AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಗೆ ಪೋಷಕರ ವಿರೋಧ: ನೇಣಿಗೆ ಶರಣಾದ ಪ್ರೇಮಿಗಳು

ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ನೊಂದಿದ್ದ ಪ್ರೇಮಿಗಳು, ಒಬ್ಬರಿಗೊಬ್ಬರು ತಬ್ಬಿಗೊಂಡು ಮನೆಯ ಪ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮಿಳುನಾಡಿನ ಡೆಂಕಣಿಕೋಟೆಯ ಕೆಳಮಂಗಲ ಸಮೀಪದ ಗೌತಾಲಂ ಗ್ರಾಮದಲ್ಲಿ ಘಟನೆ ನಡೆದಿದೆ.

ಪ್ರೀತಿಗೆ ಪೋಷಕರ ವಿರೋಧ: ನೇಣಿಗೆ ಶರಣಾದ ಪ್ರೇಮಿಗಳು
ಯುವಶ್ರೀ, ನರಸಿಂಹಮೂರ್ತಿ
ರಾಮು, ಆನೇಕಲ್​
| Edited By: |

Updated on:Aug 25, 2024 | 1:15 PM

Share

ಆನೆಕಲ್​, ಆಗಸ್ಟ್​ 25: ಪ್ರೀತಿಗೆ (Love) ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮನನೊಂದು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಒಬ್ಬರಿಗೊಬ್ಬರು ತಬ್ಬಿಕೊಂಡು ಮನೆಯ ಪ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ. ತಮಿಳುನಾಡಿನ (Tamil Nadu) ಡೆಂಕಣಿಕೋಟೆಯ ಕೆಳಮಂಗಲ ಸಮೀಪದ ಗೌತಾಲಂ ಗ್ರಾಮದಲ್ಲಿ ಘಟನೆ ನಡೆದಿದೆ. ಗೌತಾಲಂ ಗ್ರಾಮದ ನರಸಿಂಹಮೂರ್ತಿ (22), ಬಾಚನಪ್ಪಟ್ಟಿ ಗ್ರಾಮದ ಯುವಶ್ರೀ (17) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.

ನರಸಿಂಹಮೂರ್ತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಯುವಶ್ರೀ ಕೃಷ್ಣಗಿರಿಯ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ನರಸಿಂಹ ಮೂರ್ತಿ ಹಾಗೂ ಯುವಶ್ರೀ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರ ಪ್ರೀತಿಗೆ ಯುವಶ್ರೀ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ನರಸಿಂಹಮೂರ್ತಿ ಯುವಶ್ರೀಗೆ ಕಿರುಕುಳ ನೀಡುತ್ತಿದ್ದಾನೆಂದು ಯುವಶ್ರೀ ಪೋಷಕರು ಕಳೆದ ತಿಂಗಳು ಡೆಂಕಣಿಕೋಟೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ಪೋಕ್ಸೋ ಕಾಯ್ದೆಯಡಿ ನರಸಿಂಹಮೂರ್ತಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. 10‌ ದಿನಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ನರಸಿಂಹಮೂರ್ತಿ ಜೈಲಿನಿಂದ ಹೊರಬಂದಿದ್ದನು.

ಇದನ್ನೂ ಓದಿ: ಶಾಕಿಂಗ್! ಹೆಂಡ್ತಿ ರೀಲ್ಸ್​ ಹುಚ್ಚಾಟ ನೋಡಲಾಗದೇ ಹೊಡೆದು ಕೊಂದ ಗಂಡ

ನರಸಿಂಹಮೂರ್ತಿ ಜೈಲಿನಿಂದ ಹೊರಬಂದ ಬಳಿಕ ಯುವಶ್ರಿ ಜೊತೆ ಜೊತೆ ನಿರಂತರ ಫೋನ್​ನಲ್ಲಿ ಸಂಪರ್ಕ ಇದ್ದನು. ಯುವಶ್ರೀ ಶುಕ್ರವಾರ ಸಂಜೆ ಕಾಲೇಜು ಮುಗಿಸಿ ನರಸಿಂಹಮೂರ್ತಿ ಮನೆಗೆ ಹೋಗಿದ್ದಾಳೆ. ಪ್ರೀತಿಗೆ ಪೋಷಕರು ವಿರೋಧ ಮಾಡುತ್ತಿರುವುದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಮನೆಯ ಬಾಗಿಲು ಹಾಕಿಕೊಂಡು ಒಬ್ಬರಿಗೊಬ್ಬರು ತಬ್ಬಿಕೊಂಡು ಇಬ್ಬರು ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಎಷ್ಟು ಹೊತ್ತಾದರೂ, ಮನೆಯ ಬಾಗಿಲು ತೆರೆಯದೆ ಇದ್ದಾಗ ಅನುಮಾನಗೊಂಡ ಯುವಕನ ಪೋಷಕರು ಬಾಗಿಲು ಮುರಿದು ಒಳ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಡೆಂಕಣಿಕೋಟೆ ಡಿವೈಎಸ್ಪಿ ಶಾಂತಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಡೆಂಕಣಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ

ಕೋಲಾರ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ ಡೆತ್​ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಾನಸ (24) ಮೃತ ದುರ್ದೈವಿ. ಕೋಲಾರ ಹೊರವಲಯದ ಸಹಕಾರನಗರದಲ್ಲಿ ನಡೆದಿರುವ ಘಟನೆ ನಡೆದಿದೆ.

ಒಂದು ವರ್ಷದ ಹಿಂದೆ ಕೋಲಾರ ತಾಲೂಕಿನ ತೂರಾಂಡಹಳ್ಳಿ ಗ್ರಾಮದ ಉಲ್ಲಾಸ್ ಗೌಡ ಎಂಬುವರ ಜೊತೆ ಮಾನಸ ಮದುವೆಯಾಗಿತ್ತು. ಪತಿ ಉಲ್ಲಾಸ್ ಹಾಗೂ ಕುಟುಂಬಸ್ಥರಿಂದ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಮೃತ ಮಾನಸ ತವರು‌ಮನೆಗೆ ಬಂದು ಪೋಷಕರ ಜೊತೆ ವಾಸವಾಗಿದ್ದಳು. ಆದರೆ, ಇದೀಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:14 pm, Sun, 25 August 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ