AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವನ ಮನೆಯಲ್ಲೇ ಕಳ್ಳತನ ಮಾಡಿದ್ದ, ಮಾಲು‌ ಮಾರಲಾಗದೆ ಪರದಾಡ್ತಿದ್ದ ಚೋರ ಸಿಕ್ಕಿಬಿದ್ದ!

ಬೆಂಗಳೂರು: ಕೊರೊನಾ ಲಾಕ್​ಡೌನ್​ ಅನ್ನೇ ಬಂಡವಾಳ ಮಾಡಿಕೊಂಡು ಸ್ವಂತ ಭಾವನ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ. ಸುದ್ದಗುಂಟೆಪಾಳ್ಯ ಠಾಣಾ ಪೊಲೀಸರರು ಆರೋಪಿ ಸೈಯ್ಯದ್ ಮಸೂದ್​ನನ್ನು ಬಂಧಿಸಿದ್ದಾರೆ. ಆರೋಪಿ ಸೈಯ್ಯದ್, ಅಬ್ದುಲ್ ರಶೀದ್ ಮೇಖ್ರಿ ಪತ್ನಿಯ ಸಹೋದರನಾಗಿದ್ದಾನೆ. ಹಿಂದೆ ಅಬ್ದುಲ್ ರಶೀದ್ ಮನೆಯಲ್ಲಿ‌ ಕಾರು ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಪರಸ್ಪರ ಭಿನ್ನಾಭಿಪ್ರಾಯಗಳಿಂದ ಸೈಯದ್ ಮಸೂದ್ ಕೆಲಸ ಬಿಟ್ಟಿದ್ದ. ಲಾಕ್​ಡೌನ್‌ ವೇಳೆ ಬೆನ್ಸನ್ ಟೌನಿನಲ್ಲಿದ್ದ ಮಗಳ ಮನೆಗೆ ಅಬ್ದುಲ್ ರಶೀದ್ ಹೋಗಿದ್ದ. ಆಗ ಅಬ್ದುಲ್ ಮಗಳ ಮನೆಯಲ್ಲಿ‌ […]

ಭಾವನ ಮನೆಯಲ್ಲೇ ಕಳ್ಳತನ ಮಾಡಿದ್ದ, ಮಾಲು‌ ಮಾರಲಾಗದೆ ಪರದಾಡ್ತಿದ್ದ ಚೋರ ಸಿಕ್ಕಿಬಿದ್ದ!
ಸಾಧು ಶ್ರೀನಾಥ್​
|

Updated on:May 18, 2020 | 12:53 PM

Share

ಬೆಂಗಳೂರು: ಕೊರೊನಾ ಲಾಕ್​ಡೌನ್​ ಅನ್ನೇ ಬಂಡವಾಳ ಮಾಡಿಕೊಂಡು ಸ್ವಂತ ಭಾವನ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ. ಸುದ್ದಗುಂಟೆಪಾಳ್ಯ ಠಾಣಾ ಪೊಲೀಸರರು ಆರೋಪಿ ಸೈಯ್ಯದ್ ಮಸೂದ್​ನನ್ನು ಬಂಧಿಸಿದ್ದಾರೆ.

ಆರೋಪಿ ಸೈಯ್ಯದ್, ಅಬ್ದುಲ್ ರಶೀದ್ ಮೇಖ್ರಿ ಪತ್ನಿಯ ಸಹೋದರನಾಗಿದ್ದಾನೆ. ಹಿಂದೆ ಅಬ್ದುಲ್ ರಶೀದ್ ಮನೆಯಲ್ಲಿ‌ ಕಾರು ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಪರಸ್ಪರ ಭಿನ್ನಾಭಿಪ್ರಾಯಗಳಿಂದ ಸೈಯದ್ ಮಸೂದ್ ಕೆಲಸ ಬಿಟ್ಟಿದ್ದ. ಲಾಕ್​ಡೌನ್‌ ವೇಳೆ ಬೆನ್ಸನ್ ಟೌನಿನಲ್ಲಿದ್ದ ಮಗಳ ಮನೆಗೆ ಅಬ್ದುಲ್ ರಶೀದ್ ಹೋಗಿದ್ದ. ಆಗ ಅಬ್ದುಲ್ ಮಗಳ ಮನೆಯಲ್ಲಿ‌ ಸೈಯದ್ ಮಸೂದ್ ಸಹೋದರಿ ಮನೆಗೆಲಸ ಮಾಡುತ್ತಿದ್ದರು.

ಕದ್ದ ಮಾಲು‌ ಮಾರಲಾಗದೆ ಪರದಾಡುತ್ತಿದ್ದ: ರಶೀದ್ ಮನೆಯಲ್ಲಿ‌ ಹಣ, ಒಡವೆಗಳಿರುವ ವಿಚಾರವನ್ನ ಸಹೋದರನ ಮುಂದೆ ಹೇಳಿದ್ದಳು. ಈ ಹಿಂದೆ ಕೆಲಸ ಮಾಡಿದ್ದ ಮನೆಯಾದ್ದರಿಂದ ಸಲೀಸಾಗಿ ಬೀಗ ಒಡೆದು ಮಸೂದ್ ಕಳ್ಳತನ ಮಾಡಿದ್ದ. ಲಾಕ್​ಡೌನ್ ಸಂದರ್ಭದಲ್ಲಿ ಕದ್ದ ಮಾಲು‌ ಮಾರಲಾಗದೆ ಪರದಾಡುತ್ತಿದ್ದ. ಕಳ್ಳತನ ಸಂಬಂಧ ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಿಸಿಟಿವಿ ದೃಶ್ಯಗಳನ್ನ ಪರಿಶೀಲಿಸಿದಾಗ ಮಾಲೀಕನ ಭಾವನೇ ಕಳ್ಳ ಎಂಬುದು ಪತ್ತೆಯಾಗಿದೆ. ಪರಸ್ಪರ ರಾಜಿಯಾಗಲು ಆರೋಪಿ ಹಾಗೂ ಮನೆ ಮಾಲೀಕ ಮುಂದಾಗಿದ್ದರು. ಅಷ್ಟರಲ್ಲಿ‌ ಆರೋಪಿ ಮಸೂದ್​ನನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 6 ಲಕ್ಷ ನಗದು, 171 ಗ್ರಾಂ ಚಿನ್ನ, ಮೈಕ್ರೋ ಓವೆನ್, ಸೀರೆಗಳು, ಆಸ್ತಿ ಪತ್ರಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

Published On - 12:49 pm, Mon, 18 May 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು