AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಾ ಫೇಮಸ್ ಆಗ್ಬೇಕು ಅಂತಾ ಪಾಪಿ ಆರೋಪಿ ಫರಾನ್ ಹೀಗಾ ಮಾಡೋದು!?

ಮೈಸೂರು: ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ಸಂಬಂಧಿಸಿ ಬಂಧಿತ ಆರೋಪಿ ಫರಾನ್ ಪಾಷಾನನ್ನು 12 ದಿನ ಪೊಲೀಸರ ವಶಕ್ಕೆ ನೀಡಲಾಗಿದೆ. ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದ ಪೊಲೀಸರು ಹೆಚ್ಚಿನ ವಿಚಾರಣೆಗೆ 15 ದಿನಗಳ ವಶಕ್ಕೆ ಕೇಳಿದ್ದರು ಆದರೆ 12 ದಿನ ಪೊಲೀಸರ ವಶಕ್ಕೆ ನೀಡಿ ಮೈಸೂರಿನ ಜೆಎಂಎಫ್‌ಸಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದ್ದು, ತನಿಖೆ ಚುರುಕುಗೊಳಿಸಿರುವ ಪೊಲೀಸರು ಹಲವರ ವಿಚಾರಣೆ ನಡೆಸುತ್ತಿದ್ದಾರೆ. ತುಂಬಾ ಫೇಮಸ್ […]

ತುಂಬಾ ಫೇಮಸ್ ಆಗ್ಬೇಕು ಅಂತಾ ಪಾಪಿ ಆರೋಪಿ ಫರಾನ್ ಹೀಗಾ ಮಾಡೋದು!?
ಸಾಧು ಶ್ರೀನಾಥ್​
|

Updated on:Nov 19, 2019 | 12:38 PM

Share

ಮೈಸೂರು: ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ಸಂಬಂಧಿಸಿ ಬಂಧಿತ ಆರೋಪಿ ಫರಾನ್ ಪಾಷಾನನ್ನು 12 ದಿನ ಪೊಲೀಸರ ವಶಕ್ಕೆ ನೀಡಲಾಗಿದೆ.

ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದ ಪೊಲೀಸರು ಹೆಚ್ಚಿನ ವಿಚಾರಣೆಗೆ 15 ದಿನಗಳ ವಶಕ್ಕೆ ಕೇಳಿದ್ದರು ಆದರೆ 12 ದಿನ ಪೊಲೀಸರ ವಶಕ್ಕೆ ನೀಡಿ ಮೈಸೂರಿನ ಜೆಎಂಎಫ್‌ಸಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಡಿಸಿಪಿ ಮುತ್ತುರಾಜ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದ್ದು, ತನಿಖೆ ಚುರುಕುಗೊಳಿಸಿರುವ ಪೊಲೀಸರು ಹಲವರ ವಿಚಾರಣೆ ನಡೆಸುತ್ತಿದ್ದಾರೆ.

ತುಂಬಾ ಫೇಮಸ್ ಆಗ್ಬೇಕು ಅಂತಾ ಪಾಪಿ ಹೀಗಾ ಮಾಡೋದು!? ಇನ್ನು ಯಾಕಪ್ಪಾ ನಿಮ್ಮ ಫ್ರೆಂಡ್ ಫರಾನ್ ಹೀಗೆ ಶಾಸಕ ತನ್ವೀರ್​ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಏನು ಕಾರಣ ಇರಬಹುದು ಅಂತಾ ಹೇಳಿ ಎಂದು ಆರೋಪಿ ಫರಾನ್​ನ ಗೆಳೆಯರನ್ನು ಪೊಲೀಸರು ರುಬ್ಬಿದ್ದಕ್ಕೆ ಗಣ್ಯರನ್ನ ಕೊಲೆ ಮಾಡಿ ಹೆಸರು ಮಾಡ್ತೀನಿ ಅಂತಾ ಹೇಳ್ತಿದ್ನಂತೆ. ಹಾಗಾಗಿ ಹಲ್ಲೆ ಮಾಡಿದ್ದಾನೆ ಎಂದಿದ್ದಾರೆ. ಆರೋಪಿ ಫರಾನ್ ತನ್ನ ಆಸೆಯನ್ನ ಆಪ್ತರು ಹಾಗೂ ಗೆಳೆಯರೊಂದಿಗೆ ಹೇಳಿಕೊಂಡಿದ್ದನಂತೆ.

ಫರಾನ್‌ಗೆ ಇತ್ತಿಚಿಗೆ ಹೆಸರು ಮಾಡುವ ಹುಚ್ಚು ಹಿಡಿದಿತ್ತು. ತುಂಬಾ ಫೇಮಸ್ ಆಗ್ಬೇಕು ಅಂತ ಹೇಳ್ತಿದ್ದ. ನಮ್ಮ‌ ಜೊತೆನು ವಿಐಪಿ ಒಬ್ಬರನ್ನ ಕೊಲೆ ಮಾಡಿ ಫೇಮಸ್ ಆಗ್ತಿನಿ ಅಂತಿದ್ದ. ಆದ್ರೆ ಯಾರು ಆ ವಿಐಪಿ ಯಾವಾಗ ಮಾಡ್ತಾನೆ ಅಂತ ಹೇಳಿರಲಿಲ್ಲ. ಆತ ತಮಾಷೆಗೆ ಹೇಳ್ತಾನೆ ಅಂತ ಅಂದುಕೊಂಡಿದ್ದೆವು ಅಂತಾ ಪೊಲೀಸರಿಗೆ ಗೆಳೆಯರು ಮಾಹಿತಿ ನೀಡಿದ್ದಾರೆ. ತನ್ವೀರ್ ಸೇಠ್ ಮೇಲಿನ ಕೊಲೆ‌ಯತ್ನ ಕಂಡು ಫರಾನ್ ಗೆಳೆಯರು ದಿಗ್ಬ್ರಾಂತರಾಗಿದ್ದಾರೆ.

ಕರ್ತವ್ಯಲೋಪ ಹಿನ್ನೆಲೆ ಸೇಠ್ ಗನ್‌ಮ್ಯಾನ್ ಅಮಾನತು: ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ಕೇಸ್​​ನಲ್ಲಿ ಕರ್ತವ್ಯಲೋಪವೆಸಗಿರುವ ಸೇಠ್ ಗನ್‌ಮ್ಯಾನ್​ ಫಿರೋಜ್ ಖಾನ್​ ಅವರನ್ನು ಸೇವೆಯಿಂದ ಸಸ್ಪೆಂಡ್ ಮಾಡಲಾಗಿದೆ. ಈ ಸಂಬಂಧ, ಮೈಸೂರು ನಗರ ಪೊಲೀಸ್ ಆಯುಕ್ತರು CAR ಪೊಲೀಸ್ ಪೇದೆಯಾಗಿರುವ ಫಿರೋಜ್ ಅವರನ್ನು ಅಮಾನತು ಮಾಡಿ ಆದೇಶ ನೀಡಿದ್ದಾರೆ.

Published On - 9:06 am, Tue, 19 November 19

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ