AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಆಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ವಿಷ ಸೇವಿಸಿ ಅಪ್ರಾಪ್ತ ಯುವತಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ಲವ್, ಸೆಕ್ಸ್, ದೋಖಾಗೆ ಅಪ್ರಾಪ್ತ ಯುವತಿ ಇಲಿ ಪಾಷಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಸದ್ಯ ಆರೋಪಿ ಯುವಕ ಪರಾರಿಯಾಗಿದ್ದಾನೆ. ಬೆಳ್ತಂಗಡಿ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಮದುವೆ ಆಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ವಿಷ ಸೇವಿಸಿ ಅಪ್ರಾಪ್ತ ಯುವತಿ ಸಾವು
ಮದುವೆ ಆಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ವಿಷ ಸೇವಿಸಿ ಅಪ್ರಾಪ್ತ ಯುವತಿ ಸಾವು
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Nov 28, 2024 | 9:42 PM

Share

ಮಂಗಳೂರು, ನವೆಂಬರ್​ 28: ಆಕೆ 17 ವರ್ಷದ ಅಪ್ರಾಪ್ತ ಯುವತಿ (girl). ಹದಿಹರೆಯದ ವಯಸ್ಸಿನಲ್ಲಿ ನನಗೂ ಒಬ್ಬ ಗೆಳೆಯ ಬೇಕು ಅಂತಾ ಅವಳಿಗೂ ಅನ್ನಿಸಿತ್ತು. ಮೊಬೈಲ್ ಮೂಲಕ ಕೆಲವೇ ತಿಂಗಳ ಪರಿಚಯವಾಗಿದ್ದ ಯುವಕನ ಜೊತೆ ಪ್ರೇಮದ ಬಲೆಗೆ ಬಿದ್ದಿದ್ದ ಯುವತಿ ಇದೀಗ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ನಡೆದಿದೆ.

ಯುವಕನ ಮೋಸಕ್ಕೆ ಯುವತಿ ಸಾವು

ಈ ಹದಿಹರೆಯದ ವಯಸ್ಸು ಅನ್ನೋದು ತುಂಬಾ ಡೇಂಜರ್. ಈ ವಯಸ್ಸಿನಲ್ಲಿ ಮನಸ್ಸು ಕೇಳೋ ವಿಚಿತ್ರ ಆಸೆ ಕೆಲವೊಮ್ಮೆ ಜೀವನವನ್ನೇ ತೆಗೆದುಬಿಡುತ್ತದೆ. ವಯಸ್ಸಲ್ಲದ ವಯಸ್ಸಿನಲ್ಲಿ ಪ್ರೇಮದ ಪಾಶಕ್ಕೆ ಸಿಲುಕಿದ ಚಿಗುರು ಈಗ ಬಾಡಿ ಹೋಗಿದೆ. ಕೆಲವೇ ತಿಂಗಳೊಳಗೆ ಪರಿಚಯವಾದ ಯುವಕ ತನಗೆ ಮೋಸ ಮಾಡಿದ ಅಂತಾ ಅಪ್ರಾಪ್ತ ಯುವತಿ ಈಗ ಸಾವಿಗೆ ಶರಾಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಸರಣಿ ಅಪಘಾತ: 20ಕ್ಕೂ ಹೆಚ್ಚು ಜನರಿಗೆ ಗಾಯ

ಯುವತಿಗೆ ತನ್ನ ಸಂಬಂಧಿ ಚಾರ್ಮಾಡಿ ಗ್ರಾಮದ ಪ್ರವೀಣ್ ಗೌಡ ಎಂಬಾತನ ಜೊತೆಗೆ ಲವ್ ಆಗಿದೆ. ಮೊಬೈಲ್ ಮೂಲಕವೇ ಪ್ರೀತಿಯನ್ನು ಗಟ್ಟಿಗೊಳಿಸಿದ ಯುವತಿ ಮುಂದೆ ಅವನನ್ನೇ ಅರ್ಧಾಂಗಿ ಎಂದು ಸ್ವೀಕರಿಸಿದ್ದಾಳೆ. ಪ್ರವೀಣನೂ ಬೆಂಗಳೂರಿನಲ್ಲಿ ಮೆಕ್ಯಾನಿಕ್ ಆಗಿದ್ದು, ಊರಿಗೆ ಬಂದಾಗ ಮೀಟ್ ಮಾಡುತ್ತಿದ್ದ. ಕೆಲವೇ ತಿಂಗಳ ಲವ್​ನಲ್ಲಿ ಇವರಿಬ್ಬರ ಬಾಂಧವ್ಯ ಕೂಡ ಗಟ್ಟಿಯಾಗಿತ್ತು. ಕೇವಲ ಎಂಟು ತಿಂಗಳ ಪ್ರೇಮದಲ್ಲಿ ದೈಹಿಕ ಸಂಪರ್ಕವನ್ನೂ ಬೆಳೆಸಿದ್ದರು.

ಈ ಸಂದರ್ಭದಲ್ಲಿ ಯುವತಿಗೆ ಪ್ರವೀಣ ಗರ್ಭ ನಿರೋಧಕ ಮಾತ್ರೆಯನ್ನು ನೀಡಿದ್ದಾನೆ. ಯುವತಿ ಮನೆಯವರು ವಯಸ್ಸು ಪೂರ್ತಿಯಾದಾಗ ಮದುವೆ ಮಾಡಿ ಕೊಡೋದಾಗಿ ಹೇಳಿದ್ದಾರೆ. ಪ್ರೀತಿ ಸಾಗುತ್ತಿದ್ದಾಗ ಪ್ರವೀಣ್​ಗೆ ಯಾಕೋ ಈಕೆಗೆ ಜೊತೆಗಿನ ಸಾಂಗತ್ಯ ಬೋರ್ ಎನಿಸಿದೆ. ದೂರ ಆಗೋಣ ಬ್ರೇಕಪ್ ಅಂತಾ ಹೇಳಿದ್ದಾನೆ. ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದ ಪ್ರವೀಣ ಕೈ ಕೊಡುತ್ತಿರೋದನ್ನು ಸಹಿಸಲಾಗದೆ ಯುವತಿ ಇಲಿ ಪಾಶಣ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇಲಿ ಪಾಶಣ ತೆಗೆದುಕೊಂಡು ಸಾವು

ನವೆಂಬರ್ 20ರಂದು ಇಲಿ ಪಾಶಣವನ್ನು ತೆಗೆದುಕೊಂಡಿದ್ದು, ಕೂಡಲೇ ಮನೆಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳೂರು ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದ ಯುವತಿ ನವೆಂಬರ್ 26 ರ ಮಂಗಳವಾರ ಸಾವನ್ನಪ್ಪಿದ್ದಾಳೆ. ಪ್ರವೀಣ್ ಯುವತಿಯ ತಾಯಿ ಬಳಿ ಈ ಹಿಂದೆಯೇ ದೇವರ ಆಣೆ ಹಾಕಿ ಆಕೆಯನ್ನೇ ಮದುವೆಯಾಗೋದಾಗಿ ಹೇಳಿದ್ದಾನೆ. ಪ್ರವೀಣನ ಮಾತನ್ನು ನಂಬಿ ಯುವತಿಯ ತಾಯಿಯೂ ಪ್ರವೀಣನ ಜೊತೆಗೆ ತಿರುಗಾಡೋಕೆ ಅನುಮತಿ ನೀಡಿದ್ದಾರೆ‌. ನವೆಂಬರ್ ಇಪ್ಪತ್ತರ ಮಧ್ಯರಾತ್ರಿ ವಾಂತಿ ಮಾಡಿಕೊಂಡಾಗಲೂ ಯುವತಿ ತಾಯಿಯ ಜೊತೆ ಪ್ರವೀಣನಿಂದ ಆದ ಮೋಸದ ಬಗ್ಗೆ ಹೇಳಿಕೊಂಡಿದ್ದಾಳೆ. ಅಲ್ಲದೇ ಪ್ರವೀಣ್ ತನ್ನನ್ನು ಬಳಸಿಕೊಂಡೊರೋದಾಗಿ ಹೇಳಿದ್ದಾಳೆ. ಇತ್ತ ಯುವತಿ ಸಾವನ್ನಪ್ಪುತ್ತಲೇ ಆರೋಪಿ ಪ್ರವೀಣ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಪುತ್ತೂರಿನಲ್ಲೊಂದು ಅಮಾನವೀಯ ಘಟನೆ: ಮೃತ ಕಾರ್ಮಿಕನ ಶವ ರಸ್ತೆ ಬದಿ ಮಲಗಿಸಿ ಹೋದ ಮಾಲೀಕ

ಒಟ್ಟಿನ್ನಲ್ಲಿ ಪಾಪಿ ಪ್ರಿಯತಮ, ಪ್ರೀತಿ ಪ್ರೇಮ ಅಂತಾ ಸುತ್ತಾಡಿ ಯುವತಿಯನ್ನು ಬಳಸಿ ಕೈ‌ಬಿಟ್ಟಿದ್ದಾನೆ. ಪ್ರೀತಿಯೇ ನನ್ನುಸಿರು ಅಂತಾ ಪ್ರೀತಿಯ ಪಾಶಕ್ಕೆ ಸಿಲುಕಿದ ಯುವತಿ ಈಗ ಉಸಿರು ಚೆಲ್ಲಿದ್ದು ದುರಂತ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ