ಕಂಠಪೂರ್ತಿ ಕುಡಿದು ಸ್ನೇಹಿತನ‌ ಪತ್ನಿ ಮೇಲೆ ರೇಪ್​ಗೆ ಯತ್ನ, ಟೆಕ್ಕಿ ಅರೆಸ್ಟ್

ಬೆಂಗಳೂರು: ಸ್ನೇಹಿತನ‌ ಪತ್ನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಟೆಕ್ಕಿ ನಿಲಬ್ ನಯನ್​ನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಕಸುವನಹಳ್ಳಿಯ ಕ್ರೀಡಾ ಕಾಂಪ್ಲೆಕ್ಸ್​ನಲ್ಲಿ ಭಾನುವಾರ ಬರ್ತ್​ಡೇ ಪಾರ್ಟಿ ಆಚರಿಸಲು ಸ್ನೇಹಿತರೆಲ್ಲರು ಸೇರಿದ್ದರು. ಪಾರ್ಟಿ ಆಚರಿಸಿ ಕಂಠ ಪೂರ್ತಿ ಕುಡಿದು ನೀಲಬ್ ನಯನ್ ಶೌಚಾಲಯಕ್ಕೆ ತೆರಳಿದ್ದಾನೆ. ಈ ವೇಳೆ ಶೌಚಾಲಯದ ಪಕ್ಕದ ರೂಮ್‌ನಲ್ಲಿ ಮಲಗಿದ್ದ ಸ್ನೇಹಿತನ ಪತ್ನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆರೋಪಿಯಿಂದ ತಪ್ಪಿಸಿಕೊಂಡು ಮಹಿಳೆ ಕಿರುಚಾಡಿದ್ದಾಳೆ. ಸಂತ್ರಸ್ತ ಮಹಿಳೆಯ‌ ಪತಿ ಹಾಗೂ ಸ್ನೇಹಿತರು ಹಿಡಿಯಲು ಯತ್ನಿಸಿದಾಗ ಆರೋಪಿ ನೀಲಬ್ ಪರಾರಿಯಾಗಿದ್ದಾನೆ. ಬಳಿಕ […]

ಕಂಠಪೂರ್ತಿ ಕುಡಿದು ಸ್ನೇಹಿತನ‌ ಪತ್ನಿ ಮೇಲೆ ರೇಪ್​ಗೆ ಯತ್ನ, ಟೆಕ್ಕಿ ಅರೆಸ್ಟ್
ಸಾಧು ಶ್ರೀನಾಥ್​

Updated on: Nov 27, 2019 | 11:51 AM

ಬೆಂಗಳೂರು: ಸ್ನೇಹಿತನ‌ ಪತ್ನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಟೆಕ್ಕಿ ನಿಲಬ್ ನಯನ್​ನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ.

ಕಸುವನಹಳ್ಳಿಯ ಕ್ರೀಡಾ ಕಾಂಪ್ಲೆಕ್ಸ್​ನಲ್ಲಿ ಭಾನುವಾರ ಬರ್ತ್​ಡೇ ಪಾರ್ಟಿ ಆಚರಿಸಲು ಸ್ನೇಹಿತರೆಲ್ಲರು ಸೇರಿದ್ದರು. ಪಾರ್ಟಿ ಆಚರಿಸಿ ಕಂಠ ಪೂರ್ತಿ ಕುಡಿದು ನೀಲಬ್ ನಯನ್ ಶೌಚಾಲಯಕ್ಕೆ ತೆರಳಿದ್ದಾನೆ. ಈ ವೇಳೆ ಶೌಚಾಲಯದ ಪಕ್ಕದ ರೂಮ್‌ನಲ್ಲಿ ಮಲಗಿದ್ದ ಸ್ನೇಹಿತನ ಪತ್ನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಆರೋಪಿಯಿಂದ ತಪ್ಪಿಸಿಕೊಂಡು ಮಹಿಳೆ ಕಿರುಚಾಡಿದ್ದಾಳೆ. ಸಂತ್ರಸ್ತ ಮಹಿಳೆಯ‌ ಪತಿ ಹಾಗೂ ಸ್ನೇಹಿತರು ಹಿಡಿಯಲು ಯತ್ನಿಸಿದಾಗ ಆರೋಪಿ ನೀಲಬ್ ಪರಾರಿಯಾಗಿದ್ದಾನೆ. ಬಳಿಕ ಬೆಳ್ಳಂದೂರು ಪೊಲೀಸ್ ಠಾಣೆಗೆ ಸಂತ್ರಸ್ತ ಮಹಿಳೆಯ ಪತಿ ದೂರು ನೀಡಿದ್ದರು. ಈ ದೂರಿನನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us