ತಮಿಳುನಾಡು: ಬಿರಿಯಾನಿ ವಿಚಾರವಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

| Updated By: ಅಕ್ಷಯ್​ ಪಲ್ಲಮಜಲು​​

Updated on: Aug 22, 2023 | 12:25 PM

ಬಿರಿಯಾನಿ ವಿಚಾರವಾಗಿ ನಡೆದ ಜಗಳದಲ್ಲಿ 22 ವರ್ಷದ ಯುವಕನ ಕೊಲೆಯಾಗಿರುವ ಘಟನೆ ತಮಿಳುನಾಡಿನ ಚೆನ್ನೈನ ಮಣ್ಣೂರುಪೇಟೆ ಬಸ್ ನಿಲ್ದಾಣದ ಬಳಿ ನಡೆದಿದೆ. ಮೃತರನ್ನು ಬಾಲಾಜಿ ಎಂದು ಗುರತಿಸಲಾಗಿದ್ದು, ಇವರು ಚೆನ್ನೈನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಎಂದು ಹೇಳಲಾಗಿದೆ.

ತಮಿಳುನಾಡು: ಬಿರಿಯಾನಿ ವಿಚಾರವಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
ಸಾಂದರ್ಭಿಕ ಚಿತ್ರ
Follow us on

ಚೆನ್ನೈ: ಬಿರಿಯಾನಿ ವಿಚಾರವಾಗಿ ನಡೆದ ಜಗಳದಲ್ಲಿ 22 ವರ್ಷದ ಯುವಕನ ಕೊಲೆಯಾಗಿರುವ ಘಟನೆ ತಮಿಳುನಾಡಿನ ಚೆನ್ನೈನ ಮಣ್ಣೂರುಪೇಟೆ ಬಸ್ ನಿಲ್ದಾಣದ ಬಳಿ ನಡೆದಿದೆ. ಮೃತರನ್ನು ಬಾಲಾಜಿ ಎಂದು ಗುರತಿಸಲಾಗಿದ್ದು, ಇವರು ಚೆನ್ನೈನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಎಂದು ಹೇಳಲಾಗಿದೆ. ಈ ಯುವಕ ರಾತ್ರಿ ಊಟ ಮಾಡಲು ಮಣ್ಣೂರುಪೇಟೆ ಬಸ್ ನಿಲ್ದಾಣದ ಬಳಿ ಸ್ನೇಹಿತರೊಂದಿಗೆ ಬಂದು ಬೀದಿಬದಿಯ ಸ್ಟಾಲ್​​ ಒಂದರಲ್ಲಿ ಬಿರಿಯಾನಿ ಆರ್ಡರ್ ಮಾಡಿದ್ದಾನೆ, ಇದೇ ಸಮಯಕ್ಕೆ ಮದ್ಯಪಾನ ಮಾಡಿರುವ ಮೂವರು ವ್ಯಕ್ತಿಗಳು ಅದೇ ಸ್ಟಾಲ್​​​ಗೆ ಬಂದು, ಅವರು ಕೂಡ ಆರ್ಡರ್ ಮಾಡಿದ್ದಾರೆ. ಸ್ಟಾಲ್​​ ಮಾಲೀಕ ಮೊದಲು ಆರ್ಡರ್ ಮಾಡಿದವರಿಗೆ ಬಿರಿಯಾನಿ ನೀಡಿದ್ದಾನೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಈ ಮೂವರು ಕುಡುಕರು ಬಾಲಾಜಿಗೆ ರಾಡ್​​ನಿಂದ ಹೊಡೆದು ಕೊಂದಿದ್ದಾರೆ.

ಕುಡಿದ ಅಮಲಿನಲ್ಲಿದ್ದ ವ್ಯಕ್ತಿಗಳು ಬಾಲಾಜಿ ಮೇಲೆ ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುವಕನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಜೈಲಿನಿಂದ ಹೊರಬಂದ ಬೆನ್ನಲ್ಲೇ ರೌಡಿಶೀಟರ್​ ಕೊಲೆ: ದುಷ್ಕರ್ಮಿಗಳು ಪರಾರಿ

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂರತೆ ಚೆನ್ನೈ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣದ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.