AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರ ನಜೀರ್​ಗೆ ಕೈದಿಗಳಿಂದ ತರಾಟೆ

ಪರಪ್ಪನ ಅಗ್ರಹಾರ ಜೈಲಿನಿಂದ ಕೋರ್ಟ್​​ಗೆ ಕರೆದೊಯ್ಯುತ್ತಿದ್ದಾಗ ಶಂಕಿತ ಉಗ್ರ ನಜೀರ್​ಗೆ ಇತರೆ ಕೈದಿಗಳು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಇದೇ ಸಂದರ್ಭದಲ್ಲಿ ಎರಡು ಬಣಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ನಾಜೀರ್​ಗೆ ಗೂಸಾ ಬೀಳುವ ಹಂತಕ್ಕೆ ತಲುಪಿತ್ತು.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರ ನಜೀರ್​ಗೆ ಕೈದಿಗಳಿಂದ ತರಾಟೆ
ಶಂಕಿತ ಉಗ್ರ ಟಿ ನಜೀರ್
ರಾಮು, ಆನೇಕಲ್​
| Edited By: Rakesh Nayak Manchi|

Updated on: Jul 21, 2023 | 7:25 PM

Share

ಆನೆಕಲ್, ಜುಲೈ 21: ಕೋರ್ಟ್​ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲು ಪರಪ್ಪನ ಅಗ್ರಹಾರ ಜೈಲಿನಿಂದ ಶಂಕಿತ ಉಗ್ರ ಟಿ.ನಜೀರ್​ನನ್ನು (T Nazir) ಪೊಲೀಸರು ಕರೆದೊಯ್ಯುತ್ತಿದ್ದಾಗ ಎದುರಾದ ವಿಚಾರಣಾಧೀನ ಕೈದಿಗಳು ಹಿಗ್ಗಾಮುಗ್ಗವಾಗಿ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಈ ವೇಳೆ ಎರಡು ಬಣಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಹಲ್ಲೆ ನಡೆಸುವ ಸಾಧ್ಯತೆ ಹಿನ್ನೆಲೆ ಪೊಲೀಸರು ನಜೀರ್​ನನ್ನು ಕೂಡಲೇ ಜೈಲಿನೊಳಗೆ ಕರೆದೊಯ್ದರು.

ಪರಪ್ಪನ ಅಗ್ರಹಾರ ಜೈಲಿನಲ್ಲೇ ಕುಳಿತುಕೊಂಡು ನಜೀರ್ ಇತರೆ ಕೈದಿಗಳಿಗೆ ಮೈಂಡ್ ವಾಶ್ ಮಾಡಿ ಉಗ್ರ ಚಟುವಟಿಕೆಗಳಿಗೆ ಸೆಳೆಯುತ್ತಿದ್ದನು. ಈತನನ್ನು ಇಂದು ವಿಡಿಯೋ ಕಾನ್ಫರೆನ್ಸ್​ ಮೂಲಕ ಕೋರ್ಟ್​ಗೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ವಿಚಾರಣಾಧೀನ ಕೈದಿಗಳು, ‘ನೀನು ದೇಶದ್ರೋಹಿ, ನಿನ್ನಿಂದಲೇ ಜೈಲಿನ ವಾತಾವರಣ ಹದಗೆಟ್ಟಿದೆ’ ಎಂದೆಲ್ಲಾ ಹೇಳಿ ಹಿಗ್ಗಾಮುಗ್ಗಾವಾಗಿ ಬೈಗುಳ ನೀಡಿದ್ದಾರೆ.

ಇದನ್ನೂ ಓದಿ: ಬಂಧಿತರಿಗೆ ಜೈಲಿನಲ್ಲೇ ಉಗ್ರ ತರಬೇತಿ ನೀಡಿದ್ದು ಹೇಗೆ ನಜೀರ್? ತನಿಖೆಗೆ ಆದೇಶಿಸಿದ ಎಡಿಜಿಪಿ

ಇದೇ ಸಂದರ್ಭದಲ್ಲಿ ಎರಡು ಬಣಗಳ ನಡುವೆ ಮಾತಿನ ಚಕಮಕಿಯೂ ಆರಂಭಗೊಂಡಿದ್ದು, ತಕ್ಷಣ ಜಗಳ ಬಿಡಿಸಿದ ಪೊಲೀಸರು ನಜೀರ್​​ನನ್ನು ರಕ್ಷಿಸಿ ಸೆಲ್​​ಗೆ ಕಳುಹಿಸಲಾಯಿತು. ಈ ಗಲಾಟೆ ಎಷ್ಟರ ಮಟ್ಟಿಗೆ ಕೈಮೀರಿತ್ತು ಎಂದರೆ, ಶಂಕಿತ ಉಗ್ರ ನಜೀರ್​ಗೆ ಗೂಸಾ ಬೀಳುವ ಹಂತಕ್ಕೆ ತಲುಪಿತ್ತು. ಸದ್ಯ ಜೈಲಿನಲ್ಲಿ ನಜೀರ್ ಇನ್ನೊಬ್ಬ ಕೈದಿ ಜೊತೆ ಇದ್ದಾನೆ ಎಂದು ಜೈಲಿನ ಹಿರಿಯ ಅಧಿಕಾರಿಗಳಿಂದ ಮಾಹಿತಿ ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್