AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು: ಅನುಮಾನಸ್ಪದವಾಗಿ ವಿವಾಹಿತ ಮಹಿಳೆ ಸಾವು, ಅತ್ಯಸಂಸ್ಕಾರಕ್ಕೂ ಬಾರದ ಪತಿ ಮೇಲೆ ಅನುಮಾನ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ನರಸೀಪುರ ಗ್ರಾಮದಲ್ಲಿ ಅನುಮಾನಸ್ಪದವಾಗಿ ಮೃತಪಟ್ಟ ಪತ್ನಿಯ ಅಂತ್ಯಸಂಸ್ಕಾರಕ್ಕೂ ಪತಿ​ ಬಂದಿಲ್ಲ. ಈ ಹಿನ್ನಲೆ ಕಾದು ಸುಸ್ತಾದ ಗ್ರಾಮಸ್ಥರು ಶವವನ್ನು ಮನೆಯ ಎದುರೇ ಇಟ್ಟು, ತಮ್ಮ ಮನೆಯ ಕಡೆ ನಡೆದಿದ್ದಾರೆ. ಇದರಿಂದ ಗಂಡನೇ ಕೊಲೆ ಮಾಡಿ ಬಾವಿಗೆ ಬಿಸಾಡಿರುವ ಶಂಕೆ ವ್ಯಕ್ತಿಯಾಗಿದೆ.

ತುಮಕೂರು: ಅನುಮಾನಸ್ಪದವಾಗಿ ವಿವಾಹಿತ ಮಹಿಳೆ ಸಾವು, ಅತ್ಯಸಂಸ್ಕಾರಕ್ಕೂ ಬಾರದ ಪತಿ ಮೇಲೆ ಅನುಮಾನ
ಪ್ರಾತಿನಿಧಿಕ ಚಿತ್ರ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Aug 30, 2023 | 6:13 PM

Share

ತುಮಕೂರು, ಆ.30: ಅನುಮಾನಸ್ಪದವಾಗಿ ವಿವಾಹಿತ ಮಹಿಳೆ ಸಾವನ್ನಪ್ಪಿದ ಘಟನೆ ತುಮಕೂರು (Tumakuru) ಜಿಲ್ಲೆಯ ಕೊರಟಗೆರೆ ತಾಲೂಕಿನ ನರಸೀಪುರ ಗ್ರಾಮದಲ್ಲಿ ನಡೆದಿದೆ. ಕಲಾವತಿ(26) ಮೃತ ಮಹಿಳೆ. ಇನ್ನು ಪತಿ ಸೋಮಶೇಖರ್ ಎಂಬಾತನೇ ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪತ್ನಿ ಕಲಾವತಿಯನ್ನು ಕೊಲೆ ಮಾಡಿದ್ದಾನೆ ಎಂದು ಮೃತ ಮಹಿಳೆ ಕುಟುಂಬಸ್ಥರಿಂದ ಆರೋಪ ಕೇಳಿಬಂದಿದೆ. ಮನೆ ಪಕ್ಕದ ಶೆಡ್​ನಲ್ಲಿ ಸೋಮಶೇಖರ್ ಅನ್ಯ ಸ್ತ್ರೀಯನ್ನು ತಂದಿಟ್ಟುಕೊಂಡಿದ್ದನಂತೆ. ಇದೇ ವಿಚಾರವಾಗಿ ದಂಪತಿ ನಡುವೆ ಆಗಾಗ ಗಲಾಟೆ ನಡೆಯುತ್ತಿದ್ದು, ಈ ಹಿನ್ನಲೆ ಪತಿ ಸೋಮಶೇಖರ್​ ಪತ್ನಿಯನ್ನು ಬಾವಿಗೆ ತಳ್ಳಿ ಕೊಲೆಗೈದಿದ್ದಾನೆ ಎಂದು ಆರೋಪಿಸಲಾಗಿದೆ.

ಪತ್ನಿ ಕಲಾವತಿ ಅಂತ್ಯಸಂಸ್ಕಾರಕ್ಕೂ ಬಾರದ ಪತಿ ಸೋಮಶೇಖರ್

ಹೌದು, ಅನುಮಾನಸ್ಪದವಾಗಿ ಮೃತಪಟ್ಟ ಪತ್ನಿಯ ಅಂತ್ಯಸಂಸ್ಕಾರಕ್ಕೆ ಪತಿ ಸೋಮಶೇಖರ್​ ಬಂದಿಲ್ಲ. ಕಾದು ಸುಸ್ತಾದ ಗ್ರಾಮಸ್ಥರು ಶವವನ್ನು ಮನೆಯ ಎದುರೇ ಇಟ್ಟು, ತಮ್ಮ ಮನೆಯ ಕಡೆ ನಡೆದಿದ್ದಾರೆ. ಇದರಿಂದ ಗಂಡನೇ ಕೊಲೆ ಮಾಡಿ ಬಾವಿಗೆ ಬಿಸಾಡಿರುವ ಶಂಕೆ ವ್ಯಕ್ತಿಯಾಗಿದೆ. ಅನ್ಯ ಸ್ತ್ರೀಯನ್ನು ತಂದಿಟ್ಟುಕೊಂಡಿದ್ದ ಕಾರಣಕ್ಕೆ ಪದೇ ಪದೇ ಗಂಡ ಹೆಂಡತಿಯ ನಡುವೆ ಗಲಾಟೆ ನಡೆಯುತ್ತಿತ್ತು. ನಿನ್ನೆಯೂ ಇದೇ ವಿಚಾರಕ್ಕೆ ಗಲಾಟೆ ನಡೆದು ಗಂಡನೇ ಹೆಂಡತಿಯನ್ನು ಬಾವಿಗೆ ತಳ್ಳಿ ಕೊಲೆ ಮಾಡಿದ್ದಾನೆ ಎಂಬ ಆರೋಪದ ಕೇಳಿಬಂದಿದೆ.

ಇದನ್ನೂ ಓದಿ:ಕರೇಕಟ್ಟೆ ಗ್ರಾಮದಲ್ಲಿ ಜನ ನೋಡುತ್ತಿದ್ದಂತೆ ರಸ್ತೆಯಲ್ಲಿ ಮಲಗಿದ್ದ ಶ್ವಾನಗಳ ಮೇಲೆ ಕಾರ್ ಹಾಯಿಸಿಕೊಂಡು ಹೋದ ದುಷ್ಟ, ಒಂದು ಸಾವು

ಸಾಲಬಾಧೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡು ದಂಪತಿ ಸಾವು

ಮಂಡ್ಯ: ಸಾಲಭಾಧೆ ಹಿನ್ನೆಲೆ ಮನೆಯಲ್ಲಿಯೇ ವಿಷ ಸೇವಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ಎನ್.ಇ.ಎಸ್. ಬಡಾವಣೆಯಲ್ಲಿ ನಡೆದಿದೆ. ರಾಜೇಶ್(45), ಸುಧಾ(40) ಆತ್ಮಹತ್ಯೆ ಮಾಡಿಕೊಂಡ ಮೃತ ದಂಪತಿ. ಈ ಸಂಬಂಧ ಮಳವಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​