ ವಿಭಾಗದ ಪೊಲೀಸರಿಂದ ವಿಚಾರಣೆ
ಡ್ರಗ್ ಕೇಸ್​ನಲ್ಲಿ ಬಂಧಿತ ಆರೋಪಿಗಳು
Follow us
TV9 Web
| Updated By: ganapathi bhat

Updated on: Jul 06, 2021 | 3:41 PM

ಬೆಂಗಳೂರು: ಡ್ರಗ್ಸ್​ ಕೇಸ್​ನಲ್ಲಿ ವಿದ್ಯಾರ್ಥಿಗಳು ಸಿಕ್ಕಿಬಿದ್ದಿರುವ ಆತಂಕಕಾರಿ ಘಟನೆ ನಗರದಲ್ಲಿ ನಡೆದಿದೆ. ಜೆ.ಸಿ. ನಗರ ಹಾಗೂ ಸಂಜಯನಗರ ಪೊಲೀಸರಿಂದ ಡ್ರಗ್ಸ್ ಪ್ರಕರಣದಲ್ಲಿ 11 ಜನರ ಸೆರೆಯಾಗಿದೆ. 60 ಗ್ರಾಂ ವೀಡ್ ಆಯಿಲ್, 1.1 ಕೆಜಿ ಗಾಂಜಾವನ್ನು ವಿದ್ಯಾರ್ಥಿಗಳ ಗುಂಪಿನಿಂದ ವಶಪಡಿಸಿಕೊಳ್ಳಲಾಗಿದೆ. ಸ್ಯಾಂಡಲ್​ವುಡ್, ಸೆಲೆಬ್ರಿಟಿ ಮುಂತಾದ ಕಡೆಯಲ್ಲಿ ಸದ್ದುಮಾಡಿದ್ದ ಡ್ರಗ್ಸ್ ಜಾಲದ ಪ್ರಕರಣ ಇದೀಗ ವಿದ್ಯಾರ್ಥಿ ವಲಯವನ್ನೂ ಬಿಟ್ಟಿಲ್ಲ ಎಂಬುದನ್ನು ಸೂಚಿಸಿದೆ. ವಿದ್ಯಾರ್ಥಿಗಳೂ ಈ ಜಾಲಕ್ಕೆ ಸಿಲುಕಿರುವುದು ಆತಂಕಕಾರಿ ಬೆಳವಣಿಗೆ ಆಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಿಂದ 137 ಎಂಡಿಎಂಎ, 8.5 ಗ್ರಾಂ ಕೊಕೇನ್, 1 ಲ್ಯಾಪ್‌ಟಾಪ್ ಹಾಗೂ ಎರಡು ಕಾರುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ನೈಜೀರಿಯಾ ಮೂಲದ ನ್ವಾನ್ಯಾ ಫ್ರಾನ್ಸಿಸ್ ಬೋರ್ಟೆಂಗ್ ಸ್ಟುಡೆಂಟ್ ವೀಸಾದಡಿ ಭಾರತಕ್ಕೆ ಬಂದು ಅಕ್ರಮ ವಾಸ್ತವ್ಯ ಮಾಡಿದ್ದರು. ವೀಸಾ ಅವಧಿ ಮುಗಿದರೂ ಆಕ್ರಮವಾಗಿ ನೆಲೆಸಿದ್ದ ನ್ವಾನ್ಯಾ ಅವರು ಕೃತ್ಯದಲ್ಲಿ ಮುಖ್ಯ ಪಾತ್ರವಹಿಸಿದ್ದಾರೆ ಎಂದು ತಿಳಿದುಬಂದಿದೆ.

ಕಮ್ಮನಹಳ್ಳಿಯ ಪ್ರದೀಪ್ ಕುಮಾರ್ ಡ್ರಗ್ ಪೆಡ್ಲರ್ ಆಗಿದ್ದ. ಮಂಗಳೂರು ಮೂಲದ ಪ್ರದೀಪ್ ಕುಮಾರ್ ಬೆಂಗಳೂರಿನಲ್ಲಿ ಹೋಟೆಲ್ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ವಿದ್ಯಾಭ್ಯಾಸ ನಡೆಸುತ್ತಿದ್ದ. ಜೊತೆಗೆ ರೆಡ್ ಬಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಡಾರ್ಕ್ ವೆಬ್ ಮತ್ತು ವಿಕ್ಕರ್ ಮೆಸೆಂಜರ್ ಮೂಲಕ ಅಮಲು ಪದಾರ್ಥ ಖರೀದಿ ಮಾಡುತ್ತಿದ್ದ ಎಂದು ಮಾಹಿತಿ ತಿಳಿದುಬಂದಿದೆ. ಉತ್ತರ ವಿಭಾಗ ಪೊಲೀಸರಿಂದ ವಿಚಾರಣೆ ಮುಂದುವರಿದೆ.

ಜೆ.ಸಿ. ನಗರ ಹಾಗೂ ಸಂಜಯನಗರ ಪೊಲೀಸರಿಂದ ಜಂಟಿ ಕಾರ್ಯಾಚರಣೆ ನಡೆಸಲಾಗಿದ್ದು, ನೈಜಿರಿಯನ್ ಪ್ರಜೆ ಸೇರಿ ಒಟ್ಟು 10 ಆರೋಪಿಗಳ ಬಂಧನವಾಗಿದೆ.

ಇದನ್ನೂ ಓದಿ: ಬಾಯ್​ಫ್ರೆಂಡ್​ ಜತೆ ಗಾಂಜಾ ಸೇವಿಸುವಾಗ ಬಲೆಗೆ ಬಿದ್ದ ಮತ್ತೋರ್ವ ನಟಿ; ವೈದ್ಯಕೀಯ ಪರೀಕ್ಷೆಯಲ್ಲೂ ನಿಷೇಧಿತ ವಸ್ತು ಸೇವನೆ ದೃಢ

ಬೆಂಗಳೂರು: ಮೀನಿನ ಬಾಕ್ಸ್​ನಲ್ಲಿ ಗಾಂಜಾ ಸಾಗಿಸುತ್ತಿದ್ದ ಮೂವರ ಸೆರೆ

‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್