Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವನ ಮನೆಯಲ್ಲೇ ಕಳ್ಳತನ ಮಾಡಿದ್ದ, ಮಾಲು‌ ಮಾರಲಾಗದೆ ಪರದಾಡ್ತಿದ್ದ ಚೋರ ಸಿಕ್ಕಿಬಿದ್ದ!

ಬೆಂಗಳೂರು: ಕೊರೊನಾ ಲಾಕ್​ಡೌನ್​ ಅನ್ನೇ ಬಂಡವಾಳ ಮಾಡಿಕೊಂಡು ಸ್ವಂತ ಭಾವನ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ. ಸುದ್ದಗುಂಟೆಪಾಳ್ಯ ಠಾಣಾ ಪೊಲೀಸರರು ಆರೋಪಿ ಸೈಯ್ಯದ್ ಮಸೂದ್​ನನ್ನು ಬಂಧಿಸಿದ್ದಾರೆ. ಆರೋಪಿ ಸೈಯ್ಯದ್, ಅಬ್ದುಲ್ ರಶೀದ್ ಮೇಖ್ರಿ ಪತ್ನಿಯ ಸಹೋದರನಾಗಿದ್ದಾನೆ. ಹಿಂದೆ ಅಬ್ದುಲ್ ರಶೀದ್ ಮನೆಯಲ್ಲಿ‌ ಕಾರು ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಪರಸ್ಪರ ಭಿನ್ನಾಭಿಪ್ರಾಯಗಳಿಂದ ಸೈಯದ್ ಮಸೂದ್ ಕೆಲಸ ಬಿಟ್ಟಿದ್ದ. ಲಾಕ್​ಡೌನ್‌ ವೇಳೆ ಬೆನ್ಸನ್ ಟೌನಿನಲ್ಲಿದ್ದ ಮಗಳ ಮನೆಗೆ ಅಬ್ದುಲ್ ರಶೀದ್ ಹೋಗಿದ್ದ. ಆಗ ಅಬ್ದುಲ್ ಮಗಳ ಮನೆಯಲ್ಲಿ‌ […]

ಭಾವನ ಮನೆಯಲ್ಲೇ ಕಳ್ಳತನ ಮಾಡಿದ್ದ, ಮಾಲು‌ ಮಾರಲಾಗದೆ ಪರದಾಡ್ತಿದ್ದ ಚೋರ ಸಿಕ್ಕಿಬಿದ್ದ!
Follow us
ಸಾಧು ಶ್ರೀನಾಥ್​
|

Updated on:May 18, 2020 | 12:53 PM

ಬೆಂಗಳೂರು: ಕೊರೊನಾ ಲಾಕ್​ಡೌನ್​ ಅನ್ನೇ ಬಂಡವಾಳ ಮಾಡಿಕೊಂಡು ಸ್ವಂತ ಭಾವನ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ. ಸುದ್ದಗುಂಟೆಪಾಳ್ಯ ಠಾಣಾ ಪೊಲೀಸರರು ಆರೋಪಿ ಸೈಯ್ಯದ್ ಮಸೂದ್​ನನ್ನು ಬಂಧಿಸಿದ್ದಾರೆ.

ಆರೋಪಿ ಸೈಯ್ಯದ್, ಅಬ್ದುಲ್ ರಶೀದ್ ಮೇಖ್ರಿ ಪತ್ನಿಯ ಸಹೋದರನಾಗಿದ್ದಾನೆ. ಹಿಂದೆ ಅಬ್ದುಲ್ ರಶೀದ್ ಮನೆಯಲ್ಲಿ‌ ಕಾರು ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಪರಸ್ಪರ ಭಿನ್ನಾಭಿಪ್ರಾಯಗಳಿಂದ ಸೈಯದ್ ಮಸೂದ್ ಕೆಲಸ ಬಿಟ್ಟಿದ್ದ. ಲಾಕ್​ಡೌನ್‌ ವೇಳೆ ಬೆನ್ಸನ್ ಟೌನಿನಲ್ಲಿದ್ದ ಮಗಳ ಮನೆಗೆ ಅಬ್ದುಲ್ ರಶೀದ್ ಹೋಗಿದ್ದ. ಆಗ ಅಬ್ದುಲ್ ಮಗಳ ಮನೆಯಲ್ಲಿ‌ ಸೈಯದ್ ಮಸೂದ್ ಸಹೋದರಿ ಮನೆಗೆಲಸ ಮಾಡುತ್ತಿದ್ದರು.

ಕದ್ದ ಮಾಲು‌ ಮಾರಲಾಗದೆ ಪರದಾಡುತ್ತಿದ್ದ: ರಶೀದ್ ಮನೆಯಲ್ಲಿ‌ ಹಣ, ಒಡವೆಗಳಿರುವ ವಿಚಾರವನ್ನ ಸಹೋದರನ ಮುಂದೆ ಹೇಳಿದ್ದಳು. ಈ ಹಿಂದೆ ಕೆಲಸ ಮಾಡಿದ್ದ ಮನೆಯಾದ್ದರಿಂದ ಸಲೀಸಾಗಿ ಬೀಗ ಒಡೆದು ಮಸೂದ್ ಕಳ್ಳತನ ಮಾಡಿದ್ದ. ಲಾಕ್​ಡೌನ್ ಸಂದರ್ಭದಲ್ಲಿ ಕದ್ದ ಮಾಲು‌ ಮಾರಲಾಗದೆ ಪರದಾಡುತ್ತಿದ್ದ. ಕಳ್ಳತನ ಸಂಬಂಧ ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಿಸಿಟಿವಿ ದೃಶ್ಯಗಳನ್ನ ಪರಿಶೀಲಿಸಿದಾಗ ಮಾಲೀಕನ ಭಾವನೇ ಕಳ್ಳ ಎಂಬುದು ಪತ್ತೆಯಾಗಿದೆ. ಪರಸ್ಪರ ರಾಜಿಯಾಗಲು ಆರೋಪಿ ಹಾಗೂ ಮನೆ ಮಾಲೀಕ ಮುಂದಾಗಿದ್ದರು. ಅಷ್ಟರಲ್ಲಿ‌ ಆರೋಪಿ ಮಸೂದ್​ನನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 6 ಲಕ್ಷ ನಗದು, 171 ಗ್ರಾಂ ಚಿನ್ನ, ಮೈಕ್ರೋ ಓವೆನ್, ಸೀರೆಗಳು, ಆಸ್ತಿ ಪತ್ರಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

Published On - 12:49 pm, Mon, 18 May 20

ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ವ್ಯಾಪಾರಿಗಳು ಹೆಸರು ನೋಂದಾಯಿಸಿಕೊಳ್ಳಲು ಏಪ್ರಿಲ್ 30 ಕಡೇದಿನ: ಶಿವಕುಮಾರ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
ಚೀಟಿಯಲ್ಲಿ ಏನು ಬರೆದಿತ್ತು ಅಂತ ಮುಂದಿನ ದಿನಗಳಲ್ಲಿ ಹೇಳ್ತೇನೆ: ಯತ್ನಾಳ್
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
VIDEO: CSK ಮತ್ತೆ ಮೋಸದಾಟ? ಅನುಮಾನ ಹುಟ್ಟಿಸಿದ ವಿಡಿಯೋ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ಪರೋಕ್ಷವಾಗಿ ಮತ್ತೊಬ್ಬ ಸಚಿವನ ಕಡೆ ಬೊಟ್ಟು ಮಾಡುತ್ತಿದ್ದಾರೆ: ರವಿ
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣ ದೂರು ದಾಖಲಿಸದ ಹೊರತು ನಾವೇನೂ ಮಾಡಲಾಗದು: ಪರಮೇಶ್ವರ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ರಾಜಣ್ಣರೊಂದಿಗೆ ಮೊದ್ಲಿಂದ್ಲೂ ಸಲುಗೆಯಿಂದ ಇದ್ದೇನೆ: ಡಾ ರಂಗನಾಥ್
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ನಾಗ್ಪುರ ಹಿಂಸಾಚಾರದ ಪ್ರಮುಖ ಆರೋಪಿ ಫಾಹಿಂ ಖಾನ್ ಮನೆ ನೆಲಸಮ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಬೆಳೆಸಿದ ವ್ಯಕ್ತಿಗಳ ಮೇಲೆ ಯಶ್​ಗೆ ಅದೆಂಥಾ ಗೌರವ; ಇಲ್ಲಿದೆ ಸಾಕ್ಷಿ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ
ಮುನಿರತ್ನ ಮಾಡಿರುವ ಆರೋಪಗಳ ಬಗ್ಗೆ ನನಗೆ ಗೊತ್ತಿಲ್ಲ: ರಾಜಣ್ಣ