AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನಾಭರಣ ವ್ಯಾಪಾರಿಯ ಕಾರಿನ ಕಿಟಕಿ ಒಡೆದು 10 ಲಕ್ಷ ನಗದು ಕಳವು, ಯಾವೂರಲ್ಲಿ?

ವ್ಯಾಪಾರಕ್ಕಾಗಿ ಹಣದ ಜೊತೆ ಮೈಸೂರಿಗೆ ಬಂದಿದ್ದ ವೇಳೆ ಈ ಕೃತ್ಯ ಎಸಗಿದ್ದಾರೆ. ಕಾರು ನಿಲ್ಲಿಸಿ ಬ್ಯಾಂಕ್‌ನಲ್ಲಿ ಸ್ಟೇಟ್‌ಮೆಂಟ್ ಪಡೆಯಲು ಹೋಗಿದ್ದ ವೇಳೆ ಕೈಚಳಕ ತೋರಿರುವ ಕಳ್ಳರು ಕಾರಿನ ಕಿಟಕಿ ಗಾಜು ಹೊಡೆದು ಕಳ್ಳತನ ಮಾಡಿದ್ದಾರೆ.

ಚಿನ್ನಾಭರಣ ವ್ಯಾಪಾರಿಯ ಕಾರಿನ ಕಿಟಕಿ ಒಡೆದು 10 ಲಕ್ಷ ನಗದು ಕಳವು, ಯಾವೂರಲ್ಲಿ?
ಪೃಥ್ವಿಶಂಕರ
| Edited By: |

Updated on: Nov 28, 2020 | 11:11 AM

Share

ಮೈಸೂರು: ಕಾರಿನ ಕಿಟಕಿ ಗಾಜು ಹೊಡೆದು ಚಿನ್ನ ಬೆಳ್ಳಿ ವ್ಯಾಪಾರಿಯ 10 ಲಕ್ಷ ಕಳವು ಮಾಡಿರುವ ಘಟನೆ ಮೈಸೂರಿನ ವಿವಿ ಪುರಂನಲ್ಲಿ ನಡೆದಿದೆ.

ಪಿರಿಯಾಪಟ್ಟಣದಲ್ಲಿ ಚಿನ್ನ ಬೆಳ್ಳಿ ವ್ಯಾಪಾರಿಯಾಗಿರುವ ಮನೋಜ್ ಕುಮಾರ್ ಅವರಿಗೆ ಸೇರಿದ ಹಣ ಕಳುವಾಗಿದ್ದು, ವ್ಯಾಪಾರಕ್ಕಾಗಿ ಹಣದ ಜೊತೆ ಮೈಸೂರಿಗೆ ಬಂದಿದ್ದ ವೇಳೆ ಈ ಕೃತ್ಯ ಎಸಗಿದ್ದಾರೆ.

ಕಾರು ನಿಲ್ಲಿಸಿ ಬ್ಯಾಂಕ್‌ನಲ್ಲಿ ಸ್ಟೇಟ್‌ಮೆಂಟ್ ಪಡೆಯಲು ಹೋಗಿದ್ದ ವೇಳೆ ಕೈಚಳಕ ತೋರಿರುವ ಕಳ್ಳರು ಕಾರಿನ ಕಿಟಕಿ ಗಾಜು ಹೊಡೆದು ಕಳ್ಳತನ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ವಿ ವಿ ಪುರಂ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.