AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: 70 ವರ್ಷದ ಅರ್ಚಕನಿಂದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಆಮೇಲೆ ಆತ ಮಾಡಿದ್ದೇನು ಗೊತ್ತಾ?

ತಮಿಳುನಾಡಿನ 70 ವರ್ಷದ ಅರ್ಚಕ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಬಳಿಕ ಶಿಕ್ಷೆಗೆ ಹೆದರಿ ದೇವಾಲಯದೊಳಗೆ ಬೀಗ ಹಾಕಿಕೊಂಡಿದ್ದಾನೆ. ಐದು ವರ್ಷದ ಬಾಲಕಿಯ ಮೇಲೆ ಲೈಂಗಿಕ ಕಿರುಕುಳದ ಆರೋಪದ ನಂತರ 70 ವರ್ಷದ ತಿಲಗರ್ ಎಂಬ ಅರ್ಚಕನನ್ನು ಬಂಧಿಸಲಾಗಿದೆ.

Crime News: 70 ವರ್ಷದ ಅರ್ಚಕನಿಂದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಆಮೇಲೆ ಆತ ಮಾಡಿದ್ದೇನು ಗೊತ್ತಾ?
70 ವರ್ಷದ ಅರ್ಚಕನಿಂದ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ
ಸುಷ್ಮಾ ಚಕ್ರೆ
| Edited By: |

Updated on:Sep 27, 2024 | 6:09 PM

Share

ಚೆನ್ನೈ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ದೇವಾಲಯದ ತಿಲಗರ್ ಎಂಬ 70 ವರ್ಷದ ಅರ್ಚಕನನ್ನು ಬಂಧಿಸಲಾಗಿದೆ. ತಮಿಳುನಾಡಿನ ಥೇಣಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಪ್ರಸಾದ ನೀಡುವ ನೆಪದಲ್ಲಿ ಅರ್ಚಕ 5 ವರ್ಷದ ಮಗು ಹಾಗೂ ಆಕೆಯ ಸ್ನೇಹಿತರನ್ನು ದೇವಸ್ಥಾನಕ್ಕೆ ಕರೆದೊಯ್ದಿದ್ದರು.

ತಿಲಗರ್ ಎಂಬ ಅರ್ಚಕ ದೇವಸ್ಥಾನದ ಹೊರಗೆ ಆಟವಾಡುತ್ತಿದ್ದ ಮಕ್ಕಳಿಗೆ ಪ್ರಸಾದ ನೀಡುವುದಾಗಿ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿದ್ದಾರೆ. ಆಗ ಅವರು 5 ವರ್ಷದ ಬಾಲಕಿಯ ಮೇಲೆ ಹಲ್ಲೆ ನಡೆಸಿ, ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ವರದಿಯಾಗಿದೆ. ಮನೆಗೆ ಹಿಂದಿರುಗಿದ ನಂತರ, ಆ ಹುಡುಗಿ ಧೈರ್ಯದಿಂದ ತನ್ನ ಹೆತ್ತವರಿಗೆ ಈ ಭಯಾನಕ ಘಟನೆಯನ್ನು ಹೇಳಿದಳು. ಬಳಿಕ ಊರಿನವರು ಆ ಅರ್ಚಕನನ್ನು ಹೊಡೆಯಲು ದೇವಸ್ಥಾನದ ಬಳಿ ಜಮಾಯಿಸಿದರು.

ಇದನ್ನೂ ಓದಿ: ಹರಿಯಾಣದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ 13 ಕಾಂಗ್ರೆಸ್ ಶಾಸಕರ ಉಚ್ಛಾಟನೆ

ಇದರಿಂದ ಆತಂಕಗೊಂಡ ಅರ್ಚಕ ತನ್ನನ್ನು ರಕ್ಷಿಸಿಕೊಳ್ಳಲು ದೇವಸ್ಥಾನದ ಒಳಗಿನಿಂದ ಬಾಗಿಲನ್ನು ಲಾಕ್ ಮಾಡಿಕೊಂಡಿದ್ದಾರೆ. ಈ ವಿಚಾರ ತಿಳಿದ ಗ್ರಾಮಸ್ಥರು ಒಗ್ಗಟ್ಟಾಗಿ ಬಂದು ಆತನಿಗೆ ಥಳಿಸಲು ಸಜ್ಜಾಗಿದ್ದಾರೆ. ಬಳಿಕ ಪೊಲೀಸರು ಬಂದು ಆ ಅರ್ಚಕನನ್ನು ವಶಕ್ಕೆ ಪಡೆದಿದ್ದಾರೆ.

ಬಾಲಕಿಯ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತಿಲಗರ್ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಘಟನೆ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದ್ದು, ಬಾಲಕಿಗೆ ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:31 pm, Fri, 27 September 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್