ಇವನೆಂಥಾ ಮಗ: ಮದುವೆಗೆ ಸೂಕ್ತ ಹುಡುಗಿ ಹುಡಕಲು ಸಾಧ್ಯವಾಗಿಲ್ಲ ಎಂದು ತಾಯಿಯನ್ನೇ ಕೊಂದು ಕೈಕಾಲು ಕತ್ತರಿಸಿದ ಮಗ

ಮದುವೆ ಸೂಕ್ತ ಹಡುಗಿಯನ್ನು ಹುಡುಕಲು ಸಾಧ್ಯವಾಗಿಲ್ಲ ಎನ್ನುವ ಕೋಪಕ್ಕೆ ಮಗನೊಬ್ಬ ತಾಯಿಯನ್ನೇ ಕೊಲೆ ಮಾಡಿರವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಿದ್ದಿಪೇಟೆ ಜಿಲ್ಲೆಯಲ್ಲಿ 45 ವರ್ಷದ ಮಹಿಳೆಯನ್ನು ಆಕೆಯ ಮಗ ತನ್ನ ಮದುವೆಗೆ ಸೂಕ್ತ ಜೋಡಿ ಹುಡುಕಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಮಧ್ಯರಾತ್ರಿ ಜಿಲ್ಲೆಯ ಬಂಡಾ ಮೈಲಾರಂ ಗ್ರಾಮದ ಮಹಿಳೆಯ ನಿವಾಸದಲ್ಲಿ ಈ ಘಟನೆ ನಡೆದಿದೆ.

ಇವನೆಂಥಾ ಮಗ: ಮದುವೆಗೆ ಸೂಕ್ತ ಹುಡುಗಿ ಹುಡಕಲು ಸಾಧ್ಯವಾಗಿಲ್ಲ ಎಂದು ತಾಯಿಯನ್ನೇ ಕೊಂದು ಕೈಕಾಲು ಕತ್ತರಿಸಿದ ಮಗ
ಸಾವು

Updated on: Aug 25, 2023 | 8:14 AM

ಮದುವೆ ಸೂಕ್ತ ಹಡುಗಿಯನ್ನು ಹುಡುಕಲು ಸಾಧ್ಯವಾಗಿಲ್ಲ ಎನ್ನುವ ಕೋಪಕ್ಕೆ ಮಗನೊಬ್ಬ ತಾಯಿಯನ್ನೇ ಕೊಲೆ ಮಾಡಿರವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಿದ್ದಿಪೇಟೆ ಜಿಲ್ಲೆಯಲ್ಲಿ 45 ವರ್ಷದ ಮಹಿಳೆಯನ್ನು ಆಕೆಯ ಮಗ ತನ್ನ ಮದುವೆಗೆ ಸೂಕ್ತ ಜೋಡಿ ಹುಡುಕಲು ಸಾಧ್ಯವಾಗಿಲ್ಲ ಎಂದು ಆರೋಪಿಸಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಮಧ್ಯರಾತ್ರಿ ಜಿಲ್ಲೆಯ ಬಂಡಾ ಮೈಲಾರಂ ಗ್ರಾಮದ ಮಹಿಳೆಯ ನಿವಾಸದಲ್ಲಿ ಈ ಘಟನೆ ನಡೆದಿದೆ.

ಕೊಲೆಗೆ ಸಂಬಂಧಿಸಿದಂತೆ ಮಹಿಳೆಯ ಮಗ ಮತ್ತು ಇನ್ನೊಬ್ಬ ಸಂಬಂಧಿಯನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದರು. ಮಹಿಳೆಯ ಮಗಳು ನೀಡಿದ ದೂರಿನ ಆಧಾರದ ಮೇಲೆ, ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಮತ್ತು ತನಿಖೆಯ ಸಂದರ್ಭದಲ್ಲಿ ಸಂತ್ರಸ್ತೆಯ ಮಗ ಮತ್ತು ಇನ್ನೊಬ್ಬ ಸಂಬಂಧಿ ಅಪರಾಧವನ್ನು ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಮೊದಲ ಪತ್ನಿಗೆ ವಿಚ್ಛೇದನ ನೀಡದೆ ಎರಡನೇ ಮದುವೆಗೆ ಮುಂದಾದ ವರ; ಮದುವೆ ಮಂಟಪದಲ್ಲೇ ಜಗಳ, ಕೇಸು ದಾಖಲು

ಮಹಿಳೆಯನ್ನು ಇಟ್ಟಿಗೆಯಿಂದ ಹೊಡೆದು ಕೊಂದು ಮತ್ತು ಪೊಲೀಸರನ್ನು ದಾರಿ ತಪ್ಪಿಸುವ ಸಲುವಾಗಿ ಅವರು ನಂತರ ಆಕೆಯ ಕತ್ತು ಸೀಳಿ ಕಾಲುಗಳನ್ನು ಕತ್ತರಿಸಿದ್ದಾರೆ. ಸಂತ್ರಸ್ತೆಯ ಮಗ ಲಾಭಕ್ಕಾಗಿ ಕೊಲೆ ಎಂದು ಬಿಂಬಿಸಲು ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us