AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರ ನಜೀರ್​ಗೆ ಕೈದಿಗಳಿಂದ ತರಾಟೆ

ಪರಪ್ಪನ ಅಗ್ರಹಾರ ಜೈಲಿನಿಂದ ಕೋರ್ಟ್​​ಗೆ ಕರೆದೊಯ್ಯುತ್ತಿದ್ದಾಗ ಶಂಕಿತ ಉಗ್ರ ನಜೀರ್​ಗೆ ಇತರೆ ಕೈದಿಗಳು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಇದೇ ಸಂದರ್ಭದಲ್ಲಿ ಎರಡು ಬಣಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ನಾಜೀರ್​ಗೆ ಗೂಸಾ ಬೀಳುವ ಹಂತಕ್ಕೆ ತಲುಪಿತ್ತು.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರ ನಜೀರ್​ಗೆ ಕೈದಿಗಳಿಂದ ತರಾಟೆ
ಶಂಕಿತ ಉಗ್ರ ಟಿ ನಜೀರ್
ರಾಮು, ಆನೇಕಲ್​
| Edited By: |

Updated on: Jul 21, 2023 | 7:25 PM

Share

ಆನೆಕಲ್, ಜುಲೈ 21: ಕೋರ್ಟ್​ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲು ಪರಪ್ಪನ ಅಗ್ರಹಾರ ಜೈಲಿನಿಂದ ಶಂಕಿತ ಉಗ್ರ ಟಿ.ನಜೀರ್​ನನ್ನು (T Nazir) ಪೊಲೀಸರು ಕರೆದೊಯ್ಯುತ್ತಿದ್ದಾಗ ಎದುರಾದ ವಿಚಾರಣಾಧೀನ ಕೈದಿಗಳು ಹಿಗ್ಗಾಮುಗ್ಗವಾಗಿ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಈ ವೇಳೆ ಎರಡು ಬಣಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಹಲ್ಲೆ ನಡೆಸುವ ಸಾಧ್ಯತೆ ಹಿನ್ನೆಲೆ ಪೊಲೀಸರು ನಜೀರ್​ನನ್ನು ಕೂಡಲೇ ಜೈಲಿನೊಳಗೆ ಕರೆದೊಯ್ದರು.

ಪರಪ್ಪನ ಅಗ್ರಹಾರ ಜೈಲಿನಲ್ಲೇ ಕುಳಿತುಕೊಂಡು ನಜೀರ್ ಇತರೆ ಕೈದಿಗಳಿಗೆ ಮೈಂಡ್ ವಾಶ್ ಮಾಡಿ ಉಗ್ರ ಚಟುವಟಿಕೆಗಳಿಗೆ ಸೆಳೆಯುತ್ತಿದ್ದನು. ಈತನನ್ನು ಇಂದು ವಿಡಿಯೋ ಕಾನ್ಫರೆನ್ಸ್​ ಮೂಲಕ ಕೋರ್ಟ್​ಗೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ವಿಚಾರಣಾಧೀನ ಕೈದಿಗಳು, ‘ನೀನು ದೇಶದ್ರೋಹಿ, ನಿನ್ನಿಂದಲೇ ಜೈಲಿನ ವಾತಾವರಣ ಹದಗೆಟ್ಟಿದೆ’ ಎಂದೆಲ್ಲಾ ಹೇಳಿ ಹಿಗ್ಗಾಮುಗ್ಗಾವಾಗಿ ಬೈಗುಳ ನೀಡಿದ್ದಾರೆ.

ಇದನ್ನೂ ಓದಿ: ಬಂಧಿತರಿಗೆ ಜೈಲಿನಲ್ಲೇ ಉಗ್ರ ತರಬೇತಿ ನೀಡಿದ್ದು ಹೇಗೆ ನಜೀರ್? ತನಿಖೆಗೆ ಆದೇಶಿಸಿದ ಎಡಿಜಿಪಿ

ಇದೇ ಸಂದರ್ಭದಲ್ಲಿ ಎರಡು ಬಣಗಳ ನಡುವೆ ಮಾತಿನ ಚಕಮಕಿಯೂ ಆರಂಭಗೊಂಡಿದ್ದು, ತಕ್ಷಣ ಜಗಳ ಬಿಡಿಸಿದ ಪೊಲೀಸರು ನಜೀರ್​​ನನ್ನು ರಕ್ಷಿಸಿ ಸೆಲ್​​ಗೆ ಕಳುಹಿಸಲಾಯಿತು. ಈ ಗಲಾಟೆ ಎಷ್ಟರ ಮಟ್ಟಿಗೆ ಕೈಮೀರಿತ್ತು ಎಂದರೆ, ಶಂಕಿತ ಉಗ್ರ ನಜೀರ್​ಗೆ ಗೂಸಾ ಬೀಳುವ ಹಂತಕ್ಕೆ ತಲುಪಿತ್ತು. ಸದ್ಯ ಜೈಲಿನಲ್ಲಿ ನಜೀರ್ ಇನ್ನೊಬ್ಬ ಕೈದಿ ಜೊತೆ ಇದ್ದಾನೆ ಎಂದು ಜೈಲಿನ ಹಿರಿಯ ಅಧಿಕಾರಿಗಳಿಂದ ಮಾಹಿತಿ ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಕೆಶಿ
ಸಚಿವ ಡಿ.ಸುಧಾಕರ್ ಅಂತಿಮ ದರ್ಶನದ ವೇಳೆ ಬಿಕ್ಕಿ ಬಿಕ್ಕಿ ಅತ್ತ ಡಿಕೆಶಿ
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು
ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು!
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು!