AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಶಂಕಿತ ಉಗ್ರ ಮಾಜ್

ಶಂಕಿತ ಉಗ್ರ ಮಾಜ್​​​ ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ ಹಿನ್ನೆಲೆ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಮಾಜ್​ನನ್ನು ಪೊಲೀಸರು ಬಿಗಿ ಪೊಲೀಸ್ ಭದ್ರತೆಯಲ್ಲಿ ಕರೆದೊಯ್ದುರು.

ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಶಂಕಿತ ಉಗ್ರ ಮಾಜ್
ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗಿಯಾದ ಶಂಕಿತ ಉಗ್ರ ಮಾಜ್
TV9 Web
| Updated By: Rakesh Nayak Manchi|

Updated on: Sep 24, 2022 | 3:16 PM

Share

ಶಿವಮೊಗ್ಗ: ಶಂಕಿತ ಉಗ್ರ (suspected terrorist) ಮಾಜ್​​​ ತಂದೆ ಹೃದಯಾಘಾತದಿಂದ ಸಾವನ್ನಪ್ಪಿದ ಹಿನ್ನೆಲೆ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಮಾಜ್​ನನ್ನು ಪೊಲೀಸರು ಬಿಗಿ ಪೊಲೀಸ್ ಭದ್ರತೆಯಲ್ಲಿ ಕರೆದೊಯ್ದುರು. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಭದ್ರತೆ ಮೂಲಕ ಪೊಲೀಸರು ಮಾಜ್​ನನ್ನು ಕರೆದೊಯ್ದರು. ಸೊಪ್ಪುಗುಡ್ಡೆಯ ತನ್ನ ಮನೆಯಲ್ಲಿ ಅರ್ಧ ಗಂಟೆ ಕಾಲ ಇದ್ದ ಮಾಜ್​ ತಂದೆಯ ಅಂತ್ಯಕ್ರಿಯೆಯ ಅಂತಿಮ ವಿಧಿವಿಧಾನದಲ್ಲಿ ಭಾಗಿಯಾದನು. ಮಾಜ್​ನನ್ನು ಮನೆಗೆ ಕರೆದೊಯ್ಯುತ್ತಿದ್ದಂತೆ ಹೈಡ್ರಾಮ ಕೂಡ ನಡೆದಿದೆ. ಮಾಜ್ ಮನೆಯ ಒಳಗೆ ಹೋಗುತ್ತಿದ್ದಂತೆ ಮನೆಯ ಬಾಗಿಲನ್ನು ಕುಟುಂಬಸ್ಥರು ಮುಚ್ಚಿದ್ದಾರೆ. ಅಷ್ಟೇ ಅಲ್ಲದೆ ಮನೆಯ ಬಳಿ ವೀಡಿಯೋ ಚಿತ್ರೀಕರಣ ಮಾಡಲು ಅಡ್ಡಿಪಡಿಸಲಾಗಿದೆ. ಬಂಧಿತ ಮಾಜ್​ನನ್ನು ಸಂಜೆ 7 ಗಂಟೆ ಒಳಗಾಗಿ ಶಿವಮೊಗ್ಗಕ್ಕೆ ಪೊಲೀಸರು ಕರೆದೊಯ್ಯಲಿದ್ದಾರೆ.

ಶಂಕಿತ ಉಗ್ರ ಮಾಜ್​​​ ತಂದೆ ಮನೀರ್ ಅಹಮದ್​(57) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮನೀರ್ ಅಹಮದ್, ಚಿಕಿತ್ಸೆ ಫಲಿಸದೇ ಮಂಗಳೂರಿನ ಫಾದರ್ ಮುಲ್ಲಾ ಆಸ್ಪತ್ರೆಯಲ್ಲಿ ಇಂದು ಸಂಜೆ ಕೊನೆಯುಸಿರೆಳೆದಿದ್ದರು. ತೀರ್ಥಹಳ್ಳಿ ಮೂಲದವರಾದ ಮುನೀರ್ ಅಹಮದ್ ತಮ್ಮ ಮಕ್ಕಳ ಶಿಕ್ಷಣದ ಕಾರಣದಿಂದ ಮಂಗಳೂರಿನಲ್ಲಿಯೇ ನೆಲೆಸಿದ್ದರು‌. ಆದರೆ ತಮ್ಮ ಮಗ ಮಾಜ್ ಉಗ್ರರೊಂದಿಗೆ ನಂಟು ಹೊಂದಿದ ವಿಷಯ ಕೇಳಿ ಮುನೀರ್ ಅಹಮದ್ ನೊಂದಿದ್ದರು. ಇದೇ ಕಾರಣದಿಂದಾಗಿ ಹೃದಯಾಘಾತ ಸಂಭವಿಸಿರಬಹುದು ಎನ್ನಲಾಗುತ್ತಿದೆ. ಮುನೀರ್ ಅಹಮದ್ ತಂದೆ ತೀರ್ಥಹಳ್ಳಿ ಪಟ್ಟಣ ಪಂಚಾಯತಿ ಸದಸ್ಯರಾಗಿದ್ದರು.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!