AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈನಾನ್ಶಿಯರ್ ಜತೆ ಲವ್ವಿಡವ್ವಿ: ಹೋಟೆಲ್​ ನಡೆಸುತ್ತಿದ್ದ ಗಂಡನನ್ನೇ ಮುಗಿಸಿದ್ದ ಕೊಲೆಗಾತಿ ಪತ್ನಿ ಸಿಕ್ಕಿಬಿದ್ಲು

ತಮ್ಮ ಲವ್ವಿಡವ್ವಿಗೆ ಅಡ್ಡಿಯಾಗಿದ್ದಾನೆಂದು ಕಟ್ಟಿಕೊಂಡ ಗಂಡನನ್ನೇ ಕೊಲೆ ಮಾಡಿಸಿ ನಾಟಕವಾಡಿದ್ದ ಕೊಲೆಗಾತಿ ಇದೀಗ ಪೊಲೀಸರ ಕೈಗೆ ಸಿಕ್ಕಿಬಿದಿದ್ದಾಳೆ.

ಫೈನಾನ್ಶಿಯರ್ ಜತೆ ಲವ್ವಿಡವ್ವಿ: ಹೋಟೆಲ್​ ನಡೆಸುತ್ತಿದ್ದ ಗಂಡನನ್ನೇ ಮುಗಿಸಿದ್ದ ಕೊಲೆಗಾತಿ ಪತ್ನಿ ಸಿಕ್ಕಿಬಿದ್ಲು
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on:Jul 03, 2023 | 8:35 AM

Share

ಬೆಂಗಳೂರು: ಬೆಂಗಳೂರಿನ (Bengaluru) ತಲಘಟ್ಟಪುರದಲ್ಲಿ ಜೂ.28ರಂದು ನಡೆದಿದ್ದ ಅರುಣ್​ ಕುಮಾರ್ ಎನ್ನುವ ವ್ಯಕ್ತಿ ಕೊಲೆ ಪ್ರಕರಣವನ್ನು ಪೊಲೀಸರು 40 ಗಂಟೆಗಳಲ್ಲಿ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅರುಣ್​ ಕುಮಾರ್​ನನ್ನು ಕೊಲೆ ಮಾಡಿದ್ದು ಬೇರೆ ಯಾರು ಅಲ್ಲ ಕಟ್ಟಿಕೊಂಡಿದ್ದ ಹೆಂಡತಿ (Wife). ಹೌದು…ರಂಜಿತಾ ಎನ್ನುವಾಕೆ ತನ್ನ ಪ್ರಿಯಕರನೊಂದಿಗೆ (Lover) ಸೇರಿಕೊಂಡು ಪತಿ ಅರುಣ್​ ಕುಮಾರ್​ನನ್ನು ಕೊಲೆ ಮಾಡಿದ್ದಾಳೆ. ಈ ಸಂಬಂಧ ಇದೀಗ ತಲಘಟ್ಟಪುರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಪತ್ನಿ ರಂಜಿತಾ, ಪ್ರಿಯಕರ ಗಣೇಶ್, ಶರತ್ ಶಿವಾನಂದ, ದೀಪು ಬಂಧಿತ ಆರೋಪಿಗಳು.

ಇದನ್ನೂ ಓದಿ: ಬೇರೆಯವನ ಜತೆ ಸಂಬಂಧ ಇದ್ರೆ ಡೈವರ್ಸ್ ಕೊಟ್ಟು ಹೋಗಿ, ಆದ್ರೆ ಗಂಡಂದಿರನ್ನು ಕೊಲೆ ಮಾಡ್ಬೇಡಿ: ಮಹಿಳೆಯರಲ್ಲಿ ವಿಶಿಷ್ಟ ಮನವಿ

ಆರೋಪಿ ಗಣೇಶ್​, ರಂಜಿತಾ ನಡುವೆ ಅಕ್ರಮ ಸಂಬಂಧ ಇತ್ತು. ಆದ್ರೆ, ತಮ್ಮಿಬ್ಬರ ಲವ್ವಿಡವ್ವಿಗೆ ಪತಿ ಅರುಣ್​ ಕುಮಾರ್ ಅಡ್ಡಿಯಾಗಿದ್ದ. ಈ ಹಿನ್ನೆಲೆಯಲ್ಲಿ ರಂಜಿತಾ ಜೂ.28ರಂದು ಪ್ರಿಯಕರ ಜತೆ ಸೇರಿ ಪತಿ ಅರುಣ್​ನನ್ನು ಕೊಲೆ ಮಾಡಿಸಿದ್ದಳು ಎಂದು ಪೊಲೀಸ್ ತನಿಖೆ ವೇಳೆ ಬೆಳಕಿಗೆ ಬಂದಿದೆ. ಜೂ.28ರಂದು ಅರುಣ್ ಕುಮಾರ್ ಕೊಲೆಯಾಗಿತ್ತು. ಈ ಬಗ್ಗೆ ಬೆಂಗಳೂರಿನ ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಬೆನ್ನತ್ತಿದ್ದ ಪೊಲೀಸರಿಗೆ ಕೊಲೆಯಾದ ವ್ಯಕ್ತಿಯ ಪತ್ನಿ ಮೇಲೆ ಅನುಮಾನ ಬಂದಿದ್ದು, ಕೂಡಲೇ ಆಕೆಯನ್ನು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಟಾಬಯಲಾಗಿದೆ.

ದಕ್ಷಿಣ ವಿಭಾಗದ ಡಿಸಿಪಿ  ಹೇಳಿದ್ದೇನು?

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ಪ್ರತಿಕ್ರಿಯಿಸಿದ್ದು, ಜೂನ್ 28ರ ಬೆಳಗ್ಗೆ 7 ಗಂಟೆಗೆ ಹತ್ಯೆ ಬಗ್ಗೆ ಮಾಹಿತಿ ಬಂದಿತ್ತು. ಹತ್ಯೆಯಾದ ವ್ಯಕ್ತಿ 27 ವರ್ಷದ ಅರುಣ್ ಕುಮಾರ್ ಎಂದು ಪತ್ತೆ ಮಾಡಲಾಗಿತ್ತು. ಮಾಹಿತಿ ಬಂದ 40 ಗಂಟೆಯಲ್ಲಿ ಪ್ರಕರಣವನ್ನ ಬೇಧಿಸಲಾಗಿದೆ. ಅರುಣ್ ಕುಮಾರ್ ಹೆಂಡತಿ ಹಾಗೂ ಆಕೆಯ ಜೊತೆ ಇನ್ನೂ ನಾಲ್ಕು ಜನ ಪುರುಷರು ಸೇರಿ ಕೊಲೆ ಮಾಡಿದ್ದಾರೆ. ಅರುಣ್ ಕುಮಾರ್ ಆರ್ ಆರ್ ನಗರದ ಜೆಎಸ್ ಎಸ್ ಕಾಲೇಜು ಬಳಿ ಇರುವ ಗೌಡರ ಮನೆ ಬೀಗರ ಊಟ ಹೋಟೆಲ್ ನಡೆಸುತ್ತಿದ್ದ. ಖಾರದ ಪುಡಿ ಎರಚಿ ಬೀಯರ್ ಬಾಟಲ್, ಲಾಂಗ್ ನಿಂದ ಹೊಡೆದು ಕೊಲೆ ಮಾಡಲಾಗಿದೆ. ಮೊದಲೇ ಪ್ಲಾನ್ ಕೊಲೆ ಮಾಡಿದ್ದಾರೆ. ಘಟನಾ ಸ್ಥಳದಲ್ಲಿ ಖಾರದಪುಡಿ ಹಾಕಿ ಹೋಗಿದ್ದಾರೆ. ಆರೋಪಿಗಳ ಪೈಕಿ ಒಬ್ಬ ಫೈನಾನ್ಸಿರ್ ಇದ್ದಾನೆ. ಆತನಿಗೂ ಕೊಲೆಯಾದ ಅರುಣ್ ಪತ್ನಿಗೂ ಪರಿಚಯವಿತ್ತು. ಕೊಲೆಗೆ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ಇನ್ನಷ್ಟು ಅಪರಾಧ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:31 am, Mon, 3 July 23

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ