AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗ್ರಾ: ಕೋಚಿಂಗ್​ ಸೆಂಟರ್ ಎದುರು ಶಿಕ್ಷಕರ ಮೇಲೆ ಗುಂಡು ಹಾರಿಸಿದ ವಿದ್ಯಾರ್ಥಿಗಳು

ಗುರುವನ್ನು ದೇವರಂತೆ ಕಾಣಬೇಕು ಎಂಬುದನ್ನು ಪ್ರತಿಮನೆಯಲ್ಲೂ ಪೋಷಕರು ತಮ್ಮ ಮಕ್ಕಳಿಗೆ ಹೇಳಿಕೊಡುತ್ತಾರೆ. ಮಕ್ಕಳಿಗೆ ಪೋಷಕರ ಮಾತಿಗಿಂತಲೂ ಶಿಕ್ಷಕರು ಹೇಳಿದ್ದಾರೆಂದರೆ ಚಾಚೂ ತಪ್ಪದೆ ಆ ಕೆಲಸವನ್ನು ಮಾಡುತ್ತಾರೆ. ಶಿಕ್ಷಕರ ಮೇಲೆ ಅಷ್ಟು ಗೌರವವಿರುತ್ತದೆ. ಆದರೆ ಆಗ್ರಾದ ಕೋಚಿಂಗ್ ಸೆಂಟರ್​ನ ಶಿಕ್ಷಕರೊಬ್ಬರ ಮೇಲೆ ಇಬ್ಬರು ವಿದ್ಯಾರ್ಥಿಗಳು ಗುಂಡು ಹಾರಿಸಿರುವ ಘಟನೆ ನಡೆದಿದೆ. ಅಲ್ಲೇ ಇದ್ದ ಜನರು ತರಾತುರಿಯಲ್ಲಿ ಶಿಕ್ಷಕರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆಗ್ರಾ: ಕೋಚಿಂಗ್​ ಸೆಂಟರ್ ಎದುರು ಶಿಕ್ಷಕರ ಮೇಲೆ ಗುಂಡು ಹಾರಿಸಿದ ವಿದ್ಯಾರ್ಥಿಗಳು
ಶಿಕ್ಷಕ
ನಯನಾ ರಾಜೀವ್
|

Updated on: Oct 06, 2023 | 11:10 AM

Share

ಗುರುವನ್ನು ದೇವರಂತೆ ಕಾಣಬೇಕು ಎಂಬುದನ್ನು ಪ್ರತಿಮನೆಯಲ್ಲೂ ಪೋಷಕರು ತಮ್ಮ ಮಕ್ಕಳಿಗೆ ಹೇಳಿಕೊಡುತ್ತಾರೆ. ಮಕ್ಕಳಿಗೆ ಪೋಷಕರ ಮಾತಿಗಿಂತಲೂ ಶಿಕ್ಷಕರು ಹೇಳಿದ್ದಾರೆಂದರೆ ಚಾಚೂ ತಪ್ಪದೆ ಆ ಕೆಲಸವನ್ನು ಮಾಡುತ್ತಾರೆ. ಶಿಕ್ಷಕರ ಮೇಲೆ ಅಷ್ಟು ಗೌರವವಿರುತ್ತದೆ. ಆದರೆ ಆಗ್ರಾದ ಕೋಚಿಂಗ್ ಸೆಂಟರ್​ನ ಶಿಕ್ಷಕರೊಬ್ಬರ ಮೇಲೆ ಇಬ್ಬರು ವಿದ್ಯಾರ್ಥಿಗಳು ಗುಂಡು ಹಾರಿಸಿರುವ ಘಟನೆ ನಡೆದಿದೆ. ಅಲ್ಲೇ ಇದ್ದ ಜನರು ತರಾತುರಿಯಲ್ಲಿ ಶಿಕ್ಷಕರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಇದಾದ ನಂತರ ಆರೋಪಿ ವಿದ್ಯಾರ್ಥಿಗಳು ಶಿಕ್ಷಕರಿಗೆ ಬೆದರಿಕೆ ಹಾಕುವ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಂದು ಗುಂಡು ಹಾರಿಸಿದ್ದೇವೆ ಅಷ್ಟೆ, ಇನ್ನೂ 39 ಬಾಕಿ ಇದೆ ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ. ವಿಡಿಯೋವನ್ನು ಗಮನಿಸಿದ ಆಗ್ರಾ ಪೊಲೀಸರು ಆರೋಪಿ ವಿದ್ಯಾರ್ಥಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಆಗ್ರಾದ ಖಂಡೌಲಿ ತಹಸಿಲ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಮಾಲುಪುರ ನಿವಾಸಿ ಸುಮಿತ್ ರಾಮಸ್ವರೂಪ್ ಶಾಲೆಯಲ್ಲಿ ಶಿಕ್ಷಕರಾಗಿದ್ದಾರೆ. ಶಾಲೆಯನ್ನು ಮುಗಿಸಿ ಅವರು ಕೋಚಿಂಗ್ ಸೆಂಟರ್​ನಲ್ಲಿ ತರಗತಿ ನಡೆಸುತ್ತಾರೆ. ಇದಕ್ಕಾಗಿ ಖಂದೌಲಿಯಲ್ಲಿಯೇ ಸ್ವಂತ ಕೋಚಿಂಗ್ ಸೆಂಟರ್ ತೆರೆದಿದ್ದಾರೆ. ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮಕ್ಕಳಿಗೆ ಪಾಠ ಮಾಡುತ್ತಿದ್ದರು ಎಂದು ಸುಮಿತ್ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಮೆಡಿಕಲ್ ಸೀಟ್ ಕೊಡಿಸುವ ಆಮಿಷವೊಡ್ಡಿ ಬೆಂಗಳೂರಿನಲ್ಲಿ ಮೈಸೂರು ವಿದ್ಯಾರ್ಥಿಗೆ ವಂಚನೆ

ಅಷ್ಟರಲ್ಲಿ ಅವರ ಇಬ್ಬರು ಹಳೆ ವಿದ್ಯಾರ್ಥಿಗಳು ಬೈಕ್ ನಲ್ಲಿ ಬಂದಿದ್ದು, ಒಬ್ಬರು ಶಿಕ್ಷಕರನ್ನು ಕರೆದಿದ್ದರು. ಹೊರಗೆ ಬಂದ ತಕ್ಷಣ ವಿದ್ಯಾರ್ಥಿಯೊಬ್ಬ ಬಂದೂಕು ತೆಗೆದು ಶಿಕ್ಷಕರ ಕಾಲಿಗೆ ಗುಂಡು ಹಾರಿಸಿದ. ಗುಂಡು ಅವರ ಕಾಲನ್ನು ತೂರಿಕೊಂಡು ಹೊರಬಂದಿತ್ತು. ಗುಂಡಿನ ಶಬ್ದ ಕೇಳಿ ಅಕ್ಕಪಕ್ಕದವರು ಸ್ಥಳಕ್ಕೆ ಆಗಮಿಸಿ ಪೊಲೀಸರಿಗೆ ಮಾಹಿತಿ ನೀಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

ಆರೋಪಿ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರ ಪ್ರಕಾರ ಇಬ್ಬರೂ ವಿದ್ಯಾರ್ಥಿಗಳು ಅಪ್ರಾಪ್ತರು. ಸದ್ಯ ಅವರಿಗಾಗಿ ಶೋಧ ನಡೆಸಲಾಗುತ್ತಿದೆ.

ಆರೋಪಿ ವಿದ್ಯಾರ್ಥಿಗಳ ಸಾಮಾಜಿಕ ಜಾಲತಾಣ ಖಾತೆಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿ ವಿದ್ಯಾರ್ಥಿಗಳು ಈ ಬೆದರಿಕೆಯ ವಿಡಿಯೋವನ್ನು ತಮ್ಮ ಖಾತೆಯಿಂದ ವೈರಲ್ ಮಾಡಿದ್ದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ