Sign In

By signing in or creating an account, you agree with Associated Broadcasting Company's Terms & Conditions and Privacy Policy.

Surat Crime: ಕೋಪದ ಕೈಗೆ ಬುದ್ಧಿ ಕೊಟ್ಟು 25 ಬಾರಿ ಚಾಕುವಿನಿಂದ ಇರಿದು ಮಗಳನ್ನೇ ಕೊಂದ ತಂದೆ

 ಕೋಪದ ಕೈಗೆ ಬುದ್ಧಿ ಕೊಟ್ಟು ವ್ಯಕ್ತಿಯೊಬ್ಬ  25 ಬಾರಿ ಚಾಕುವಿನಿಂದ ಇರಿದು  ಮಗಳನ್ನು ಹತ್ಯೆ ಮಾಡಿರುವ ಘಟನೆ ಸೂರತ್​ನಲ್ಲಿ ನಡೆದಿದೆ. ಕೌಟುಂಬಿಕ ಕಲಹದಲ್ಲಿ ಕೋಪಗೊಂಡ ವ್ಯಕ್ತಿ ಮಗಳನ್ನು ಹತ್ಯೆ ಮಾಡಿ, ಪತ್ನಿಯ ಮೇಲೂ ಹಲ್ಲೆ ನಡೆಸಿದ್ದಾನೆ.

Surat Crime: ಕೋಪದ ಕೈಗೆ ಬುದ್ಧಿ ಕೊಟ್ಟು 25 ಬಾರಿ ಚಾಕುವಿನಿಂದ ಇರಿದು ಮಗಳನ್ನೇ ಕೊಂದ ತಂದೆ
ಅಪರಾಧ
Follow us
ನಯನಾ ರಾಜೀವ್
|

Updated on:May 31, 2023 | 1:05 PM

ಕೋಪದ ಕೈಗೆ ಬುದ್ಧಿ ಕೊಟ್ಟು ವ್ಯಕ್ತಿಯೊಬ್ಬ  25 ಬಾರಿ ಚಾಕುವಿನಿಂದ ಇರಿದು  ಮಗಳನ್ನು ಹತ್ಯೆ ಮಾಡಿರುವ ಘಟನೆ ಸೂರತ್​ನಲ್ಲಿ ನಡೆದಿದೆ. ಕೌಟುಂಬಿಕ ಕಲಹದಲ್ಲಿ ಕೋಪಗೊಂಡ ವ್ಯಕ್ತಿ ಮಗಳನ್ನು ಹತ್ಯೆ ಮಾಡಿ, ಪತ್ನಿಯ ಮೇಲೂ ಹಲ್ಲೆ ನಡೆಸಿದ್ದಾನೆ. ಮೇ 18 ರ ರಾತ್ರಿ ಸೂರತ್‌ನ ಕಡೋದರಾ ಪ್ರದೇಶದಲ್ಲಿ ನಡೆದ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಪ್ರಕರಣದ ತನಿಖೆ ಮುಂದುವರೆದಂತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ರಾಮಾನುಜ ಎಂದು ಗುರುತಿಸಲಾದ ಆರೋಪಿ ತನ್ನ ಕುಟುಂಬದೊಂದಿಗೆ ಸೂರತ್‌ನ ಸತ್ಯ ನಗರ ಸೊಸೈಟಿಯಲ್ಲಿ ಬಾಡಿಗೆ ಅಪಾರ್ಟ್ಮೆಂಟ್‌ನಲ್ಲಿ ವಾಸಿಸುತ್ತಿದ್ದ, ತನಿಖಾಧಿಕಾರಿಗಳು ಮಾಹಿತಿ ನೀಡಿದಂತೆ, ತಮ್ಮ ಮಗಳು ಟೆರೇಸ್ ಮೇಲೆ ಮಲಗಿರುವ ವಿಷಯಕ್ಕೆ ಸಂಬಂಧಿಸಿದಂತೆ ಪತ್ನಿಯೊಂದಿಗೆ ನಡೆದ ಸಣ್ಣ ಜಗಳದಲ್ಲಿ ಆರೋಪಿಯು ತಾಳ್ಮೆ ಕಳೆದುಕೊಂಡಿದ್ದಾನೆ. ಪರಿಸ್ಥಿತಿ ಉಲ್ಬಣಗೊಂಡಿತು, ಹಿಂಸಾಚಾರಕ್ಕೆ ಕಾರಣವಾಯಿತು.

ಮತ್ತಷ್ಟು ಓದಿ:Delhi murder Case:ಆಕೆ ನನ್ನನ್ನು ನಿರ್ಲಕ್ಷಿಸುತ್ತಿದ್ದಳು; ಸಿಟ್ಟಿನಿಂದ ಕೊಂದೆ, ಇದಕ್ಕೆ ವಿಷಾದಿಸುತ್ತಿಲ್ಲ: ದೆಹಲಿ ಹತ್ಯೆ ಪ್ರಕರಣದ ಆರೋಪಿ

ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿರುವಂತೆ, ಸರಿಸುಮಾರು ರಾತ್ರಿ 11.20ಕ್ಕೆ, ರಾಮಾನುಜ ಮೊದಲು ತನ್ನ ಮಕ್ಕಳ ಮುಂದೆ ತನ್ನ ಹೆಂಡತಿಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಮಹಿಳೆ ಗಾಯಗೊಂಡಿರುವಾಗ, ಆಕೆಯ ಮಕ್ಕಳು ತಂದೆಯನ್ನು ಹಿಡಿಯಲು ಮುಂದಾಗಿ, ಕೋಪ ನಿಯಂತ್ರಿಸಲು ಪ್ರಯತ್ನಿಸಿದರು. ಆಗ ಕೋಪಗೊಂಡ ವ್ಯಕ್ತಿ ತನ್ನ ಮಗಳನ್ನು ಹಿಡಿದುಕೊಂಡು 25 ಬಾರಿ ಚಾಕುವಿನಿಂದ ಚುಚ್ಚಿ ಹತ್ಯೆ ಮಾಡಿದ್ದಾನೆ.

ಆಕೆ ತಪ್ಪಿಸಿಕೊಂಡು ಕೋಣೆಗೆ ಓಡಿ ಹೋಗಿದ್ದಾಳೆ, ಆದರೂ ಆತ ಬಿಡದೆ ಅಲ್ಲಿಯೇ ಹೋಗಿ ಹಲವು ಬಾರಿ ಚಾಕುವುನಿಂದ ಇರಿದಿದ್ದ, ಬಳಿಕ ಆಕೆ ಸಾವನ್ನಪ್ಪಿದ್ದಾಳೆ.

ತನ್ನ ಮಗಳ ಮೇಲೆ ಮಾರಣಾಂತಿಕ ಹಲ್ಲೆಯ ನಂತರವೂ, ರಾಮಾನುಜನು ತನ್ನ ಹೆಂಡತಿಗೆ ಹಾನಿ ಮಾಡಲು ನಿರ್ಧರಿಸಿ ಟೆರೇಸ್​ ಹತ್ತಿದ್ದ. ಈ ಬಗ್ಗೆ ಸೂರತ್ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಅಧಿಕಾರಿಗಳು ರಾಮಾನುಜರನ್ನು ಬಂಧಿಸಿದ್ಕೊದಾರೆ, ಕೊಲೆಗೆ ಬಳಸಿದ್ದ ಆಯುಧವನ್ನೂ ವಶಪಡಿಸಿಕೊಂಡಿದ್ದಾರೆ. ಆತನ ವಿರುದ್ಧ ಕೊಲೆ, ಕೊಲೆಯತ್ನ ಸೇರಿದಂತೆ ಐಪಿಸಿಯ ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:40 am, Wed, 31 May 23

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್