AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಾ ಫೇಮಸ್ ಆಗ್ಬೇಕು ಅಂತಾ ಪಾಪಿ ಆರೋಪಿ ಫರಾನ್ ಹೀಗಾ ಮಾಡೋದು!?

ಮೈಸೂರು: ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ಸಂಬಂಧಿಸಿ ಬಂಧಿತ ಆರೋಪಿ ಫರಾನ್ ಪಾಷಾನನ್ನು 12 ದಿನ ಪೊಲೀಸರ ವಶಕ್ಕೆ ನೀಡಲಾಗಿದೆ. ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದ ಪೊಲೀಸರು ಹೆಚ್ಚಿನ ವಿಚಾರಣೆಗೆ 15 ದಿನಗಳ ವಶಕ್ಕೆ ಕೇಳಿದ್ದರು ಆದರೆ 12 ದಿನ ಪೊಲೀಸರ ವಶಕ್ಕೆ ನೀಡಿ ಮೈಸೂರಿನ ಜೆಎಂಎಫ್‌ಸಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದ್ದು, ತನಿಖೆ ಚುರುಕುಗೊಳಿಸಿರುವ ಪೊಲೀಸರು ಹಲವರ ವಿಚಾರಣೆ ನಡೆಸುತ್ತಿದ್ದಾರೆ. ತುಂಬಾ ಫೇಮಸ್ […]

ತುಂಬಾ ಫೇಮಸ್ ಆಗ್ಬೇಕು ಅಂತಾ ಪಾಪಿ ಆರೋಪಿ ಫರಾನ್ ಹೀಗಾ ಮಾಡೋದು!?
ಸಾಧು ಶ್ರೀನಾಥ್​
|

Updated on:Nov 19, 2019 | 12:38 PM

Share

ಮೈಸೂರು: ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ಸಂಬಂಧಿಸಿ ಬಂಧಿತ ಆರೋಪಿ ಫರಾನ್ ಪಾಷಾನನ್ನು 12 ದಿನ ಪೊಲೀಸರ ವಶಕ್ಕೆ ನೀಡಲಾಗಿದೆ.

ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದ ಪೊಲೀಸರು ಹೆಚ್ಚಿನ ವಿಚಾರಣೆಗೆ 15 ದಿನಗಳ ವಶಕ್ಕೆ ಕೇಳಿದ್ದರು ಆದರೆ 12 ದಿನ ಪೊಲೀಸರ ವಶಕ್ಕೆ ನೀಡಿ ಮೈಸೂರಿನ ಜೆಎಂಎಫ್‌ಸಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದ್ದು, ತನಿಖೆ ಚುರುಕುಗೊಳಿಸಿರುವ ಪೊಲೀಸರು ಹಲವರ ವಿಚಾರಣೆ ನಡೆಸುತ್ತಿದ್ದಾರೆ.

ತುಂಬಾ ಫೇಮಸ್ ಆಗ್ಬೇಕು ಅಂತಾ ಪಾಪಿ ಹೀಗಾ ಮಾಡೋದು!? ಇನ್ನು ಯಾಕಪ್ಪಾ ನಿಮ್ಮ ಫ್ರೆಂಡ್ ಫರಾನ್ ಹೀಗೆ ಶಾಸಕ ತನ್ವೀರ್​ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಏನು ಕಾರಣ ಇರಬಹುದು ಅಂತಾ ಹೇಳಿ ಎಂದು ಆರೋಪಿ ಫರಾನ್​ನ ಗೆಳೆಯರನ್ನು ಪೊಲೀಸರು ರುಬ್ಬಿದ್ದಕ್ಕೆ ಗಣ್ಯರನ್ನ ಕೊಲೆ ಮಾಡಿ ಹೆಸರು ಮಾಡ್ತೀನಿ ಅಂತಾ ಹೇಳ್ತಿದ್ನಂತೆ. ಹಾಗಾಗಿ ಹಲ್ಲೆ ಮಾಡಿದ್ದಾನೆ ಎಂದಿದ್ದಾರೆ. ಆರೋಪಿ ಫರಾನ್ ತನ್ನ ಆಸೆಯನ್ನ ಆಪ್ತರು ಹಾಗೂ ಗೆಳೆಯರೊಂದಿಗೆ ಹೇಳಿಕೊಂಡಿದ್ದನಂತೆ.

ಫರಾನ್‌ಗೆ ಇತ್ತಿಚಿಗೆ ಹೆಸರು ಮಾಡುವ ಹುಚ್ಚು ಹಿಡಿದಿತ್ತು. ತುಂಬಾ ಫೇಮಸ್ ಆಗ್ಬೇಕು ಅಂತ ಹೇಳ್ತಿದ್ದ. ನಮ್ಮ‌ ಜೊತೆನು ವಿಐಪಿ ಒಬ್ಬರನ್ನ ಕೊಲೆ ಮಾಡಿ ಫೇಮಸ್ ಆಗ್ತಿನಿ ಅಂತಿದ್ದ. ಆದ್ರೆ ಯಾರು ಆ ವಿಐಪಿ ಯಾವಾಗ ಮಾಡ್ತಾನೆ ಅಂತ ಹೇಳಿರಲಿಲ್ಲ. ಆತ ತಮಾಷೆಗೆ ಹೇಳ್ತಾನೆ ಅಂತ ಅಂದುಕೊಂಡಿದ್ದೆವು ಅಂತಾ ಪೊಲೀಸರಿಗೆ ಗೆಳೆಯರು ಮಾಹಿತಿ ನೀಡಿದ್ದಾರೆ. ತನ್ವೀರ್ ಸೇಠ್ ಮೇಲಿನ ಕೊಲೆ‌ಯತ್ನ ಕಂಡು ಫರಾನ್ ಗೆಳೆಯರು ದಿಗ್ಬ್ರಾಂತರಾಗಿದ್ದಾರೆ.

ಕರ್ತವ್ಯಲೋಪ ಹಿನ್ನೆಲೆ ಸೇಠ್ ಗನ್‌ಮ್ಯಾನ್ ಅಮಾನತು: ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ಕೇಸ್​​ನಲ್ಲಿ ಕರ್ತವ್ಯಲೋಪವೆಸಗಿರುವ ಸೇಠ್ ಗನ್‌ಮ್ಯಾನ್​ ಫಿರೋಜ್ ಖಾನ್​ ಅವರನ್ನು ಸೇವೆಯಿಂದ ಸಸ್ಪೆಂಡ್ ಮಾಡಲಾಗಿದೆ. ಈ ಸಂಬಂಧ, ಮೈಸೂರು ನಗರ ಪೊಲೀಸ್ ಆಯುಕ್ತರು CAR ಪೊಲೀಸ್ ಪೇದೆಯಾಗಿರುವ ಫಿರೋಜ್ ಅವರನ್ನು ಅಮಾನತು ಮಾಡಿ ಆದೇಶ ನೀಡಿದ್ದಾರೆ.

Published On - 9:06 am, Tue, 19 November 19

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ