AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪೊಲೀಸ್ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ಸೃಷ್ಟಿಸಿದ್ದ ವ್ಯಕ್ತಿ ಕೊನೆಗೂ ಪೊಲೀಸ್ ಬಲೆಗೆ

fake Bengaluru police account on X; ಏಪ್ರಿಲ್ 28ರಂದು ಸಿಸಿಬಿ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು. ಜತೆಗೆ ವಿಶೇಷ ತನಿಖಾ ತಂಡ ರಚಿಸಿ ತನಿಖೆ ಆರಂಭಿಸಿದ್ದರು. ಲಭ್ಯವಿರುವ ತಂತ್ರಜ್ಞಾನಗಳ ಸಹಾಯದಿಂದ ಕಾರ್ಯಾಚರಣೆ ನಡೆಸಿ ಮಾಗೇಶ್ ಕುಮಾರ್​ನನ್ನು ಚೆಟ್ಟುಪಟ್ಟುವಿನಲ್ಲಿ ಬಂಧಿಸಿದ್ದಾರೆ.

ಬೆಂಗಳೂರು ಪೊಲೀಸ್ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ಸೃಷ್ಟಿಸಿದ್ದ ವ್ಯಕ್ತಿ ಕೊನೆಗೂ ಪೊಲೀಸ್ ಬಲೆಗೆ
ಸಾಂದರ್ಭಿಕ ಚಿತ್ರ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Aug 23, 2023 | 9:17 PM

Share

ಬೆಂಗಳೂರು, ಆಗಸ್ಟ್ 23: ಬೆಂಗಳೂರು ಪೊಲೀಸ್ (Bengaluru Police) ಹೆಸರಿನಲ್ಲಿ ಸಾಮಾಜಿಕ ಜಾಲತಾಣವಾದ ಟ್ವಿಟರ್​ನಲ್ಲಿ (ಎಕ್ಸ್) ನಕಲಿ ಖಾತೆಯನ್ನು ಸೃಷ್ಟಿಸಿದ್ದ ತಮಿಳುನಾಡು (Tamilu Nadu) ಮೂಲದ ವ್ಯಕ್ತಿ ಮಾಗೇಶ್ ಕುಮಾರ್ ಎಂಬಾತನನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬೆಂಗಳೂರು ಪೊಲೀಸ್ ಇಲಾಖೆಯು ಟ್ವಿಟರ್​ನಲ್ಲಿ @BlrCityPolice ಎಂಬ ಹೆಸರಿನ ಖಾತೆಯನ್ನು ಹೊಂದಿದೆ. ಅದೇ ಮಾದರಿಯಲ್ಲಿ ಆರೋಪಿ ಮಾಗೇಶ್ ಕುಮಾರ್ ಟ್ವಿಟರ್ ನಲ್ಲಿ @BlrCityPolicee ಎಂಬ ನಕಲಿ ಖಾತೆಯನ್ನು ಸೃಷ್ಟಿಸಿದ್ದನು. ಈ ಅಪರಾಧದ ಹಿನ್ನಲೆಯಲ್ಲಿ ಆತನನ್ನು ಬಂಧಿಸಲಾಗಿದೆ ಎಂದು ಕೇಂದ್ರೀಯ ಅಪರಾಧ ದಳ (CCB) ಮಾಹಿತಿ ನೀಡಿದೆ. ಪೊಲೀಸ್ ಹೆಸರನ್ನು ದುರುಪಯೋಗ ಪಡಿಸಿಕೊಳ್ಳಲು ಹಾಗೂ ಪೊಲೀಸ್ ಇಲಾಖೆಯ ಹೆಸರಿಗೆ ಮಸಿಬಳಿಯುವ ಉದ್ದೇಶದಿಂದ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಈ ಕುರಿತು ಏಪ್ರಿಲ್ 28ರಂದು ಸಿಸಿಬಿ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು. ಜತೆಗೆ ವಿಶೇಷ ತನಿಖಾ ತಂಡ ರಚಿಸಿ ತನಿಖೆ ಆರಂಭಿಸಿದ್ದರು. ಲಭ್ಯವಿರುವ ತಂತ್ರಜ್ಞಾನಗಳ ಸಹಾಯದಿಂದ ಕಾರ್ಯಾಚರಣೆ ನಡೆಸಿ ಮಾಗೇಶ್ ಕುಮಾರ್​ನನ್ನು ಚೆಟ್ಟುಪಟ್ಟುವಿನಲ್ಲಿ ಬಂಧಿಸಿದ್ದಾರೆ.

ಮಾಗೇಶ್ ಕುಮಾರ್ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಸಿ (ಐಡೆಂಟಿಟಿ ಥೆಫ್ಟ್), ಸೆಕ್ಷನ್ 66ಡಿ (ಕಂಪ್ಯೂಟರ್ ಮಾಹಿತಿಗಳನ್ನು ಬಳಸಿಕೊಂಡು ವ್ಯಕ್ತಿಯನ್ನು ವಂಚಿಸುವುದು) ಹಾಗೂ ಐಪಿಸಿ ಸೆಕ್ಷನ್ 419ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಗೆ ಮುಂದಾದ ವರ; ಮದುವೆ ಮಂಟಪದಲ್ಲೇ ಜಗಳ, ಕೇಸು ದಾಖಲು

ದೇಶದಲ್ಲಿ ಸೈಬರ್ ಕ್ರೈಮ್​​ಗೆ ಸಂಬಂಧಪಟ್ಟ ಅಪರಾಧಗಳು ಹೆಚ್ಚಾಗಿದ್ದು, ಬೆಂಗಳೂರಿನಲ್ಲಿ ಕ್ಯೂ ಆರ್ ಕೋಡ್ ಸಂಬಂಧಿತ ಅಪರಾಧಗಳೂ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿವೆ. ಪೊಲೀಸರೇ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ 2017 ರಿಂದ ಇಲ್ಲಿಯವರೆಗೆ ಬೆಂಗಳೂರು ನಗರ ಒಂದರಲ್ಲಿಯೇ 50,000 ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 20662 ಪ್ರಕರಣಗಳು ಕ್ಯೂ ಆರ್ ಕೋಡ್ ಗೆ ಸಂಬಂಧಿಸಿದ್ದಾಗಿವೆ. ಸೈಬರ್ ಕೇಸ್ ಗಳಲ್ಲಿ ಶೇ.40ಕ್ಕಿಂತ ಹೆಚ್ಚು ಪ್ರಕರಣಗಳು, ವಂಚಿಸಿ ಹಣ ಪಡೆದುಕೊಳ್ಳು ವ ಉದ್ದೇಶವನ್ನೇ ಹೊಂದಿದ್ದಾಗಿವೆ ಎನ್ನುತ್ತಾರೆ ಪೊಲೀಸರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:18 pm, Wed, 23 August 23

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!