AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರ ನಜೀರ್​ಗೆ ಕೈದಿಗಳಿಂದ ತರಾಟೆ

ಪರಪ್ಪನ ಅಗ್ರಹಾರ ಜೈಲಿನಿಂದ ಕೋರ್ಟ್​​ಗೆ ಕರೆದೊಯ್ಯುತ್ತಿದ್ದಾಗ ಶಂಕಿತ ಉಗ್ರ ನಜೀರ್​ಗೆ ಇತರೆ ಕೈದಿಗಳು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಇದೇ ಸಂದರ್ಭದಲ್ಲಿ ಎರಡು ಬಣಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ನಾಜೀರ್​ಗೆ ಗೂಸಾ ಬೀಳುವ ಹಂತಕ್ಕೆ ತಲುಪಿತ್ತು.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರ ನಜೀರ್​ಗೆ ಕೈದಿಗಳಿಂದ ತರಾಟೆ
ಶಂಕಿತ ಉಗ್ರ ಟಿ ನಜೀರ್
ರಾಮು, ಆನೇಕಲ್​
| Updated By: Rakesh Nayak Manchi|

Updated on: Jul 21, 2023 | 7:25 PM

Share

ಆನೆಕಲ್, ಜುಲೈ 21: ಕೋರ್ಟ್​ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲು ಪರಪ್ಪನ ಅಗ್ರಹಾರ ಜೈಲಿನಿಂದ ಶಂಕಿತ ಉಗ್ರ ಟಿ.ನಜೀರ್​ನನ್ನು (T Nazir) ಪೊಲೀಸರು ಕರೆದೊಯ್ಯುತ್ತಿದ್ದಾಗ ಎದುರಾದ ವಿಚಾರಣಾಧೀನ ಕೈದಿಗಳು ಹಿಗ್ಗಾಮುಗ್ಗವಾಗಿ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಈ ವೇಳೆ ಎರಡು ಬಣಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಹಲ್ಲೆ ನಡೆಸುವ ಸಾಧ್ಯತೆ ಹಿನ್ನೆಲೆ ಪೊಲೀಸರು ನಜೀರ್​ನನ್ನು ಕೂಡಲೇ ಜೈಲಿನೊಳಗೆ ಕರೆದೊಯ್ದರು.

ಪರಪ್ಪನ ಅಗ್ರಹಾರ ಜೈಲಿನಲ್ಲೇ ಕುಳಿತುಕೊಂಡು ನಜೀರ್ ಇತರೆ ಕೈದಿಗಳಿಗೆ ಮೈಂಡ್ ವಾಶ್ ಮಾಡಿ ಉಗ್ರ ಚಟುವಟಿಕೆಗಳಿಗೆ ಸೆಳೆಯುತ್ತಿದ್ದನು. ಈತನನ್ನು ಇಂದು ವಿಡಿಯೋ ಕಾನ್ಫರೆನ್ಸ್​ ಮೂಲಕ ಕೋರ್ಟ್​ಗೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ವಿಚಾರಣಾಧೀನ ಕೈದಿಗಳು, ‘ನೀನು ದೇಶದ್ರೋಹಿ, ನಿನ್ನಿಂದಲೇ ಜೈಲಿನ ವಾತಾವರಣ ಹದಗೆಟ್ಟಿದೆ’ ಎಂದೆಲ್ಲಾ ಹೇಳಿ ಹಿಗ್ಗಾಮುಗ್ಗಾವಾಗಿ ಬೈಗುಳ ನೀಡಿದ್ದಾರೆ.

ಇದನ್ನೂ ಓದಿ: ಬಂಧಿತರಿಗೆ ಜೈಲಿನಲ್ಲೇ ಉಗ್ರ ತರಬೇತಿ ನೀಡಿದ್ದು ಹೇಗೆ ನಜೀರ್? ತನಿಖೆಗೆ ಆದೇಶಿಸಿದ ಎಡಿಜಿಪಿ

ಇದೇ ಸಂದರ್ಭದಲ್ಲಿ ಎರಡು ಬಣಗಳ ನಡುವೆ ಮಾತಿನ ಚಕಮಕಿಯೂ ಆರಂಭಗೊಂಡಿದ್ದು, ತಕ್ಷಣ ಜಗಳ ಬಿಡಿಸಿದ ಪೊಲೀಸರು ನಜೀರ್​​ನನ್ನು ರಕ್ಷಿಸಿ ಸೆಲ್​​ಗೆ ಕಳುಹಿಸಲಾಯಿತು. ಈ ಗಲಾಟೆ ಎಷ್ಟರ ಮಟ್ಟಿಗೆ ಕೈಮೀರಿತ್ತು ಎಂದರೆ, ಶಂಕಿತ ಉಗ್ರ ನಜೀರ್​ಗೆ ಗೂಸಾ ಬೀಳುವ ಹಂತಕ್ಕೆ ತಲುಪಿತ್ತು. ಸದ್ಯ ಜೈಲಿನಲ್ಲಿ ನಜೀರ್ ಇನ್ನೊಬ್ಬ ಕೈದಿ ಜೊತೆ ಇದ್ದಾನೆ ಎಂದು ಜೈಲಿನ ಹಿರಿಯ ಅಧಿಕಾರಿಗಳಿಂದ ಮಾಹಿತಿ ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು