AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮೊಬೈಲ್ ಕಳ್ಳತನ ತಡೆಗೆ ವಿಶೇಷ ಕಾರ್ಯಾಚರಣೆ: ಪ್ರತಾಪ್ ರೆಡ್ಡಿ

ಧಾರ್ಮಿಕ ತೀವ್ರವಾದದ ಬಗ್ಗೆ ಹೆಚ್ಚು ಒಲವು ಹೊಂದಿದ್ದ ಶಂಕಿತ ಉಗ್ರರು, ಎಷ್ಟರಮಟ್ಟಿಗೆ ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು ಎಂದು ಪರಿಶೀಲಿಸುತ್ತಿದ್ದೇವೆ ಎಂದು ಹೇಳಿದರು.

ಬೆಂಗಳೂರಿನಲ್ಲಿ ಮೊಬೈಲ್ ಕಳ್ಳತನ ತಡೆಗೆ ವಿಶೇಷ ಕಾರ್ಯಾಚರಣೆ: ಪ್ರತಾಪ್ ರೆಡ್ಡಿ
ಬೆಂಗಳೂರು ಪೊಲೀಸ್ ಆಯುಕ್ತರಾಗಿ ಪ್ರತಾಪ್‌ ರೆಡ್ಡಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jul 26, 2022 | 1:31 PM

Share

ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಬಂಧಿತರಾದ ಇಬ್ಬರು ಶಂಕಿತ ಉಗ್ರರು ತೀವ್ರವಾದದ ಬಗ್ಗೆ ಒಲವು ಬೆಳೆಸಿಕೊಂಡಿದ್ದರು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್​ ರೆಡ್ಡಿ ಹೇಳಿದರು. ಉಗ್ರರ ಬಂಧನ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಧಾರ್ಮಿಕ ತೀವ್ರವಾದದ ಬಗ್ಗೆ ಒಲವು ಹೊಂದಿದ್ದ ಹುಸೇನ್​ ಅಖ್ತರ್, ಜುಬಾನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದರು. ಧಾರ್ಮಿಕ ತೀವ್ರವಾದದ ಬಗ್ಗೆ ಹೆಚ್ಚು ಒಲವು ಹೊಂದಿದ್ದ ಅವರು, ಎಷ್ಟರಮಟ್ಟಿಗೆ ಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು ಎಂದು ಪರಿಶೀಲಿಸುತ್ತಿದ್ದೇವೆ. ತಿಲಕ್​ನಗರದಲ್ಲಿ ಸೆರೆ ಸಿಕ್ಕ ಅಖ್ತರ್ ನೀಡಿದ ಮಾಹಿತಿ ಮೇರೆಗೆ ಇವರಿಬ್ಬರನ್ನೂ ವಶಕ್ಕೆ ಪಡೆಯಲಾಗಿತ್ತು ಎಂದು ತಿಳಿಸಿದರು.

ಮೊಬೈಲ್ ಕಳ್ಳತನ ತಡೆಗೆ ಕ್ರಮ

ಬೆಂಗಳೂರಿನಲ್ಲಿ ಇತ್ತೀಚೆಗೆ ದರೋಡೆ ಮತ್ತು ಕೊಲೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಗಸ್ತು ಹೆಚ್ಚಿಸಿದ್ದಾರೆ. ಕೆಂಗೇರಿ ಪೊಲೀಸರು ಇತ್ತೀಚೆಗೆ ಕೆಲ ಆರೋಪಿಗಳನ್ನು ಹಿಡಿದ್ದರು. ಮೊಬೈಲ್ ಕಳವು ಪ್ರಕರಣಗಳನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಹಾಡಹಗಲೇ ಲಾಂಗ್ ಮಚ್ಚು ಹಿಡಿದುಕೊಂಡು ಓಡಾಡುತ್ತಿರುವ ದೂರುಗಳು ಕೇಳಿ ಬರುತ್ತಿವೆ. ಅಂಥವರ ವಿರುದ್ಧವೂ ಕ್ರಮ ಕೈಗೊಳ್ಳುತ್ತೇವೆ. ಅಪರಾಧ ತಡೆಗಾಗಿ ನಿನ್ನೆಯಿಂದ ವಿಶೇಷ ಕಾರ್ಯಾಚರಣೆ ಆರಂಭಿಸಿದ್ದೇವೆ ಎಂದು ಹೇಳಿದರು.

ಮೊಬೈಲ್ ಕಳುವಾದಾಗ ಸಾರ್ವಜನಿಕರಲ್ಲಿ ಗೊಂದಲ ಮೂಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಹೊಟೆಲ್ ಅಥವಾ ಆಟೊದಲ್ಲಿ ಮೊಬೈಲ್ ಬಿಟ್ಟು ಕಳೆದುಕೊಂಡರೆ ಅದು ಇ-ಲಾಸ್ಟ್ ಆಗುತ್ತೆ. ಆದರೆ ಸಾರ್ವಜನಿಕ ಸ್ಥಳದಲ್ಲಿ ಮೊಬೈಲ್ ಕಸಿದುಕೊಂಡರೆ ದರೋಡೆಯಾಗುತ್ತೆ. ಅಂಥ ಸಂದರ್ಭದಲ್ಲಿ ಎಫ್ಐಆರ್ ದಾಖಲು ಮಾಡಿ ಆರೋಪಿಗಳನ್ನ ಬಂಧಿಸುತ್ತೇವೆ ಎಂದರು.

ಕಳೆದ 15 ದಿನಗಳಿಂದ ನಗರ ವ್ಯಾಪ್ತಿಯಲ್ಲಿ ದರೋಡೆ ಪ್ರಕರಣಗಳು ಹೆಚ್ಚಾಗಿವೆ. ಕಂಟ್ರೋಲ್ ರೂಂಗೆ ಬಂದಿರುವ ದೂರುಗಳನ್ನು ಪರಿಶೀಲನೆ ಮಾಡುತ್ತಿದ್ದೇವೆ. ಸರಿಯಾಗಿ ಕ್ರಮಕೈಗೊಂಡಿಲ್ಲದಿದ್ದರೆ ಆಯಾ ಠಾಣಾ ವ್ಯಾಪ್ತಿಯ ಇನ್​ಸ್ಪೆಕ್ಟರ್​ಗಳನ್ನು ಹೊಣೆಯಾಗಿಸಲಾಗುವುದು ಎಂದರು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ