AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಟೆಲ್ ರೂಮಿನ ಕಿಟಕಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ: ಡ್ರಗ್ಸ್, ಬಡ್ಡಿ ಮಾಫಿಯಾಕ್ಕೆ ಬಲಿಯಾದ್ನಾ ಇಂಜಿನಿಯರಿಂಗ್ ವಿದ್ಯಾರ್ಥಿ?

ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ರೂಮಿನಲ್ಲಿ ವಿಧ್ಯಾರ್ಥಿ ಅನುಮಾನಾಸ್ಪದಾಗಿ ಸಾವನ್ನಪ್ಪಿದ್ದು, ವಿದ್ಯಾರ್ಥಿ ಸಾವಿನ ಸುತ್ತ ನೂರೆಂಟು ಅನುಮಾನ ಶಿಕ್ಷಣ ಸಂಸ್ಥೆಯ ಸುತ್ತ ಸುತ್ತುಕೊಂಡಿದೆ. ವಿದ್ಯಾಸಂಸ್ಥೆಯ ಕ್ಯಾಂಪಸ್‌ನಲ್ಲಿರುವ ಡ್ರಗ್ಸ್ ,ಮೀಟರ್ ಬಡ್ಡಿ ಮಾಫಿಯಾದ ಸುಳಿಗೆ ಸಿಲುಕಿ ವಿಧ್ಯಾರ್ಥಿ ಬಲಿಯಾದನಾ ಎಂಬ ಪ್ರಶ್ನೆ ಕಾಫಿನಾಡಿನಲ್ಲಿ ಸದ್ದು ಮಾಡಿದೆ.

ಹಾಸ್ಟೆಲ್ ರೂಮಿನ ಕಿಟಕಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ: ಡ್ರಗ್ಸ್, ಬಡ್ಡಿ ಮಾಫಿಯಾಕ್ಕೆ   ಬಲಿಯಾದ್ನಾ ಇಂಜಿನಿಯರಿಂಗ್ ವಿದ್ಯಾರ್ಥಿ?
ಚಿಕ್ಕಮಗಳೂರು ಇಂಜಿನಿಯರಿಂಗ್​ ವಿದ್ಯಾರ್ಥಿ ಆತ್ಮಹತ್ಯೆ
ಕಿರಣ್ ಹನುಮಂತ್​ ಮಾದಾರ್
|

Updated on: Mar 07, 2023 | 7:39 AM

Share

ಚಿಕ್ಕಮಗಳೂರು: ನಗರದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜ್ A.I.T., ಈ ಕಾಲೇಜಿನಲ್ಲಿ ನಮ್ಮ ಮಕ್ಕಳಿಗೆ ಸೀಟ್ ಸಿಕ್ಕಿದ್ರೆ ಸಾಕು ಎಂದು ಅದೆಷ್ಟೋ ಪೋಷಕರು ಬಯಸುತ್ತಾರೆ. ಆದರೆ ಇದೆ A.I.T ಕಾಲೇಜಿನ ಹಾಸ್ಟೆಲ್ ರೂಮಿನಲ್ಲಿ ದ್ವೀತಿಯ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿಧ್ಯಾರ್ಥಿ ಕಿಶೋರ್ ಎಂಬುವವರು ಹಾಸ್ಟೆಲ್ ಕಿಟಕಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಕಳೆದ ಶನಿವಾರ ಹಾಕಿದ ಹಾಸ್ಟೆಲ್ ರೂಮಿನ ಬಾಗಿಲು ಶವದ ವಾಸನೆ ಬಂದಮೇಲೆಯೇ ಓಪನ್ ಆಗಿದ್ದು. ಹೌದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಮೂಲದ ಈಶ ಯಮುನಾ ದಂಪತಿಯ ಮಗನಾದ ಕಿಶೋರ್ ಎಸ್​.ಎಸ್​.ಎಲ್​.ಸಿ ಯಲ್ಲಿ ಉತ್ತಮ ಮಾರ್ಕ್ಸ್ ತೆಗೆದುಕೊಂಡಿದ್ದ. ಚನ್ನರಾಯಪಟ್ಟಣಕ್ಕೆ ಹತ್ತಿರವಿರುವ ಚಿಕ್ಕಮಗಳೂರು ನಗರದ ಪ್ರತಿಷ್ಠಿತ A.I.T ಇಂಜಿನಿಯರಿಂಗ್ ಕಾಲೇಜಿನಲ್ಲಿ(A.I.T Engineering College) ಇಂಜಿನಿಯರಿಂಗ್ ಕೋರ್ಸ್​ಗೆ ಸೀಟ್ ಕೂಡ ಸಿಕ್ಕಿತ್ತು. ಆಟೋ ಚಾಲಕನಾದ ಈಶ ಬಡತನದ ಮಧ್ಯೆಯೂ ಮಗನ ವಿದ್ಯಾಭ್ಯಾಸಕ್ಕಾಗಿ ಪ್ರತಿಷ್ಠಿತ ಕಾಲೇಜಿಗೆ ಸೇರಿಸಿದ್ರು ಆದ್ರೆ ನಿನ್ನೆ(ಮಾ.6) ಕಾಲೇಜ್ ಹಾಸ್ಟೆಲ್​ನಿಂದ ಬಂದ ಒಂದು ಕರೆ ಈಶ ದಂಪತಿಗೆ ಬರ ಸಿಡಿಲಿನಂತೆ ಅಪ್ಪಳಿಸಿತು.

ಕಳೆದ ಶನಿವಾರ ಹಾಸ್ಟೆಲ್ ರೂಮಿನ ಒಳ ಹೋದ ಕಿಶೋರ್ ಸೋಮವಾರ ಮಧ್ಯಾಹ್ನ ಶವವಾಗಿ ಪತ್ತೆಯಾಗಿದ್ದ ಹಾಸ್ಟೆಲ್ ಕಿಟಕಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು. ಸಾವಿನ ಸುತ್ತ ನೂರೆಂಟು ಅನುಮಾನಗಳು ಎದ್ದಿದ್ದು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಕ್ಯಾಂಪಸ್​ನಲ್ಲಿ ಡ್ರಗ್ಸ್ ಮಾಫಿಯಾ, ಮೀಟರ್ ಬಡ್ಡಿ ದಂಧೆಗೆ ಕಿಶೋರ್ ಬಲಿಯಾಗಿದ್ದಾನಾ ಅನ್ನುವ ಅನುಮಾನ ಮೂಡತೊಡಗಿದೆ.

ಇದನ್ನೂ ಓದಿ:ಪ್ರಿಯಕರನ ಸಾವಿನಿಂದ ಮನನೊಂದು ಪ್ರಿಯತಮೆ ಆತ್ಮಹತ್ಯೆ: ತುಮಕೂರಿನಲ್ಲೊಂದು ಹೃದಯವಿದ್ರಾವಕ ಘಟನೆ

ಕಿಶೋರ್ ಪೋಷಕರು ಹೇಳುವಂತೆ ಮೈತುಂಬ ಸಾಲ ಮಾಡಿದ್ದು, ವಿದ್ಯಾರ್ಥಿಗಳ ಜೊತೆಗೂ ಸಾಲ ಕೇಳಿದ್ದನಂತೆ, ವಿದ್ಯಾರ್ಥಿಗಳಿಗೆ ಸಾಲ ಯಾಕೆ ಬೇಕು.? ಈ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯ ಒಳಗೆ ನಡೆಯುತ್ತ ಇರೋದೆ ಬೇರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ನಮ್ಮ ಕಾಲೇಜಿನ ಮೇಲೆ ಸಾಕಷ್ಟು ಆರೋಪ ಬಂದಿತ್ತು, ನಾವು ಈ‌ ಹಿಂದೆಯೇ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ ಎಂದು ಕಾಲೇಜು ಪ್ರಿನ್ಸಿಪಾಲ್ ಜಯರಾಮ್ ಸಮಜಾಯಿಷಿ ನೀಡಿದ್ದಾರೆ.

ಒಟ್ಟಿನಲ್ಲಿ ವಿದ್ಯಾರ್ಥಿಯ ಅನುಮಾನಾಸ್ಪದ ಸಾವು ಪ್ರತಿಷ್ಠಿತ A.I.T ಕಾಲೇಜಿನ ಸುತ್ತ ನೂರೆಂಟು ಅನುಮಾನಗಳನ್ನ ಹುಟ್ಟು ಹಾಕಿದ್ದು, ಕ್ಯಾಂಪಸ್ ಒಳಗೆ ನಡೆಯುತ್ತಿರುವ ಡ್ರಗ್ಸ್, ಬಡ್ಡಿ ಮಾಫಿಯಾದ ಕರಿ ನೆರಳಿಗೆ ಸಿಲುಕಿ‌ ವಿಧ್ಯಾರ್ಥಿ ಬಲಿಯಾದನಾ ಎಂಬ ಪ್ರಶ್ನೆ ಕಾಡತೊಡಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕಮಗಳೂರು ನಗರ ಪೊಲೀಸರು ಸೂಕ್ತ ತನಿಖೆ ನಡೆಸಿ ವಿಧ್ಯಾರ್ಥಿ ಸಾವಿಗೆ ನ್ಯಾಯ ಕೊಡಿಸುವುದರ ಜೊತೆಗೆ ಇನ್ನಷ್ಟು ವಿಧ್ಯಾರ್ಥಿಗಳು‌ ಸಾವಿನ ದಾರಿ ತುಳಿಯುವುದನ್ನ ತಪ್ಪಿಸಬೇಕಿದೆ.

ವರದಿ: ಅಶ್ವಿತ್ ಮಾವಿನಗುಣಿ ಟಿವಿ9 ಚಿಕ್ಕಮಗಳೂರು

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ