ಮದುವೆ ಆಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ವಿಷ ಸೇವಿಸಿ ಅಪ್ರಾಪ್ತ ಯುವತಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ಲವ್, ಸೆಕ್ಸ್, ದೋಖಾಗೆ ಅಪ್ರಾಪ್ತ ಯುವತಿ ಇಲಿ ಪಾಷಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಸದ್ಯ ಆರೋಪಿ ಯುವಕ ಪರಾರಿಯಾಗಿದ್ದಾನೆ. ಬೆಳ್ತಂಗಡಿ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಮದುವೆ ಆಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ವಿಷ ಸೇವಿಸಿ ಅಪ್ರಾಪ್ತ ಯುವತಿ ಸಾವು
ಮದುವೆ ಆಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ವಿಷ ಸೇವಿಸಿ ಅಪ್ರಾಪ್ತ ಯುವತಿ ಸಾವು
Edited By:

Updated on: Nov 28, 2024 | 9:42 PM

ಮಂಗಳೂರು, ನವೆಂಬರ್​ 28: ಆಕೆ 17 ವರ್ಷದ ಅಪ್ರಾಪ್ತ ಯುವತಿ (girl). ಹದಿಹರೆಯದ ವಯಸ್ಸಿನಲ್ಲಿ ನನಗೂ ಒಬ್ಬ ಗೆಳೆಯ ಬೇಕು ಅಂತಾ ಅವಳಿಗೂ ಅನ್ನಿಸಿತ್ತು. ಮೊಬೈಲ್ ಮೂಲಕ ಕೆಲವೇ ತಿಂಗಳ ಪರಿಚಯವಾಗಿದ್ದ ಯುವಕನ ಜೊತೆ ಪ್ರೇಮದ ಬಲೆಗೆ ಬಿದ್ದಿದ್ದ ಯುವತಿ ಇದೀಗ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ನಡೆದಿದೆ.

ಯುವಕನ ಮೋಸಕ್ಕೆ ಯುವತಿ ಸಾವು

ಈ ಹದಿಹರೆಯದ ವಯಸ್ಸು ಅನ್ನೋದು ತುಂಬಾ ಡೇಂಜರ್. ಈ ವಯಸ್ಸಿನಲ್ಲಿ ಮನಸ್ಸು ಕೇಳೋ ವಿಚಿತ್ರ ಆಸೆ ಕೆಲವೊಮ್ಮೆ ಜೀವನವನ್ನೇ ತೆಗೆದುಬಿಡುತ್ತದೆ. ವಯಸ್ಸಲ್ಲದ ವಯಸ್ಸಿನಲ್ಲಿ ಪ್ರೇಮದ ಪಾಶಕ್ಕೆ ಸಿಲುಕಿದ ಚಿಗುರು ಈಗ ಬಾಡಿ ಹೋಗಿದೆ. ಕೆಲವೇ ತಿಂಗಳೊಳಗೆ ಪರಿಚಯವಾದ ಯುವಕ ತನಗೆ ಮೋಸ ಮಾಡಿದ ಅಂತಾ ಅಪ್ರಾಪ್ತ ಯುವತಿ ಈಗ ಸಾವಿಗೆ ಶರಾಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ: ಮಂಗಳೂರಿನಲ್ಲಿ ಸರಣಿ ಅಪಘಾತ: 20ಕ್ಕೂ ಹೆಚ್ಚು ಜನರಿಗೆ ಗಾಯ

ಯುವತಿಗೆ ತನ್ನ ಸಂಬಂಧಿ ಚಾರ್ಮಾಡಿ ಗ್ರಾಮದ ಪ್ರವೀಣ್ ಗೌಡ ಎಂಬಾತನ ಜೊತೆಗೆ ಲವ್ ಆಗಿದೆ. ಮೊಬೈಲ್ ಮೂಲಕವೇ ಪ್ರೀತಿಯನ್ನು ಗಟ್ಟಿಗೊಳಿಸಿದ ಯುವತಿ ಮುಂದೆ ಅವನನ್ನೇ ಅರ್ಧಾಂಗಿ ಎಂದು ಸ್ವೀಕರಿಸಿದ್ದಾಳೆ. ಪ್ರವೀಣನೂ ಬೆಂಗಳೂರಿನಲ್ಲಿ ಮೆಕ್ಯಾನಿಕ್ ಆಗಿದ್ದು, ಊರಿಗೆ ಬಂದಾಗ ಮೀಟ್ ಮಾಡುತ್ತಿದ್ದ. ಕೆಲವೇ ತಿಂಗಳ ಲವ್​ನಲ್ಲಿ ಇವರಿಬ್ಬರ ಬಾಂಧವ್ಯ ಕೂಡ ಗಟ್ಟಿಯಾಗಿತ್ತು. ಕೇವಲ ಎಂಟು ತಿಂಗಳ ಪ್ರೇಮದಲ್ಲಿ ದೈಹಿಕ ಸಂಪರ್ಕವನ್ನೂ ಬೆಳೆಸಿದ್ದರು.

ಈ ಸಂದರ್ಭದಲ್ಲಿ ಯುವತಿಗೆ ಪ್ರವೀಣ ಗರ್ಭ ನಿರೋಧಕ ಮಾತ್ರೆಯನ್ನು ನೀಡಿದ್ದಾನೆ. ಯುವತಿ ಮನೆಯವರು ವಯಸ್ಸು ಪೂರ್ತಿಯಾದಾಗ ಮದುವೆ ಮಾಡಿ ಕೊಡೋದಾಗಿ ಹೇಳಿದ್ದಾರೆ. ಪ್ರೀತಿ ಸಾಗುತ್ತಿದ್ದಾಗ ಪ್ರವೀಣ್​ಗೆ ಯಾಕೋ ಈಕೆಗೆ ಜೊತೆಗಿನ ಸಾಂಗತ್ಯ ಬೋರ್ ಎನಿಸಿದೆ. ದೂರ ಆಗೋಣ ಬ್ರೇಕಪ್ ಅಂತಾ ಹೇಳಿದ್ದಾನೆ. ಜೀವಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದ ಪ್ರವೀಣ ಕೈ ಕೊಡುತ್ತಿರೋದನ್ನು ಸಹಿಸಲಾಗದೆ ಯುವತಿ ಇಲಿ ಪಾಶಣ ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇಲಿ ಪಾಶಣ ತೆಗೆದುಕೊಂಡು ಸಾವು

ನವೆಂಬರ್ 20ರಂದು ಇಲಿ ಪಾಶಣವನ್ನು ತೆಗೆದುಕೊಂಡಿದ್ದು, ಕೂಡಲೇ ಮನೆಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳೂರು ಆಸ್ಪತ್ರೆಯಲ್ಲಿ ಜೀವನ್ಮರಣ ಸ್ಥಿತಿಯಲ್ಲಿದ್ದ ಯುವತಿ ನವೆಂಬರ್ 26 ರ ಮಂಗಳವಾರ ಸಾವನ್ನಪ್ಪಿದ್ದಾಳೆ. ಪ್ರವೀಣ್ ಯುವತಿಯ ತಾಯಿ ಬಳಿ ಈ ಹಿಂದೆಯೇ ದೇವರ ಆಣೆ ಹಾಕಿ ಆಕೆಯನ್ನೇ ಮದುವೆಯಾಗೋದಾಗಿ ಹೇಳಿದ್ದಾನೆ. ಪ್ರವೀಣನ ಮಾತನ್ನು ನಂಬಿ ಯುವತಿಯ ತಾಯಿಯೂ ಪ್ರವೀಣನ ಜೊತೆಗೆ ತಿರುಗಾಡೋಕೆ ಅನುಮತಿ ನೀಡಿದ್ದಾರೆ‌. ನವೆಂಬರ್ ಇಪ್ಪತ್ತರ ಮಧ್ಯರಾತ್ರಿ ವಾಂತಿ ಮಾಡಿಕೊಂಡಾಗಲೂ ಯುವತಿ ತಾಯಿಯ ಜೊತೆ ಪ್ರವೀಣನಿಂದ ಆದ ಮೋಸದ ಬಗ್ಗೆ ಹೇಳಿಕೊಂಡಿದ್ದಾಳೆ. ಅಲ್ಲದೇ ಪ್ರವೀಣ್ ತನ್ನನ್ನು ಬಳಸಿಕೊಂಡೊರೋದಾಗಿ ಹೇಳಿದ್ದಾಳೆ. ಇತ್ತ ಯುವತಿ ಸಾವನ್ನಪ್ಪುತ್ತಲೇ ಆರೋಪಿ ಪ್ರವೀಣ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಪುತ್ತೂರಿನಲ್ಲೊಂದು ಅಮಾನವೀಯ ಘಟನೆ: ಮೃತ ಕಾರ್ಮಿಕನ ಶವ ರಸ್ತೆ ಬದಿ ಮಲಗಿಸಿ ಹೋದ ಮಾಲೀಕ

ಒಟ್ಟಿನ್ನಲ್ಲಿ ಪಾಪಿ ಪ್ರಿಯತಮ, ಪ್ರೀತಿ ಪ್ರೇಮ ಅಂತಾ ಸುತ್ತಾಡಿ ಯುವತಿಯನ್ನು ಬಳಸಿ ಕೈ‌ಬಿಟ್ಟಿದ್ದಾನೆ. ಪ್ರೀತಿಯೇ ನನ್ನುಸಿರು ಅಂತಾ ಪ್ರೀತಿಯ ಪಾಶಕ್ಕೆ ಸಿಲುಕಿದ ಯುವತಿ ಈಗ ಉಸಿರು ಚೆಲ್ಲಿದ್ದು ದುರಂತ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us