AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರ ನಜೀರ್​ಗೆ ಕೈದಿಗಳಿಂದ ತರಾಟೆ

ಪರಪ್ಪನ ಅಗ್ರಹಾರ ಜೈಲಿನಿಂದ ಕೋರ್ಟ್​​ಗೆ ಕರೆದೊಯ್ಯುತ್ತಿದ್ದಾಗ ಶಂಕಿತ ಉಗ್ರ ನಜೀರ್​ಗೆ ಇತರೆ ಕೈದಿಗಳು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಇದೇ ಸಂದರ್ಭದಲ್ಲಿ ಎರಡು ಬಣಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ನಾಜೀರ್​ಗೆ ಗೂಸಾ ಬೀಳುವ ಹಂತಕ್ಕೆ ತಲುಪಿತ್ತು.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಉಗ್ರ ನಜೀರ್​ಗೆ ಕೈದಿಗಳಿಂದ ತರಾಟೆ
ಶಂಕಿತ ಉಗ್ರ ಟಿ ನಜೀರ್
ರಾಮು, ಆನೇಕಲ್​
| Edited By: |

Updated on: Jul 21, 2023 | 7:25 PM

Share

ಆನೆಕಲ್, ಜುಲೈ 21: ಕೋರ್ಟ್​ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲು ಪರಪ್ಪನ ಅಗ್ರಹಾರ ಜೈಲಿನಿಂದ ಶಂಕಿತ ಉಗ್ರ ಟಿ.ನಜೀರ್​ನನ್ನು (T Nazir) ಪೊಲೀಸರು ಕರೆದೊಯ್ಯುತ್ತಿದ್ದಾಗ ಎದುರಾದ ವಿಚಾರಣಾಧೀನ ಕೈದಿಗಳು ಹಿಗ್ಗಾಮುಗ್ಗವಾಗಿ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಈ ವೇಳೆ ಎರಡು ಬಣಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಹಲ್ಲೆ ನಡೆಸುವ ಸಾಧ್ಯತೆ ಹಿನ್ನೆಲೆ ಪೊಲೀಸರು ನಜೀರ್​ನನ್ನು ಕೂಡಲೇ ಜೈಲಿನೊಳಗೆ ಕರೆದೊಯ್ದರು.

ಪರಪ್ಪನ ಅಗ್ರಹಾರ ಜೈಲಿನಲ್ಲೇ ಕುಳಿತುಕೊಂಡು ನಜೀರ್ ಇತರೆ ಕೈದಿಗಳಿಗೆ ಮೈಂಡ್ ವಾಶ್ ಮಾಡಿ ಉಗ್ರ ಚಟುವಟಿಕೆಗಳಿಗೆ ಸೆಳೆಯುತ್ತಿದ್ದನು. ಈತನನ್ನು ಇಂದು ವಿಡಿಯೋ ಕಾನ್ಫರೆನ್ಸ್​ ಮೂಲಕ ಕೋರ್ಟ್​ಗೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ವಿಚಾರಣಾಧೀನ ಕೈದಿಗಳು, ‘ನೀನು ದೇಶದ್ರೋಹಿ, ನಿನ್ನಿಂದಲೇ ಜೈಲಿನ ವಾತಾವರಣ ಹದಗೆಟ್ಟಿದೆ’ ಎಂದೆಲ್ಲಾ ಹೇಳಿ ಹಿಗ್ಗಾಮುಗ್ಗಾವಾಗಿ ಬೈಗುಳ ನೀಡಿದ್ದಾರೆ.

ಇದನ್ನೂ ಓದಿ: ಬಂಧಿತರಿಗೆ ಜೈಲಿನಲ್ಲೇ ಉಗ್ರ ತರಬೇತಿ ನೀಡಿದ್ದು ಹೇಗೆ ನಜೀರ್? ತನಿಖೆಗೆ ಆದೇಶಿಸಿದ ಎಡಿಜಿಪಿ

ಇದೇ ಸಂದರ್ಭದಲ್ಲಿ ಎರಡು ಬಣಗಳ ನಡುವೆ ಮಾತಿನ ಚಕಮಕಿಯೂ ಆರಂಭಗೊಂಡಿದ್ದು, ತಕ್ಷಣ ಜಗಳ ಬಿಡಿಸಿದ ಪೊಲೀಸರು ನಜೀರ್​​ನನ್ನು ರಕ್ಷಿಸಿ ಸೆಲ್​​ಗೆ ಕಳುಹಿಸಲಾಯಿತು. ಈ ಗಲಾಟೆ ಎಷ್ಟರ ಮಟ್ಟಿಗೆ ಕೈಮೀರಿತ್ತು ಎಂದರೆ, ಶಂಕಿತ ಉಗ್ರ ನಜೀರ್​ಗೆ ಗೂಸಾ ಬೀಳುವ ಹಂತಕ್ಕೆ ತಲುಪಿತ್ತು. ಸದ್ಯ ಜೈಲಿನಲ್ಲಿ ನಜೀರ್ ಇನ್ನೊಬ್ಬ ಕೈದಿ ಜೊತೆ ಇದ್ದಾನೆ ಎಂದು ಜೈಲಿನ ಹಿರಿಯ ಅಧಿಕಾರಿಗಳಿಂದ ಮಾಹಿತಿ ತಿಳಿದುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್