AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವನ ಮನೆಯಲ್ಲೇ ಕಳ್ಳತನ ಮಾಡಿದ್ದ, ಮಾಲು‌ ಮಾರಲಾಗದೆ ಪರದಾಡ್ತಿದ್ದ ಚೋರ ಸಿಕ್ಕಿಬಿದ್ದ!

ಬೆಂಗಳೂರು: ಕೊರೊನಾ ಲಾಕ್​ಡೌನ್​ ಅನ್ನೇ ಬಂಡವಾಳ ಮಾಡಿಕೊಂಡು ಸ್ವಂತ ಭಾವನ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ. ಸುದ್ದಗುಂಟೆಪಾಳ್ಯ ಠಾಣಾ ಪೊಲೀಸರರು ಆರೋಪಿ ಸೈಯ್ಯದ್ ಮಸೂದ್​ನನ್ನು ಬಂಧಿಸಿದ್ದಾರೆ. ಆರೋಪಿ ಸೈಯ್ಯದ್, ಅಬ್ದುಲ್ ರಶೀದ್ ಮೇಖ್ರಿ ಪತ್ನಿಯ ಸಹೋದರನಾಗಿದ್ದಾನೆ. ಹಿಂದೆ ಅಬ್ದುಲ್ ರಶೀದ್ ಮನೆಯಲ್ಲಿ‌ ಕಾರು ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಪರಸ್ಪರ ಭಿನ್ನಾಭಿಪ್ರಾಯಗಳಿಂದ ಸೈಯದ್ ಮಸೂದ್ ಕೆಲಸ ಬಿಟ್ಟಿದ್ದ. ಲಾಕ್​ಡೌನ್‌ ವೇಳೆ ಬೆನ್ಸನ್ ಟೌನಿನಲ್ಲಿದ್ದ ಮಗಳ ಮನೆಗೆ ಅಬ್ದುಲ್ ರಶೀದ್ ಹೋಗಿದ್ದ. ಆಗ ಅಬ್ದುಲ್ ಮಗಳ ಮನೆಯಲ್ಲಿ‌ […]

ಭಾವನ ಮನೆಯಲ್ಲೇ ಕಳ್ಳತನ ಮಾಡಿದ್ದ, ಮಾಲು‌ ಮಾರಲಾಗದೆ ಪರದಾಡ್ತಿದ್ದ ಚೋರ ಸಿಕ್ಕಿಬಿದ್ದ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 18, 2020 | 12:53 PM

Share

ಬೆಂಗಳೂರು: ಕೊರೊನಾ ಲಾಕ್​ಡೌನ್​ ಅನ್ನೇ ಬಂಡವಾಳ ಮಾಡಿಕೊಂಡು ಸ್ವಂತ ಭಾವನ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ. ಸುದ್ದಗುಂಟೆಪಾಳ್ಯ ಠಾಣಾ ಪೊಲೀಸರರು ಆರೋಪಿ ಸೈಯ್ಯದ್ ಮಸೂದ್​ನನ್ನು ಬಂಧಿಸಿದ್ದಾರೆ.

ಆರೋಪಿ ಸೈಯ್ಯದ್, ಅಬ್ದುಲ್ ರಶೀದ್ ಮೇಖ್ರಿ ಪತ್ನಿಯ ಸಹೋದರನಾಗಿದ್ದಾನೆ. ಹಿಂದೆ ಅಬ್ದುಲ್ ರಶೀದ್ ಮನೆಯಲ್ಲಿ‌ ಕಾರು ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಪರಸ್ಪರ ಭಿನ್ನಾಭಿಪ್ರಾಯಗಳಿಂದ ಸೈಯದ್ ಮಸೂದ್ ಕೆಲಸ ಬಿಟ್ಟಿದ್ದ. ಲಾಕ್​ಡೌನ್‌ ವೇಳೆ ಬೆನ್ಸನ್ ಟೌನಿನಲ್ಲಿದ್ದ ಮಗಳ ಮನೆಗೆ ಅಬ್ದುಲ್ ರಶೀದ್ ಹೋಗಿದ್ದ. ಆಗ ಅಬ್ದುಲ್ ಮಗಳ ಮನೆಯಲ್ಲಿ‌ ಸೈಯದ್ ಮಸೂದ್ ಸಹೋದರಿ ಮನೆಗೆಲಸ ಮಾಡುತ್ತಿದ್ದರು.

ಕದ್ದ ಮಾಲು‌ ಮಾರಲಾಗದೆ ಪರದಾಡುತ್ತಿದ್ದ: ರಶೀದ್ ಮನೆಯಲ್ಲಿ‌ ಹಣ, ಒಡವೆಗಳಿರುವ ವಿಚಾರವನ್ನ ಸಹೋದರನ ಮುಂದೆ ಹೇಳಿದ್ದಳು. ಈ ಹಿಂದೆ ಕೆಲಸ ಮಾಡಿದ್ದ ಮನೆಯಾದ್ದರಿಂದ ಸಲೀಸಾಗಿ ಬೀಗ ಒಡೆದು ಮಸೂದ್ ಕಳ್ಳತನ ಮಾಡಿದ್ದ. ಲಾಕ್​ಡೌನ್ ಸಂದರ್ಭದಲ್ಲಿ ಕದ್ದ ಮಾಲು‌ ಮಾರಲಾಗದೆ ಪರದಾಡುತ್ತಿದ್ದ. ಕಳ್ಳತನ ಸಂಬಂಧ ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಿಸಿಟಿವಿ ದೃಶ್ಯಗಳನ್ನ ಪರಿಶೀಲಿಸಿದಾಗ ಮಾಲೀಕನ ಭಾವನೇ ಕಳ್ಳ ಎಂಬುದು ಪತ್ತೆಯಾಗಿದೆ. ಪರಸ್ಪರ ರಾಜಿಯಾಗಲು ಆರೋಪಿ ಹಾಗೂ ಮನೆ ಮಾಲೀಕ ಮುಂದಾಗಿದ್ದರು. ಅಷ್ಟರಲ್ಲಿ‌ ಆರೋಪಿ ಮಸೂದ್​ನನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 6 ಲಕ್ಷ ನಗದು, 171 ಗ್ರಾಂ ಚಿನ್ನ, ಮೈಕ್ರೋ ಓವೆನ್, ಸೀರೆಗಳು, ಆಸ್ತಿ ಪತ್ರಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

Published On - 12:49 pm, Mon, 18 May 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!