AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ತಮಿಳುನಾಡಿನ ಖಾಸಗಿ ಕಾಲೇಜಿನ ಅಧ್ಯಕ್ಷ ಬಂಧನ

ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕಾಲೇಜು ಚೇರ್​​ಮನ್ ದಾಸ್ವಿನ್ ಜಾನ್ ಗ್ರೇಸ್ (40) ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಜಾನ್​ನ ಬಂಧನಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳು 'ರಾಸ್ತಾ ರೋಕೋ' ಪ್ರತಿಭಟನೆ ನಡೆಸಿದ್ದಾರೆ.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ತಮಿಳುನಾಡಿನ ಖಾಸಗಿ ಕಾಲೇಜಿನ ಅಧ್ಯಕ್ಷ ಬಂಧನ
ವಿದ್ಯಾರ್ಥಿಗಳ ಪ್ರತಿಭಟನೆ
TV9 Web
| Edited By: |

Updated on:Jun 12, 2022 | 4:58 PM

Share

ಚೆನ್ನೈ: ತಮಿಳುನಾಡಿನ (Tamil Nadu) ವಿರುದುನಗರದ (Virudhunagar) ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಅಶ್ಲೀಲ ವಿಡಿಯೊ ಕರೆ (obscene video calls)ಮಾಡಿದ ಆರೋಪದ ಮೇಲೆ ಕಾಲೇಜಿನ ಅಧ್ಯಕ್ಷರನ್ನು ಶನಿವಾರ ಬಂಧಿಸಲಾಗಿದೆ. ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಕಾಲೇಜು ಚೇರ್​​ಮನ್ ದಾಸ್ವಿನ್ ಜಾನ್ ಗ್ರೇಸ್ (40) ಎಂಬಾತನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಜಾನ್​ನ ಬಂಧನಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳು ‘ರಾಸ್ತಾ ರೋಕೋ’ ಪ್ರತಿಭಟನೆ ನಡೆಸಿದ್ದಾರೆ. ಸ್ಥಳೀಯ ಬಿಜೆಪಿ ನಾಯಕರೂ ಆಗಿರುವ ಆರೋಪಿ ಜಾನ್ ವಿರುದ್ಧ ಸೆಕ್ಷನ್ ಐಪಿಸಿ 354A(2) (ಲೈಂಗಿಕ ಕಿರುಕುಳ ಮತ್ತು ಲೈಂಗಿಕ ಕಿರುಕುಳಕ್ಕಾಗಿ ಶಿಕ್ಷೆ), 354 ಬಿ(ವಿವಸ್ತ್ರಗೊಳ್ಳುವ ಉದ್ದೇಶದಿಂದ ಮಹಿಳೆಯ ಮೇಲೆ ಕ್ರಿಮಿನಲ್ ಬಲದ ಆಕ್ರಮಣ ಅಥವಾ ಬಳಕೆ), 354ಸಿ ಮತ್ತು 506( i) (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ), ಸೆಕ್ಷನ್ 4 (ಮಹಿಳೆಗೆ ಕಿರುಕುಳಕ್ಕಾಗಿ ದಂಡ) ತಮಿಳುನಾಡು ಮಹಿಳಾ ಕಿರುಕುಳ ನಿಷೇಧ ಕಾಯಿದೆ ಮತ್ತು ಸೆಕ್ಷನ್ 3(i)(w)(ii) (ಅಪರಾಧಗಳ ದೌರ್ಜನ್ಯಗಳಿಗೆ ಶಿಕ್ಷೆ) ಎಸ್​​ಸಿ/ಎಸ್​ಟಿ (ದೌರ್ಜನ್ಯ ತಡೆ) ಕಾಯಿದೆ ಅಡಿಯಲ್ಲಿ ಕೇಸು ದಾಖಲಿಸಲಾಗಿದೆ. ಪೊಲೀಸ್ ವರದಿಗಳ ಪ್ರಕಾರ ಅಧ್ಯಕ್ಷರು ಕಳೆದ ಆರು ತಿಂಗಳಲ್ಲಿ ಹುಡುಗಿಗೆ ವಿಡಿಯೊ ಕರೆಗಳನ್ನು ಮಾಡುತ್ತಿದ್ದರು ಮತ್ತು ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸುತ್ತಿದ್ದರು. ಕಳೆದ ವಾರ ಕಾಲೇಜು ಹಾಸ್ಟೆಲ್‌ನಲ್ಲಿದ್ದ ಆಕೆಯ ಸಹಪಾಠಿಳು ಇದನ್ನು ಗಮನಿಸಿ ಆಕೆಯನ್ನು ಪ್ರಶ್ನಿಸಿದ್ದರು. ಆಪಾದಿತ ಲೈಂಗಿಕ ಕಿರುಕುಳದ ಬಗ್ಗೆ ವಿದ್ಯಾರ್ಥಿನಿ ಅವರಿಗೆ ತಿಳಿಸಿದ್ದಾಳೆ. ನಂತರ, ಆಕೆಯ ಸ್ನೇಹಿತರು ವಿಡಿಯೊವನ್ನು ರೆಕಾರ್ಡ್ ಮಾಡಿದರು. ಆಕೆಯ ಮುಖವನ್ನು ಬ್ಲರ್ ಮಾಡಿ ವಿಡಿಯೊವನ್ನು ಪ್ರಸಾರ ಮಾಡಿ ಜಾನ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಟಿಎಂ ದಾಸ್ವಿನ್ ಜಾನ್ ಗ್ರೇಸ್ ಅವರು ವಿರುದುನಗರದ ಅರುಪ್ಪುಕೊಟ್ಟೈನಲ್ಲಿರುವ ಅರಸು ಎಲೆಕ್ಟ್ರೋ ಹೋಮಿಯೋಪತಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅಧ್ಯಕ್ಷರಾಗಿದ್ದಾರೆ. ಅವರು ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಮಾಜಿ ಅಧ್ಯಕ್ಷರಾಗಿದ್ದರು.  ವಿರುದುನಗರದ ಅರುಪ್ಪುಕೊಟ್ಟೈ ಆಲ್ ವುಮೆನ್ಸ್ ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು15 ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಲಾಯಿತು.

ನ್ಯೂಸ್ 9 ನೊಂದಿಗೆ ಮಾತನಾಡಿದ ದಕ್ಷಿಣ ವಲಯ ಪೊಲೀಸ್ ಮಹಾನಿರೀಕ್ಷಕ ಆಸ್ರ ಗರ್ಗ್, ವಿದ್ಯಾರ್ಥಿನಿಯೊಬ್ಬಳ ದೂರಿನ ಆಧಾರದ ಮೇಲೆ ಆರೋಪಿಯನ್ನು ತಕ್ಷಣವೇ ಬಂಧಿಸಲಾಗಿದೆ. ಈ ಕಾಲೇಜಿನ ವಿದ್ಯಾರ್ಥಿನಿಯರು ಕೆಲವು ತಿಂಗಳ ಹಿಂದೆ ಆರೋಪಿಗಳ ವಿರುದ್ಧ ಇದೇ ರೀತಿಯ ಆರೋಪ ಮಾಡಿ ಪತ್ರ ಬರೆದಿರುವುದು ನಮ್ಮ ಗಮನಕ್ಕೆ ಬಂದಿದ್ದು, ಆ ಬಗ್ಗೆಯೂ ಪರಿಶೀಲಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ
Image
“ನಿನ್ನ ಚರ್ಮ ಸುಲಿದು ಬಿಡ್ತೀನಿ”: ಪೊಲೀಸಪ್ಪನ ಗದರಿಕೆಗೆ ಭಯಗೊಂಡು ಮನೆಯಲ್ಲೇ ಕುಳಿತ ವಿದ್ಯಾರ್ಥಿನಿ?
Image
Crime News: ಆಸ್ತಿಯಲ್ಲಿ ಭಾಗ ಕೇಳುವಂತೆ ಪೀಡಿಸುತ್ತಿದ್ದ ಭಾವನನ್ನೇ ಹತ್ಯೆಗೈದ ಬಾಮೈದ!
Image
ಸಬ್ ಇನ್ಸ್ಪೆಕ್ಟರ್​ನಿಂದ ಪತ್ನಿಗೆ ಕಿರುಕುಳ ಆರೋಪ: ಪತ್ನಿಯಿಂದಲೇ ಪಿಎಸ್ಐ ಗಂಡನ ವಿರುದ್ಧ ದೂರು

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 4:57 pm, Sun, 12 June 22

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು