AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಂಕಿತ ಉಗ್ರ ತಾಲಿಬ್ ಬಂಧನ ಪ್ರಕರಣ: ವಿಎಚ್​ಪಿಯಿಂದ ಪೊಲೀಸ್ ಆಯುಕ್ತರಿಗೆ ದೂರು

ಬೆಂಗಳೂರು ನಗರದಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನ ಪ್ರಕರಣ ಸಂಬಂಧ ನಗರ ಪೊಲೀಸ್ ಆಯುಕ್ತ ಪ್ರತಾಪ್​ ರೆಡ್ಡಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ದೂರು ನೀಡಿದೆ. ಶಂಕಿತನಿಗೆ ಆಶ್ರಯ ನೀಡಿದವರ ಹಾಗೂ ಸಿಮ್ ಕಾರ್ಡ್​ ನೀಡಿದವರ ವಿರುದ್ಧ ಕ್ರಮಕ್ಕೆ ದೂರಿನಲ್ಲಿ ಒತ್ತಾಯಿಸಲಾಗಿದೆ.

ಶಂಕಿತ ಉಗ್ರ ತಾಲಿಬ್ ಬಂಧನ ಪ್ರಕರಣ: ವಿಎಚ್​ಪಿಯಿಂದ ಪೊಲೀಸ್ ಆಯುಕ್ತರಿಗೆ ದೂರು
ಶಂಕಿತ ಉಗ್ರ ತಾಲಿಬ್ ಹುಸೇನ್
TV9 Web
| Updated By: Rakesh Nayak Manchi|

Updated on: Jun 09, 2022 | 3:01 PM

Share

ಬೆಂಗಳೂರು: ನಗರದಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನ ಪ್ರಕರಣ (Suspected Talib detention case) ಸಂಬಂಧ ನಗರ ಪೊಲೀಸ್ ಆಯುಕ್ತ ಪ್ರತಾಪ್​ ರೆಡ್ಡಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ (VHP) ದೂರು (complaint) ನೀಡಿದೆ. ತಾಲೀಬ್ ಹುಸೇನ್ ನೆಲೆಸಿದ್ದ ಮಸೀದಿಯನ್ನು ಸೀಜ್ ಮಾಡಬೇಕು, ಸಿಮ್ ಕಾರ್ಡ್ ನೀಡಿದವರಿಗೆ ಹಾಗೂ ಆತನಿಗೆ ಆಶ್ರಯ ಕಲ್ಪಿಸಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ವಿಎಚ್​ಪಿ ಮುಖಂಡರಾದ ತೇಜಸ್ ಗೌಡ, ಗೋವರ್ಧನ್ ಹಾಗೂ ಶಿವಕುಮಾರ್ ಅವರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಟಿಫಿನ್ ಬಾಕ್ಸ್ ಬಾಂಬ್ ರೆಡಿ ಮಾಡಿದ್ದ ಆರೋಪ: ಶಂಕಿತ ಉಗ್ರ ತಾಲಿಬ್ ನಡೆಸಿದ್ದ ಉಗ್ರಗಾಮಿ ಚಟುವಟಿಕೆಗಳ ವಿವರ ಇಲ್ಲಿದೆ

ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಏನೇನು ಭಯೋತ್ಪಾದಕ ಚಟುವಟಿಕೆಗಳು ನಡೆದಿದೆ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಬೇಕು. ಹಿಂದೂಗಳ ಹಬ್ಬದಲ್ಲಿ ಅನುಮತಿ ಪಡೆಯಲು ಸಾಕಷ್ಟು ಒದ್ದಾಡಬೇಕು. ಆದರೆ ಮುಸ್ಲಿಮರ ಹಬ್ಬಗಳಲ್ಲಿ ಯಾವುದೇ ಅನುಮತಿ ಪಡೆಯದೆ ಆಚರಣೆ ಮಾಡಲಾಗುತ್ತಿದೆ. ರಂಜಾನ್ ಹಬ್ಬದಂದು ನಿಯಮ‌ ಉಲ್ಲಂಘನೆ ಬಗ್ಗೆಯೂ ಸೂಕ್ತ ತನಿಖೆ ನಡೆಸಬೇಕು ಎಂದು ಮನಿವಿ ಮಾಡಿದ್ದಾರೆ.

ನಮಾಜ್ ಮಾಡಬೇಡಿ ಎಂದು ಹೇಳುತ್ತಿಲ್ಲ, ಅದೆಲ್ಲವೂ ನಿಗದಿತ ಸ್ಥಳಗಳಲ್ಲಿ ಮಾಡಿಕೊಳ್ಳಲಿ. ಸಾರ್ವಜನಿಕರಿಗೆ ತೊಂದರೆ ನೀಡಿ ಹಬ್ಬ ಆಚರಣೆ ಮಾಡುವುದು ಬೇಡ. ರಂಜಾನ್ ದಿನವೂ ಕೂಡ ಯಾವುದೆ ಅನುಮತಿ ಪಡೆಯದೆ ರಸ್ತೆಗಳನ್ನ ಬ್ಲಾಕ್ ಮಾಡಿದ್ದಾರೆ. ಸಾರ್ವಜನಿಕರಿಗೆ ತೊಂದರೆ ನೀಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದಿನ ತಿಂಗಳ ಬಕ್ರೀದ್ ವೇಳೆ ಅನುಮತಿ ಇಲ್ಲದೆ ರಸ್ತೆಗಳನ್ನ ಬ್ಲಾಕ್ ಮಾಡಿಸಬೇಡಿ‌ ಎಂದು ಹಿಂದೂ ಸಂಘಟನೆಯ ಮುಖಂಡ ಗೋವರ್ಧನ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಕ್ರೈಂ: ನೈಟಿ ಹಾಕಿಕೊಂಡ ಬಂದು ಮಣಪ್ಪುರಂ ಫೈನಾನ್ಸ್​ ಕಂಪನಿ ಅಂಗಡಿ ದೋಚಲು ಯತ್ನಿಸಿದ್ದವರ ಸೆರೆ, ಬೈಕ್​ಗಳ ಡಿಕ್ಕಿ-ದಂಪತಿ ಸೇರಿ ಮೂವರ ಸಾವು

ಲೌಡ್ ಸ್ಪೀಕರ್​ಗೆ ಅನುಮತಿ ಕೊಡಬೇಡಿ. ಕಾಯ್ದೆಯಲ್ಲಿ ಏನಿದೆಯೋ ಹಾಗೆ ಅನಮತಿ ನೀಡಬೇಕು. ಈಗಾಗಲೆ ಧ್ವನಿವರ್ಧಕಗಳಿಗೆ ಪೊಲೀಸ್ ಇಲಾಖೆ ಅನುಮತಿ ನೀಡುತ್ತಿದೆ. ಆದೇಶದ ಪ್ರಕಾರ ಅನುಮತಿಯನ್ನ ನೀಡಲಿ. ಡೆಸಿಬಲ್ ಎಷ್ಟಿರಬೇಕು ಅದರ ಎತ್ತರ ಎಷ್ಟು ಎಂಬುದರ ಬಗ್ಗೆ ಈಗಾಗಲೆ ನ್ಯಾಯಾಲಯ ಸೂಚನೆ ನೀಡಿದೆ. ಅದರಂತೆ ಅನುಮತಿ ನೀಡಲಿ ಎಂದು ಹೇಳಿದ್ದಾರೆ.

ಏನಿದು ಪ್ರಕರಣ? 

ಜಮ್ಮು ಕಾಶ್ಮೀರದಿಂದ ಬೆಂಗಳೂರಿನ ಶ್ರೀರಾಮಪುರಕ್ಕೆ ಬಂದ ತಾಲಿಬ್, ತನ್ನ ಹೆಸರು ಬದಲಾಯಿಸಿಕೊಂಡು ಮಸೀದಿ ಪಕ್ಕ ಯಾರಿಗೂ ಅನುಮಾನ ಬಾರದಂತೆ ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ನೆಲೆಸಿದ್ದನು.  ಈತ ಮಸೀದಿಯಲ್ಲಿ ಪಾಠ ಪ್ರವಚನ ಮಾಡುತ್ತಿದ್ದ ಶಂಕೆಯೂ ವ್ಯಕ್ತವಾಗಿದ್ದು, ಓಕಳಿಪುರಂ ನಿವಾಸಿಯಾದ ಮೌಸೀನ್ ಎಂಬಾತ ತಾಲೀಬ್​ಗೆ ಸಿಮ್ ಕಾರ್ಡ್​ ಕೊಡಿಸಿದ್ದಾನೆ ಎನ್ನಲಾಗುತ್ತಿದೆ. ಮಂಗಳವಾರ ಜಮ್ಮು ಕಾಶ್ಮೀರದ ಪೊಲೀಸರು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿ ಕೊಂಡೊಯ್ದಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಅರೆಸ್ಟ್

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?