AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರ ನಜೀರ್​ಗೆ ಕೈದಿಗಳಿಂದ ತರಾಟೆ

ಪರಪ್ಪನ ಅಗ್ರಹಾರ ಜೈಲಿನಿಂದ ಕೋರ್ಟ್​​ಗೆ ಕರೆದೊಯ್ಯುತ್ತಿದ್ದಾಗ ಶಂಕಿತ ಉಗ್ರ ನಜೀರ್​ಗೆ ಇತರೆ ಕೈದಿಗಳು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಇದೇ ಸಂದರ್ಭದಲ್ಲಿ ಎರಡು ಬಣಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ನಾಜೀರ್​ಗೆ ಗೂಸಾ ಬೀಳುವ ಹಂತಕ್ಕೆ ತಲುಪಿತ್ತು.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರ ನಜೀರ್​ಗೆ ಕೈದಿಗಳಿಂದ ತರಾಟೆ
ಶಂಕಿತ ಉಗ್ರ ಟಿ ನಜೀರ್
ರಾಮು, ಆನೇಕಲ್​
| Edited By: |

Updated on: Jul 21, 2023 | 7:25 PM

Share

ಆನೆಕಲ್, ಜುಲೈ 21: ಕೋರ್ಟ್​ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲು ಪರಪ್ಪನ ಅಗ್ರಹಾರ ಜೈಲಿನಿಂದ ಶಂಕಿತ ಉಗ್ರ ಟಿ.ನಜೀರ್​ನನ್ನು (T Nazir) ಪೊಲೀಸರು ಕರೆದೊಯ್ಯುತ್ತಿದ್ದಾಗ ಎದುರಾದ ವಿಚಾರಣಾಧೀನ ಕೈದಿಗಳು ಹಿಗ್ಗಾಮುಗ್ಗವಾಗಿ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಈ ವೇಳೆ ಎರಡು ಬಣಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಹಲ್ಲೆ ನಡೆಸುವ ಸಾಧ್ಯತೆ ಹಿನ್ನೆಲೆ ಪೊಲೀಸರು ನಜೀರ್​ನನ್ನು ಕೂಡಲೇ ಜೈಲಿನೊಳಗೆ ಕರೆದೊಯ್ದರು.

ಪರಪ್ಪನ ಅಗ್ರಹಾರ ಜೈಲಿನಲ್ಲೇ ಕುಳಿತುಕೊಂಡು ನಜೀರ್ ಇತರೆ ಕೈದಿಗಳಿಗೆ ಮೈಂಡ್ ವಾಶ್ ಮಾಡಿ ಉಗ್ರ ಚಟುವಟಿಕೆಗಳಿಗೆ ಸೆಳೆಯುತ್ತಿದ್ದನು. ಈತನನ್ನು ಇಂದು ವಿಡಿಯೋ ಕಾನ್ಫರೆನ್ಸ್​ ಮೂಲಕ ಕೋರ್ಟ್​ಗೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ವಿಚಾರಣಾಧೀನ ಕೈದಿಗಳು, ‘ನೀನು ದೇಶದ್ರೋಹಿ, ನಿನ್ನಿಂದಲೇ ಜೈಲಿನ ವಾತಾವರಣ ಹದಗೆಟ್ಟಿದೆ’ ಎಂದೆಲ್ಲಾ ಹೇಳಿ ಹಿಗ್ಗಾಮುಗ್ಗಾವಾಗಿ ಬೈಗುಳ ನೀಡಿದ್ದಾರೆ.

ಇದನ್ನೂ ಓದಿ: ಬಂಧಿತರಿಗೆ ಜೈಲಿನಲ್ಲೇ ಉಗ್ರ ತರಬೇತಿ ನೀಡಿದ್ದು ಹೇಗೆ ನಜೀರ್? ತನಿಖೆಗೆ ಆದೇಶಿಸಿದ ಎಡಿಜಿಪಿ

ಇದೇ ಸಂದರ್ಭದಲ್ಲಿ ಎರಡು ಬಣಗಳ ನಡುವೆ ಮಾತಿನ ಚಕಮಕಿಯೂ ಆರಂಭಗೊಂಡಿದ್ದು, ತಕ್ಷಣ ಜಗಳ ಬಿಡಿಸಿದ ಪೊಲೀಸರು ನಜೀರ್​​ನನ್ನು ರಕ್ಷಿಸಿ ಸೆಲ್​​ಗೆ ಕಳುಹಿಸಲಾಯಿತು. ಈ ಗಲಾಟೆ ಎಷ್ಟರ ಮಟ್ಟಿಗೆ ಕೈಮೀರಿತ್ತು ಎಂದರೆ, ಶಂಕಿತ ಉಗ್ರ ನಜೀರ್​ಗೆ ಗೂಸಾ ಬೀಳುವ ಹಂತಕ್ಕೆ ತಲುಪಿತ್ತು. ಸದ್ಯ ಜೈಲಿನಲ್ಲಿ ನಜೀರ್ ಇನ್ನೊಬ್ಬ ಕೈದಿ ಜೊತೆ ಇದ್ದಾನೆ ಎಂದು ಜೈಲಿನ ಹಿರಿಯ ಅಧಿಕಾರಿಗಳಿಂದ ಮಾಹಿತಿ ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?