AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಾ ಫೇಮಸ್ ಆಗ್ಬೇಕು ಅಂತಾ ಪಾಪಿ ಆರೋಪಿ ಫರಾನ್ ಹೀಗಾ ಮಾಡೋದು!?

ಮೈಸೂರು: ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ಸಂಬಂಧಿಸಿ ಬಂಧಿತ ಆರೋಪಿ ಫರಾನ್ ಪಾಷಾನನ್ನು 12 ದಿನ ಪೊಲೀಸರ ವಶಕ್ಕೆ ನೀಡಲಾಗಿದೆ. ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದ ಪೊಲೀಸರು ಹೆಚ್ಚಿನ ವಿಚಾರಣೆಗೆ 15 ದಿನಗಳ ವಶಕ್ಕೆ ಕೇಳಿದ್ದರು ಆದರೆ 12 ದಿನ ಪೊಲೀಸರ ವಶಕ್ಕೆ ನೀಡಿ ಮೈಸೂರಿನ ಜೆಎಂಎಫ್‌ಸಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದ್ದು, ತನಿಖೆ ಚುರುಕುಗೊಳಿಸಿರುವ ಪೊಲೀಸರು ಹಲವರ ವಿಚಾರಣೆ ನಡೆಸುತ್ತಿದ್ದಾರೆ. ತುಂಬಾ ಫೇಮಸ್ […]

ತುಂಬಾ ಫೇಮಸ್ ಆಗ್ಬೇಕು ಅಂತಾ ಪಾಪಿ ಆರೋಪಿ ಫರಾನ್ ಹೀಗಾ ಮಾಡೋದು!?
ಸಾಧು ಶ್ರೀನಾಥ್​
|

Updated on:Nov 19, 2019 | 12:38 PM

Share

ಮೈಸೂರು: ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ಸಂಬಂಧಿಸಿ ಬಂಧಿತ ಆರೋಪಿ ಫರಾನ್ ಪಾಷಾನನ್ನು 12 ದಿನ ಪೊಲೀಸರ ವಶಕ್ಕೆ ನೀಡಲಾಗಿದೆ.

ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದ ಪೊಲೀಸರು ಹೆಚ್ಚಿನ ವಿಚಾರಣೆಗೆ 15 ದಿನಗಳ ವಶಕ್ಕೆ ಕೇಳಿದ್ದರು ಆದರೆ 12 ದಿನ ಪೊಲೀಸರ ವಶಕ್ಕೆ ನೀಡಿ ಮೈಸೂರಿನ ಜೆಎಂಎಫ್‌ಸಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದ್ದು, ತನಿಖೆ ಚುರುಕುಗೊಳಿಸಿರುವ ಪೊಲೀಸರು ಹಲವರ ವಿಚಾರಣೆ ನಡೆಸುತ್ತಿದ್ದಾರೆ.

ತುಂಬಾ ಫೇಮಸ್ ಆಗ್ಬೇಕು ಅಂತಾ ಪಾಪಿ ಹೀಗಾ ಮಾಡೋದು!? ಇನ್ನು ಯಾಕಪ್ಪಾ ನಿಮ್ಮ ಫ್ರೆಂಡ್ ಫರಾನ್ ಹೀಗೆ ಶಾಸಕ ತನ್ವೀರ್​ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಏನು ಕಾರಣ ಇರಬಹುದು ಅಂತಾ ಹೇಳಿ ಎಂದು ಆರೋಪಿ ಫರಾನ್​ನ ಗೆಳೆಯರನ್ನು ಪೊಲೀಸರು ರುಬ್ಬಿದ್ದಕ್ಕೆ ಗಣ್ಯರನ್ನ ಕೊಲೆ ಮಾಡಿ ಹೆಸರು ಮಾಡ್ತೀನಿ ಅಂತಾ ಹೇಳ್ತಿದ್ನಂತೆ. ಹಾಗಾಗಿ ಹಲ್ಲೆ ಮಾಡಿದ್ದಾನೆ ಎಂದಿದ್ದಾರೆ. ಆರೋಪಿ ಫರಾನ್ ತನ್ನ ಆಸೆಯನ್ನ ಆಪ್ತರು ಹಾಗೂ ಗೆಳೆಯರೊಂದಿಗೆ ಹೇಳಿಕೊಂಡಿದ್ದನಂತೆ.

ಫರಾನ್‌ಗೆ ಇತ್ತಿಚಿಗೆ ಹೆಸರು ಮಾಡುವ ಹುಚ್ಚು ಹಿಡಿದಿತ್ತು. ತುಂಬಾ ಫೇಮಸ್ ಆಗ್ಬೇಕು ಅಂತ ಹೇಳ್ತಿದ್ದ. ನಮ್ಮ‌ ಜೊತೆನು ವಿಐಪಿ ಒಬ್ಬರನ್ನ ಕೊಲೆ ಮಾಡಿ ಫೇಮಸ್ ಆಗ್ತಿನಿ ಅಂತಿದ್ದ. ಆದ್ರೆ ಯಾರು ಆ ವಿಐಪಿ ಯಾವಾಗ ಮಾಡ್ತಾನೆ ಅಂತ ಹೇಳಿರಲಿಲ್ಲ. ಆತ ತಮಾಷೆಗೆ ಹೇಳ್ತಾನೆ ಅಂತ ಅಂದುಕೊಂಡಿದ್ದೆವು ಅಂತಾ ಪೊಲೀಸರಿಗೆ ಗೆಳೆಯರು ಮಾಹಿತಿ ನೀಡಿದ್ದಾರೆ. ತನ್ವೀರ್ ಸೇಠ್ ಮೇಲಿನ ಕೊಲೆ‌ಯತ್ನ ಕಂಡು ಫರಾನ್ ಗೆಳೆಯರು ದಿಗ್ಬ್ರಾಂತರಾಗಿದ್ದಾರೆ.

ಕರ್ತವ್ಯಲೋಪ ಹಿನ್ನೆಲೆ ಸೇಠ್ ಗನ್‌ಮ್ಯಾನ್ ಅಮಾನತು: ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ಕೇಸ್​​ನಲ್ಲಿ ಕರ್ತವ್ಯಲೋಪವೆಸಗಿರುವ ಸೇಠ್ ಗನ್‌ಮ್ಯಾನ್​ ಫಿರೋಜ್ ಖಾನ್​ ಅವರನ್ನು ಸೇವೆಯಿಂದ ಸಸ್ಪೆಂಡ್ ಮಾಡಲಾಗಿದೆ. ಈ ಸಂಬಂಧ, ಮೈಸೂರು ನಗರ ಪೊಲೀಸ್ ಆಯುಕ್ತರು CAR ಪೊಲೀಸ್ ಪೇದೆಯಾಗಿರುವ ಫಿರೋಜ್ ಅವರನ್ನು ಅಮಾನತು ಮಾಡಿ ಆದೇಶ ನೀಡಿದ್ದಾರೆ.

Published On - 9:06 am, Tue, 19 November 19

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?