AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ 11 ಜನ ವಿದ್ಯಾರ್ಥಿಗಳ ಬಂಧನ; ಉತ್ತರ ವಿಭಾಗದ ಪೊಲೀಸರಿಂದ ವಿಚಾರಣೆ

ಜೆ.ಸಿ. ನಗರ ಹಾಗೂ ಸಂಜಯನಗರ ಪೊಲೀಸರಿಂದ ಜಂಟಿ ಕಾರ್ಯಾಚರಣೆ ನಡೆಸಲಾಗಿದ್ದು, ನೈಜಿರಿಯನ್ ಪ್ರಜೆ ಸೇರಿ ಒಟ್ಟು 10 ಆರೋಪಿಗಳ ಬಂಧನವಾಗಿದೆ.

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ 11 ಜನ ವಿದ್ಯಾರ್ಥಿಗಳ ಬಂಧನ; ಉತ್ತರ ವಿಭಾಗದ ಪೊಲೀಸರಿಂದ ವಿಚಾರಣೆ
ಡ್ರಗ್ ಕೇಸ್​ನಲ್ಲಿ ಬಂಧಿತ ಆರೋಪಿಗಳು
TV9 Web
| Edited By: |

Updated on: Jul 06, 2021 | 3:41 PM

Share

ಬೆಂಗಳೂರು: ಡ್ರಗ್ಸ್​ ಕೇಸ್​ನಲ್ಲಿ ವಿದ್ಯಾರ್ಥಿಗಳು ಸಿಕ್ಕಿಬಿದ್ದಿರುವ ಆತಂಕಕಾರಿ ಘಟನೆ ನಗರದಲ್ಲಿ ನಡೆದಿದೆ. ಜೆ.ಸಿ. ನಗರ ಹಾಗೂ ಸಂಜಯನಗರ ಪೊಲೀಸರಿಂದ ಡ್ರಗ್ಸ್ ಪ್ರಕರಣದಲ್ಲಿ 11 ಜನರ ಸೆರೆಯಾಗಿದೆ. 60 ಗ್ರಾಂ ವೀಡ್ ಆಯಿಲ್, 1.1 ಕೆಜಿ ಗಾಂಜಾವನ್ನು ವಿದ್ಯಾರ್ಥಿಗಳ ಗುಂಪಿನಿಂದ ವಶಪಡಿಸಿಕೊಳ್ಳಲಾಗಿದೆ. ಸ್ಯಾಂಡಲ್​ವುಡ್, ಸೆಲೆಬ್ರಿಟಿ ಮುಂತಾದ ಕಡೆಯಲ್ಲಿ ಸದ್ದುಮಾಡಿದ್ದ ಡ್ರಗ್ಸ್ ಜಾಲದ ಪ್ರಕರಣ ಇದೀಗ ವಿದ್ಯಾರ್ಥಿ ವಲಯವನ್ನೂ ಬಿಟ್ಟಿಲ್ಲ ಎಂಬುದನ್ನು ಸೂಚಿಸಿದೆ. ವಿದ್ಯಾರ್ಥಿಗಳೂ ಈ ಜಾಲಕ್ಕೆ ಸಿಲುಕಿರುವುದು ಆತಂಕಕಾರಿ ಬೆಳವಣಿಗೆ ಆಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಿಂದ 137 ಎಂಡಿಎಂಎ, 8.5 ಗ್ರಾಂ ಕೊಕೇನ್, 1 ಲ್ಯಾಪ್‌ಟಾಪ್ ಹಾಗೂ ಎರಡು ಕಾರುಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ನೈಜೀರಿಯಾ ಮೂಲದ ನ್ವಾನ್ಯಾ ಫ್ರಾನ್ಸಿಸ್ ಬೋರ್ಟೆಂಗ್ ಸ್ಟುಡೆಂಟ್ ವೀಸಾದಡಿ ಭಾರತಕ್ಕೆ ಬಂದು ಅಕ್ರಮ ವಾಸ್ತವ್ಯ ಮಾಡಿದ್ದರು. ವೀಸಾ ಅವಧಿ ಮುಗಿದರೂ ಆಕ್ರಮವಾಗಿ ನೆಲೆಸಿದ್ದ ನ್ವಾನ್ಯಾ ಅವರು ಕೃತ್ಯದಲ್ಲಿ ಮುಖ್ಯ ಪಾತ್ರವಹಿಸಿದ್ದಾರೆ ಎಂದು ತಿಳಿದುಬಂದಿದೆ.

ಕಮ್ಮನಹಳ್ಳಿಯ ಪ್ರದೀಪ್ ಕುಮಾರ್ ಡ್ರಗ್ ಪೆಡ್ಲರ್ ಆಗಿದ್ದ. ಮಂಗಳೂರು ಮೂಲದ ಪ್ರದೀಪ್ ಕುಮಾರ್ ಬೆಂಗಳೂರಿನಲ್ಲಿ ಹೋಟೆಲ್ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ವಿದ್ಯಾಭ್ಯಾಸ ನಡೆಸುತ್ತಿದ್ದ. ಜೊತೆಗೆ ರೆಡ್ ಬಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಡಾರ್ಕ್ ವೆಬ್ ಮತ್ತು ವಿಕ್ಕರ್ ಮೆಸೆಂಜರ್ ಮೂಲಕ ಅಮಲು ಪದಾರ್ಥ ಖರೀದಿ ಮಾಡುತ್ತಿದ್ದ ಎಂದು ಮಾಹಿತಿ ತಿಳಿದುಬಂದಿದೆ. ಉತ್ತರ ವಿಭಾಗ ಪೊಲೀಸರಿಂದ ವಿಚಾರಣೆ ಮುಂದುವರಿದೆ.

ಜೆ.ಸಿ. ನಗರ ಹಾಗೂ ಸಂಜಯನಗರ ಪೊಲೀಸರಿಂದ ಜಂಟಿ ಕಾರ್ಯಾಚರಣೆ ನಡೆಸಲಾಗಿದ್ದು, ನೈಜಿರಿಯನ್ ಪ್ರಜೆ ಸೇರಿ ಒಟ್ಟು 10 ಆರೋಪಿಗಳ ಬಂಧನವಾಗಿದೆ.

ಇದನ್ನೂ ಓದಿ: ಬಾಯ್​ಫ್ರೆಂಡ್​ ಜತೆ ಗಾಂಜಾ ಸೇವಿಸುವಾಗ ಬಲೆಗೆ ಬಿದ್ದ ಮತ್ತೋರ್ವ ನಟಿ; ವೈದ್ಯಕೀಯ ಪರೀಕ್ಷೆಯಲ್ಲೂ ನಿಷೇಧಿತ ವಸ್ತು ಸೇವನೆ ದೃಢ

ಬೆಂಗಳೂರು: ಮೀನಿನ ಬಾಕ್ಸ್​ನಲ್ಲಿ ಗಾಂಜಾ ಸಾಗಿಸುತ್ತಿದ್ದ ಮೂವರ ಸೆರೆ

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್