AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಅನುಮಾನಸ್ಪದವಾಗಿ ವಿವಾಹಿತ ಮಹಿಳೆ ಸಾವು, ಅತ್ಯಸಂಸ್ಕಾರಕ್ಕೂ ಬಾರದ ಪತಿ ಮೇಲೆ ಅನುಮಾನ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ನರಸೀಪುರ ಗ್ರಾಮದಲ್ಲಿ ಅನುಮಾನಸ್ಪದವಾಗಿ ಮೃತಪಟ್ಟ ಪತ್ನಿಯ ಅಂತ್ಯಸಂಸ್ಕಾರಕ್ಕೂ ಪತಿ​ ಬಂದಿಲ್ಲ. ಈ ಹಿನ್ನಲೆ ಕಾದು ಸುಸ್ತಾದ ಗ್ರಾಮಸ್ಥರು ಶವವನ್ನು ಮನೆಯ ಎದುರೇ ಇಟ್ಟು, ತಮ್ಮ ಮನೆಯ ಕಡೆ ನಡೆದಿದ್ದಾರೆ. ಇದರಿಂದ ಗಂಡನೇ ಕೊಲೆ ಮಾಡಿ ಬಾವಿಗೆ ಬಿಸಾಡಿರುವ ಶಂಕೆ ವ್ಯಕ್ತಿಯಾಗಿದೆ.

ತುಮಕೂರು: ಅನುಮಾನಸ್ಪದವಾಗಿ ವಿವಾಹಿತ ಮಹಿಳೆ ಸಾವು, ಅತ್ಯಸಂಸ್ಕಾರಕ್ಕೂ ಬಾರದ ಪತಿ ಮೇಲೆ ಅನುಮಾನ
ಪ್ರಾತಿನಿಧಿಕ ಚಿತ್ರ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Aug 30, 2023 | 6:13 PM

Share

ತುಮಕೂರು, ಆ.30: ಅನುಮಾನಸ್ಪದವಾಗಿ ವಿವಾಹಿತ ಮಹಿಳೆ ಸಾವನ್ನಪ್ಪಿದ ಘಟನೆ ತುಮಕೂರು (Tumakuru) ಜಿಲ್ಲೆಯ ಕೊರಟಗೆರೆ ತಾಲೂಕಿನ ನರಸೀಪುರ ಗ್ರಾಮದಲ್ಲಿ ನಡೆದಿದೆ. ಕಲಾವತಿ(26) ಮೃತ ಮಹಿಳೆ. ಇನ್ನು ಪತಿ ಸೋಮಶೇಖರ್ ಎಂಬಾತನೇ ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪತ್ನಿ ಕಲಾವತಿಯನ್ನು ಕೊಲೆ ಮಾಡಿದ್ದಾನೆ ಎಂದು ಮೃತ ಮಹಿಳೆ ಕುಟುಂಬಸ್ಥರಿಂದ ಆರೋಪ ಕೇಳಿಬಂದಿದೆ. ಮನೆ ಪಕ್ಕದ ಶೆಡ್​ನಲ್ಲಿ ಸೋಮಶೇಖರ್ ಅನ್ಯ ಸ್ತ್ರೀಯನ್ನು ತಂದಿಟ್ಟುಕೊಂಡಿದ್ದನಂತೆ. ಇದೇ ವಿಚಾರವಾಗಿ ದಂಪತಿ ನಡುವೆ ಆಗಾಗ ಗಲಾಟೆ ನಡೆಯುತ್ತಿದ್ದು, ಈ ಹಿನ್ನಲೆ ಪತಿ ಸೋಮಶೇಖರ್​ ಪತ್ನಿಯನ್ನು ಬಾವಿಗೆ ತಳ್ಳಿ ಕೊಲೆಗೈದಿದ್ದಾನೆ ಎಂದು ಆರೋಪಿಸಲಾಗಿದೆ.

ಪತ್ನಿ ಕಲಾವತಿ ಅಂತ್ಯಸಂಸ್ಕಾರಕ್ಕೂ ಬಾರದ ಪತಿ ಸೋಮಶೇಖರ್

ಹೌದು, ಅನುಮಾನಸ್ಪದವಾಗಿ ಮೃತಪಟ್ಟ ಪತ್ನಿಯ ಅಂತ್ಯಸಂಸ್ಕಾರಕ್ಕೆ ಪತಿ ಸೋಮಶೇಖರ್​ ಬಂದಿಲ್ಲ. ಕಾದು ಸುಸ್ತಾದ ಗ್ರಾಮಸ್ಥರು ಶವವನ್ನು ಮನೆಯ ಎದುರೇ ಇಟ್ಟು, ತಮ್ಮ ಮನೆಯ ಕಡೆ ನಡೆದಿದ್ದಾರೆ. ಇದರಿಂದ ಗಂಡನೇ ಕೊಲೆ ಮಾಡಿ ಬಾವಿಗೆ ಬಿಸಾಡಿರುವ ಶಂಕೆ ವ್ಯಕ್ತಿಯಾಗಿದೆ. ಅನ್ಯ ಸ್ತ್ರೀಯನ್ನು ತಂದಿಟ್ಟುಕೊಂಡಿದ್ದ ಕಾರಣಕ್ಕೆ ಪದೇ ಪದೇ ಗಂಡ ಹೆಂಡತಿಯ ನಡುವೆ ಗಲಾಟೆ ನಡೆಯುತ್ತಿತ್ತು. ನಿನ್ನೆಯೂ ಇದೇ ವಿಚಾರಕ್ಕೆ ಗಲಾಟೆ ನಡೆದು ಗಂಡನೇ ಹೆಂಡತಿಯನ್ನು ಬಾವಿಗೆ ತಳ್ಳಿ ಕೊಲೆ ಮಾಡಿದ್ದಾನೆ ಎಂಬ ಆರೋಪದ ಕೇಳಿಬಂದಿದೆ.

ಇದನ್ನೂ ಓದಿ:ಕರೇಕಟ್ಟೆ ಗ್ರಾಮದಲ್ಲಿ ಜನ ನೋಡುತ್ತಿದ್ದಂತೆ ರಸ್ತೆಯಲ್ಲಿ ಮಲಗಿದ್ದ ಶ್ವಾನಗಳ ಮೇಲೆ ಕಾರ್ ಹಾಯಿಸಿಕೊಂಡು ಹೋದ ದುಷ್ಟ, ಒಂದು ಸಾವು

ಸಾಲಬಾಧೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡು ದಂಪತಿ ಸಾವು

ಮಂಡ್ಯ: ಸಾಲಭಾಧೆ ಹಿನ್ನೆಲೆ ಮನೆಯಲ್ಲಿಯೇ ವಿಷ ಸೇವಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ಎನ್.ಇ.ಎಸ್. ಬಡಾವಣೆಯಲ್ಲಿ ನಡೆದಿದೆ. ರಾಜೇಶ್(45), ಸುಧಾ(40) ಆತ್ಮಹತ್ಯೆ ಮಾಡಿಕೊಂಡ ಮೃತ ದಂಪತಿ. ಈ ಸಂಬಂಧ ಮಳವಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ