ಸಿಡ್ನಿ ನರಹಂತಕ; ಗರ್ಲ್​ಫ್ರೆಂಡ್ ಸಿಗದ ಹತಾಶೆಯಲ್ಲಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿದ್ದ ಕೊಲೆಗಡುಕ

Sydney knifeman frustration story: ಆಸ್ಟ್ರೇಲಿಯಾದ ಸಿಡ್ನಿಯಲ್ಲಿನ ವೆಸ್ಟ್​ಫೀಲ್ಡ್ ಬಾಂಡಿ ಜಂಕ್ಷನ್ ಮಾಲ್​ನಲ್ಲಿ ಏಪ್ರಿಲ್ 13ರಂದು ಜೋಯಲ್ ಕೌಚಿ ಎಂಬಾತ ಚಾಕುವಿನಿಂದ ಹಲ್ಲೆ ನಡೆಸಿ ಆರು ಮಂದಿಯನ್ನು ಸಾಯಿಸಿ 12 ಮಂದಿಯನ್ನು ಗಾಯಗೊಳಿಸಿದ್ದ. ಪೊಲೀಸರು ಆತನನ್ನು ಕೊಂದುಹಾಕಿದ್ದರು. ಈತ ಮಹಿಳೆಯರನ್ನೇ ಗುರಿ ಮಾಡಿ ಹಲ್ಲೆ ಎಸಗಿದ್ದಕ್ಕೆ ಪುರಾವೆಗಳು ಸಿಕ್ಕಿವೆ. ಈತ ಮಹಿಳೆಯರನ್ನು ಟಾರ್ಗೆಟ್ ಮಾಡಲು ಕಾರಣ ಏನು ಎಂಬುದನ್ನು ಆತನ ತಂದೆ ತಿಳಿಸಿದ್ದಾರೆ.

ಸಿಡ್ನಿ ನರಹಂತಕ; ಗರ್ಲ್​ಫ್ರೆಂಡ್ ಸಿಗದ ಹತಾಶೆಯಲ್ಲಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿದ್ದ ಕೊಲೆಗಡುಕ
ಜೋಯಲ್ ಕೌಚಿ
Follow us
|

Updated on: Apr 15, 2024 | 6:52 PM

ಸಿಡ್ನಿ, ಏಪ್ರಿಲ್ 15: ಆಸ್ಟ್ರೇಲಿಯಾದ ಸಿಡ್ನಿಯಲ್ಲಿನ ಶಾಪಿಂಗ್ ಮಾಲ್​ವೊಂದರಲ್ಲಿ ಶನಿವಾರ (ಏ. 13) ಐವರು ಮಹಿಳೆಯರು ಸೇರಿದಂತೆ ಆರು ಜನರನ್ನು ಬಲಿ ತೆಗೆದುಕೊಂಡಿದ್ದ 40 ವರ್ಷದ ಜೋಯಲ್ ಕೌಚಿ (Joel Cauchi) ಎಂಬಾತನ ಬಗ್ಗೆ ವೈಯಕ್ತಿಕ ಮಾಹಿತಿ ಹೊರಬರತೊಡಗಿದೆ. ವೆಸ್ಟ್​ಫೀಲ್ಡ್ ಬಾಂಡಿ ಜಂಕ್ಷನ್ ಮಾಲ್​ನಲ್ಲಿ ಶನಿವಾರವೇ ಈತನನ್ನು ಪೊಲೀಸರು ಗುಂಡಿಟ್ಟು ಕೊಂದಿದ್ದರು. ಅಷ್ಟರೊಳಗೆ ಈತ ಚಾಕುವಿನಿಂದ ಹಲ್ಲೆ ಮಾಡಿ ಆರು ಮಂದಿಯನ್ನು ಬಲಿತೆಗೆದುಕೊಂಡಿದ್ದೂ ಅಲ್ಲದೇ 12 ಮಂದಿಯನ್ನು ಗಾಯಗೊಳಿಸಿದ್ದ. ಸತ್ತವ ಆರು ಜನರಲ್ಲಿ ಐವರು ಮಹಿಳೆಯರೇ ಆಗಿದ್ದಾರೆ. ಗಾಯಗೊಂಡವರೆಲ್ಲರೂ ಮಹಿಳೆಯರೇ ಆಗಿದ್ದಾರೆ. ಮೇಲ್ನೋಟಕ್ಕೆ ನೋಡಿದರೂ ಈತನ ಟಾರ್ಗೆಟ್ ಮಹಿಳೆಯರೇ ಆಗಿದ್ದಾರೆ ಎಂದು ಪೊಲೀಸರು ಅನುಮಾನಿಸಿದ್ದಾರೆ.

ಸಿಸಿಟಿವಿ ಫೂಟೇಜ್​ನಲ್ಲಿ ಕಂಡಿರುವ ದೃಶ್ಯದ ಪ್ರಕಾರ ಜೋಯಲ್ ಕೌಚಿ ಮಹಿಳೆಯರನ್ನು ನೋಡಿ ನೋಡಿಯೇ ಹಲ್ಲೆ ಮಾಡಿದಂತಿದೆ. ಅಪರಾಧಿಯು ಪುರುಷರನ್ನು ಬಿಟ್ಟು ಮಹಿಳೆಯರನ್ನೇ ಗುರಿ ಮಾಡಿದ್ದು ಸ್ಪಷ್ಟವಾಗಿದೆ ಎಂದಿದ್ದಾರೆ ಪೊಲೀಸರು.

ಇದನ್ನೂ ಓದಿ: ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ, ಕಾರಿನಲ್ಲಿ ಶವ ಪತ್ತೆ

ಗರ್ಲ್​ಫ್ರೆಂಡ್ ಸಿಗದ ಹತಾಶೆಯಲ್ಲಿದ್ದ ಅಪರಾಧಿ

ಇದೇ ವೇಳೆ ಕೊಲೆಗಡುಕ ಜೋಯಲ್​ನ ತಂದೆ ತಮ್ಮ ಮಗನ ಬಗ್ಗೆ ಕುತೂಹಲಕಾರಿ ಮಾಹಿತಿ ಬಿಚ್ಚಿಟ್ಟಿದ್ದಾರೆ. ತಮ್ಮ ಮಗನಿಗೆ ಒಬ್ಬ ಗರ್ಲ್ ಫ್ರೆಂಡ್ ಕೂಡ ಸಿಕ್ಕಿಲ್ಲ. ಈ ಹತಾಶೆಯಲ್ಲಿದ್ದ ಈತನಿಗೆ ಶಿಜೋಫ್ರೆನಿಯಾ ರೋಗ ಇತ್ತು ಎಂದಿದ್ದಾರೆ ಈ ತಂದೆ.

ಅವನಿಗೆ ಗರ್ಲ್​ಫ್ರೆಂಡ್ ಬೇಕಿತ್ತು. ಆದರೆ, ಸೋಷಿಯಲ್ ಸ್ಕಿಲ್ ಇರಲಿಲ್ಲ. ಇದರಿಂದ ಹುಚ್ಚನಂತಾಗಿದ್ದ. ಅವ ನನ್ನ ಮಗ. ನಿಮಗೆ ಆತ ರಕ್ಕಸ ಎನಿಸಬಹುದು. ನನಗೆ ಆತ ಕಾಯಿಲೆಯಿಂದ ಬಳಲುತ್ತಿದ್ದ ಹುಡುಗ,’ ಎಂದು ಆಂಡ್ರ್ಯೂ ಕೌಚಿ ಹೇಳಿದ್ದಾರೆ.

ಇದನ್ನೂ ಓದಿ: ಪ್ರತಿಷ್ಟಿತ ವಿಲ್ಲಾದಲ್ಲಿ ಕೆಲಸ ಮಾಡ್ತಿದ್ದ ಯುವಕ ಸಾವು; ಮನೆ ಮಗನನ್ನ ಕಳೆದುಕೊಂಡು ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಜೋಯಲ್​ಗೆ ಬಲಿಯಾದ ಒಬ್ಬನೇ ಪುರುಷನ ಹೆಸರು ಫರಾಜ್ ತಾಹಿರ್. ಆತ ಪಾಕಿಸ್ತಾನೀ ಮೂಲದವನು. ಮಾಲ್​ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದ. ಈ ಕಾರಣಕ್ಕೆ ಆತನನ್ನು ಜೋಯಲ್ ಹತ್ಯೆಗೈದಿರುವ ಸಾಧ್ಯತೆ ಇದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು