AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು: ಬಸ್ಸಿಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಕಿಡ್ನ್ಯಾಪ್​ ಮಾಡಿ ಲೈಂಗಿಕ ದೌರ್ಜನ್ಯ

ಯುವತಿಯನ್ನು ಆಟೋದಲ್ಲಿ ಕರೆದೊಯ್ದು ಮೂವರು ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಬಸ್ಸಿಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಚೆನ್ನೈನ ಕಿಲಂಬಕ್ಕಂ ಟರ್ಮಿನಸ್ ಬಳಿ ನಡೆದಿದೆ. ಅಸ್ಸಾಂ ಮೂಲದ ಯುವತಿ ಬಸ್ಸಿಗಾಗಿ ಕಾಯುತ್ತಿದ್ದಾಗ ಆಟೋದಲ್ಲಿ ಬಂದ ಮೂವರು ಆಕೆಯನ್ನು ಅಪಹರಿಸಿದ್ದರು. ಆಟೋ ಚಾಲಕ ಸೇರಿ ಮೂವರು ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಲಾಗಿದೆ.

ತಮಿಳುನಾಡು: ಬಸ್ಸಿಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಕಿಡ್ನ್ಯಾಪ್​ ಮಾಡಿ ಲೈಂಗಿಕ ದೌರ್ಜನ್ಯ
ಮಹಿಳೆ Image Credit source: RMIT University
ನಯನಾ ರಾಜೀವ್
|

Updated on: Feb 05, 2025 | 9:45 AM

Share

ಬಸ್ಸಿಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಅಪಹರಿಸಿ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಚೆನ್ನೈನ ಕಿಲಂಬಕ್ಕಂ ಟರ್ಮಿನಸ್ ಬಳಿ ನಡೆದಿದೆ. ಅಸ್ಸಾಂ ಮೂಲದ ಯುವತಿ ಬಸ್ಸಿಗಾಗಿ ಕಾಯುತ್ತಿದ್ದಾಗ ಆಟೋದಲ್ಲಿ ಬಂದ ಮೂವರು ಆಕೆಯನ್ನು ಅಪಹರಿಸಿದ್ದರು. ಆಟೋ ಚಾಲಕ ಸೇರಿ ಮೂವರು ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಲಾಗಿದೆ.

ತಾಂಬರಂ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಲು ಅಲ್ಲೇ ಸುತ್ತಮುತ್ತಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಎರಡು ವಿಶೇಷ ತಂಡಗಳನ್ನು ಕೂಡ ರಚಿಸಲಾಗಿದೆ. ಆ ಮೂವರು ಬೇರೊಂದು ಆಟೋದಲ್ಲಿ ಕುಳಿತುಕೊಳ್ಳುವಂತೆ ಹೇಳಿ ಕೊಯಂಬೇಡುವಿನಲ್ಲಿ ಬಿಡಲು ಹೇಳಿದ ಬಳಿಕ ಆಕೆ ಪೊಲೀಸರನ್ನು ಸಂಪರ್ಕಿಸುವಲ್ಲಿ ಯಶಸ್ವಿಯಾಗಿದ್ದಾಳೆ.

ಆ ಆಟೋ ಚಾಲಕ ಚೆನ್ನೈನಲ್ಲಿರುವ ತನ್ನ ಸಂಬಂಧಿಕರಿಗೆ ಮಾಹಿತಿ ನೀಡಲು ಸಹಾಯ ಮಾಡಿದ್ದಾನೆಂದು ಆಕೆ ಹೇಳಿದ್ದಾಳೆ. ಅಪಹರಣಕ್ಕೊಳಗಾಗಿದ್ದಾಗ ಆಟೋದಲ್ಲಿ ಆಕೆಗೆ ಚಿತ್ರಹಿಂಸೆ ನೀಡುತ್ತಿರುವುದನ್ನು ನೋಡಿದ್ದ ಜನರು ಕೂಡಲೇ ಪೊಲೀಸ್ ಕಂಟ್ರೋಲ್​ ರೂಂಗೆ ಕರೆ ಮಾಡಿದ್ದರು. ಮಧ್ಯರಾತ್ರಿಯ ಸುಮಾರಿಗೆ ಕೊಯೆಂಬೆಡು ಬಳಿ ಪೊಲೀಸರು ಆಕೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾದರು.

ಮತ್ತಷ್ಟು ಓದಿ: ಪ್ರೀತಿಸಿ ಮದ್ವೆಯಾಗಿದ್ದ ಜೋಡಿ ಬಾಳಲ್ಲಿ ಅನುಮಾನದ ಬಿರುಗಾಳಿ, ಪ್ರಿಯಕರನಿಗೆ ಹೇಳಿ ಗಂಡನ ಕೊಲ್ಲಿಸಿದ ಪತ್ನಿ!

ಸೇಲಂನಲ್ಲಿ ಮನೆಯೊಂದರಲ್ಲಿ ಆಕೆ ಕೆಲಸ ಮಾಡುತ್ತಿದ್ದಳು, ಮಾಧವರಂನಲ್ಲಿರುವ ತನ್ನ ಸಂಬಂಧಿಯನ್ನು ಭೇಟಿ ಮಾಡಲು ಚೆನ್ನೈಗೆ ಬಂದಿದ್ದಳು. ಕಿಲಂಬಕ್ಕಂನಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಬಸ್ಸಿನಿಂದ ಇಳಿದು ಮಾಧವರಂಗೆ ಹೋಗುವ ಬಸ್ ಹತ್ತಲು ಕಾಯುತ್ತಿದ್ದಳು. ಬಸ್ ಸಿಗದಿದ್ದಾಗ, ಟರ್ಮಿನಸ್‌ನಿಂದ ಹೊರಬಂದ ಆಕೆಗೆ ಡ್ರಾಪ್ ಕೊಡುವುದಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಪ್ರಸ್ತುತ ಕೌನ್ಸೆಲಿಂಗ್ ನಡೆಸಲಾಗುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್