AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾವನ ಮನೆಯಲ್ಲೇ ಕಳ್ಳತನ ಮಾಡಿದ್ದ, ಮಾಲು‌ ಮಾರಲಾಗದೆ ಪರದಾಡ್ತಿದ್ದ ಚೋರ ಸಿಕ್ಕಿಬಿದ್ದ!

ಬೆಂಗಳೂರು: ಕೊರೊನಾ ಲಾಕ್​ಡೌನ್​ ಅನ್ನೇ ಬಂಡವಾಳ ಮಾಡಿಕೊಂಡು ಸ್ವಂತ ಭಾವನ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ. ಸುದ್ದಗುಂಟೆಪಾಳ್ಯ ಠಾಣಾ ಪೊಲೀಸರರು ಆರೋಪಿ ಸೈಯ್ಯದ್ ಮಸೂದ್​ನನ್ನು ಬಂಧಿಸಿದ್ದಾರೆ. ಆರೋಪಿ ಸೈಯ್ಯದ್, ಅಬ್ದುಲ್ ರಶೀದ್ ಮೇಖ್ರಿ ಪತ್ನಿಯ ಸಹೋದರನಾಗಿದ್ದಾನೆ. ಹಿಂದೆ ಅಬ್ದುಲ್ ರಶೀದ್ ಮನೆಯಲ್ಲಿ‌ ಕಾರು ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಪರಸ್ಪರ ಭಿನ್ನಾಭಿಪ್ರಾಯಗಳಿಂದ ಸೈಯದ್ ಮಸೂದ್ ಕೆಲಸ ಬಿಟ್ಟಿದ್ದ. ಲಾಕ್​ಡೌನ್‌ ವೇಳೆ ಬೆನ್ಸನ್ ಟೌನಿನಲ್ಲಿದ್ದ ಮಗಳ ಮನೆಗೆ ಅಬ್ದುಲ್ ರಶೀದ್ ಹೋಗಿದ್ದ. ಆಗ ಅಬ್ದುಲ್ ಮಗಳ ಮನೆಯಲ್ಲಿ‌ […]

ಭಾವನ ಮನೆಯಲ್ಲೇ ಕಳ್ಳತನ ಮಾಡಿದ್ದ, ಮಾಲು‌ ಮಾರಲಾಗದೆ ಪರದಾಡ್ತಿದ್ದ ಚೋರ ಸಿಕ್ಕಿಬಿದ್ದ!
ಸಾಧು ಶ್ರೀನಾಥ್​
|

Updated on:May 18, 2020 | 12:53 PM

Share

ಬೆಂಗಳೂರು: ಕೊರೊನಾ ಲಾಕ್​ಡೌನ್​ ಅನ್ನೇ ಬಂಡವಾಳ ಮಾಡಿಕೊಂಡು ಸ್ವಂತ ಭಾವನ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ. ಸುದ್ದಗುಂಟೆಪಾಳ್ಯ ಠಾಣಾ ಪೊಲೀಸರರು ಆರೋಪಿ ಸೈಯ್ಯದ್ ಮಸೂದ್​ನನ್ನು ಬಂಧಿಸಿದ್ದಾರೆ.

ಆರೋಪಿ ಸೈಯ್ಯದ್, ಅಬ್ದುಲ್ ರಶೀದ್ ಮೇಖ್ರಿ ಪತ್ನಿಯ ಸಹೋದರನಾಗಿದ್ದಾನೆ. ಹಿಂದೆ ಅಬ್ದುಲ್ ರಶೀದ್ ಮನೆಯಲ್ಲಿ‌ ಕಾರು ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ. ಪರಸ್ಪರ ಭಿನ್ನಾಭಿಪ್ರಾಯಗಳಿಂದ ಸೈಯದ್ ಮಸೂದ್ ಕೆಲಸ ಬಿಟ್ಟಿದ್ದ. ಲಾಕ್​ಡೌನ್‌ ವೇಳೆ ಬೆನ್ಸನ್ ಟೌನಿನಲ್ಲಿದ್ದ ಮಗಳ ಮನೆಗೆ ಅಬ್ದುಲ್ ರಶೀದ್ ಹೋಗಿದ್ದ. ಆಗ ಅಬ್ದುಲ್ ಮಗಳ ಮನೆಯಲ್ಲಿ‌ ಸೈಯದ್ ಮಸೂದ್ ಸಹೋದರಿ ಮನೆಗೆಲಸ ಮಾಡುತ್ತಿದ್ದರು.

ಕದ್ದ ಮಾಲು‌ ಮಾರಲಾಗದೆ ಪರದಾಡುತ್ತಿದ್ದ: ರಶೀದ್ ಮನೆಯಲ್ಲಿ‌ ಹಣ, ಒಡವೆಗಳಿರುವ ವಿಚಾರವನ್ನ ಸಹೋದರನ ಮುಂದೆ ಹೇಳಿದ್ದಳು. ಈ ಹಿಂದೆ ಕೆಲಸ ಮಾಡಿದ್ದ ಮನೆಯಾದ್ದರಿಂದ ಸಲೀಸಾಗಿ ಬೀಗ ಒಡೆದು ಮಸೂದ್ ಕಳ್ಳತನ ಮಾಡಿದ್ದ. ಲಾಕ್​ಡೌನ್ ಸಂದರ್ಭದಲ್ಲಿ ಕದ್ದ ಮಾಲು‌ ಮಾರಲಾಗದೆ ಪರದಾಡುತ್ತಿದ್ದ. ಕಳ್ಳತನ ಸಂಬಂಧ ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಿಸಿಟಿವಿ ದೃಶ್ಯಗಳನ್ನ ಪರಿಶೀಲಿಸಿದಾಗ ಮಾಲೀಕನ ಭಾವನೇ ಕಳ್ಳ ಎಂಬುದು ಪತ್ತೆಯಾಗಿದೆ. ಪರಸ್ಪರ ರಾಜಿಯಾಗಲು ಆರೋಪಿ ಹಾಗೂ ಮನೆ ಮಾಲೀಕ ಮುಂದಾಗಿದ್ದರು. ಅಷ್ಟರಲ್ಲಿ‌ ಆರೋಪಿ ಮಸೂದ್​ನನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 6 ಲಕ್ಷ ನಗದು, 171 ಗ್ರಾಂ ಚಿನ್ನ, ಮೈಕ್ರೋ ಓವೆನ್, ಸೀರೆಗಳು, ಆಸ್ತಿ ಪತ್ರಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

Published On - 12:49 pm, Mon, 18 May 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ